ಮೈಸೂರು: ಮುಂಬರಲಿರುವ ವಿಧಾನಸಭಾ ಸಾರ್ವತ್ರಿಕ ಚುನಾವಣಾ ವೇಳೆ ಕಟ್ಟುನಿಟ್ಟಾಗಿ ಮಾದರಿ ನೀತಿ ಸಂಹಿತೆ ಅನುಷ್ಠಾನ ಮಾಡುವ ಸಂಬಂಧ ಮೈಸೂರು ಜಿಲ್ಲೆಯ ಗಡಿ ಭಾಗಗಳಲ್ಲಿ ಹೊಂದಿಕೊಂಡಿರುವ ಹೊರ ರಾಜ್ಯ ಜಿಲ್ಲೆಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಅವರು ವಚ್ರ್ಯುವಲ್ ಮೂಲಕ ಸಭೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಅಧಿಕಾರಿಗಳು ಹಾಗೂ ಗಡಿ ವ್ಯಾಪ್ತಿಯಲ್ಲಿ ಬರುವ ಅಂತರರಾಜ್ಯ ಕೇರಳದ ವೈನಾಡು ಜಿಲ್ಲೆಯ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ವರ್ಚುವೆಲ್ ಮೂಲಕ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ ಕೆ. ವಿ. ರಾಜೇಂದ್ರ ಅವರು ಬರಲಿರುವ ವಿಧಾನಸಭಾ ಚುನಾವಣೆಯನ್ನು ನ್ಯಾಯಸಮ್ಮತ, ಪಾರದರ್ಶಕ ಹಾಗೂ ಶಾತಿಯುತ ಮತದಾನಕ್ಕೆ ಅವಕಾಶ ಕಲ್ಪಿಸಲು ಕಟ್ಟುನಿಟ್ಟಾಗಿ ಮಾದರಿ ನೀತಿ ಸಂಹಿತೆ ಅನುಷ್ಠಾನಕ್ಕೆ ಕೈ ಜೋಡಿಸುವಂತೆ ತಿಳಿಸಿದರು.
ಮೈಸೂರು ಜಿಲ್ಲೆಯು ಕೇರಳ ರಾಜ್ಯದೊಂದಿಗೆ ಗಡಿ ಪ್ರದೇಶವನ್ನು ಹೊಂದಿದೆ. ಗಡಿ ಭಾಗದಲ್ಲಿ ಚೆಕ್ ಪೋಸ್ಟ್ ಗಳನ್ನು ಗುರುತಿಸಲಾಗಿದ್ದು, ಇದಕ್ಕಾಗಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಗಡಿ ಭಾಗಗಳ ಚೆಕ್ಪೋಸ್ಟ್ಗಳಲ್ಲಿ ರಾಜ್ಯಕ್ಕೆ ಬರುವ ಹಾಗೂ ಇಲ್ಲಿಂದ ಹೊರ ಹೋಗುವ ವಾಹನಗಳ ಮೇಲೆ ನಿಗಾ ಇಡಬೇಕಾಗುತ್ತದೆ. ಇದಕ್ಕಾಗಿ ಗಡಿ ಭಾಗದ ರಾಜ್ಯಗಳ ಗಡಿ ಜಿಲ್ಲೆಗಳಿಂದಲೂ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಚೆಕ್ ಪೋಸ್ಟ್ ಗಳಲ್ಲಿ 24*7 ಅವಧಿಯಲ್ಲಿಯೂ ಕಾರ್ಯ ನಿರ್ವಹಿಸಬೇಕಾಗುತ್ತದೆ. ಜಿಲ್ಲೆಯಿಂದ ನಿಯೋಜಿಸಲಾದ ನೋಡಲ್ ಅಧಿಕಾರಿಗಳೊಂದಿಗೆ ಹೊರ ಜಿಲ್ಲೆಗಳ ಅಧಿಕಾರಿಗಳು ಸಮನ್ವಯದಿಂದ ಕರ್ತವ್ಯ ಕೈಗೊಳ್ಳಬೇಕಾಗುತ್ತದೆ. ನೇಮಕ ಮಾಡಲಾಗುವ ಹೊರ ಜಿಲ್ಲೆಗಳ ಅಧಿಕಾರಿಗಳ ಮಾಹಿತಿಯನ್ನು ಜಿಲ್ಲಾಡಳಿತ ಪೊಲೀಸ್, ಅಬಕಾರಿ ಇಲಾಖೆಗಳ ಕಚೇರಿಗೆ ಸಲ್ಲಿಸಬೇಕು ಎಂದರು.
ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು, ಅಕ್ರಮ ಚಟುವಟಿಕೆಗಳು ಕಂಡು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕಾಗುತ್ತದೆ. ಮತದಾನದ ಅವಧಿಯಲ್ಲಿ ಚೆಕ್ಪೋಸ್ಟ್ನಲ್ಲಿ ಕರ್ತವ್ಯ ನಿರತ ಅಧಿಕಾರಿಗಳು ಅತ್ಯಂತ ಜಾಗರೂಕತೆಯಿಂದ ಕಾರ್ಯ ನಿರ್ವಹಿಸಬೇಕಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸುವ ಸಂಬಂಧ ಎಲ್ಲಾ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತರಾದ ನಂದಿನಿ,ಅಪರ ಜಿಲ್ಲಾಧಿಕಾರಿಗಳಾದ ಕವಿತಾ ರಾಜರಾಂ ಹಾಗೂ ಕೇರಳ ರಾಜ್ಯದ ವೈನಾಡು ಜಿಲ್ಲೆಯ ಜಿಲ್ಲಾಧಿಕಾರಿಗಳು, ಪೊಲೀಸ್, ಅಬಕಾರಿ, ಅರಣ್ಯ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.