ರಾಜಸ್ಥಾನದ ನ್ಯಾಯಾಧೀಶೆಯೊಬ್ಬರಿಗೆ ಬೆದರಿಕೆ ಪತ್ರ ಬರೆದು ರೂ. 20 ಲಕ್ಷ ಹಣ ನೀಡದಿದ್ದರೆ ಅಶ್ಲೀಲ ಚಿತ್ರ ಸೋರಿಕೆ ಮಾಡುವುದಾಗಿ ತಿಳಿಸಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶೆ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.
ಈ ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಿಂದ ಪಡೆಯಲಾಗಿದ್ದು ಅವುಗಳನ್ನು ತಿರುಚಿ ಪತ್ರದೊಂದಿಗೆ ಜೈಪುರದ ನ್ಯಾಯಾಧೀಶರಿಗೆ ತಲುಪಿಸಲಾಗಿದೆ ಎಂದು ವರದಿಯಾಗಿದೆ.
ಛಾಯಾಚಿತ್ರಗಳನ್ನು ಒಳಗೊಂಡ ಪತ್ರದಲ್ಲಿ “ರೂ 20 ಲಕ್ಷದೊಂದಿಗೆ ಸಿದ್ಧವಾಗಿರಿ ಇಲ್ಲದಿದ್ದರೆ ನಿಮ್ಮನ್ನು ಮತ್ತು ನಿಮ್ಮ ಕುಟುಂಬವನ್ನು ಹಾಳುಗೆಡವಲಾಗುವುದು. ಸಮಯ ಮತ್ತು ಸ್ಥಳವನ್ನು ಶೀಘ್ರದಲ್ಲೇ ತಿಳಿಸುತ್ತೇವೆ” ಎಂದು ಬೆದರಿಸಲಾಗಿತ್ತು.
ಸಿಸಿಟಿವಿ ತುಣುಕಿನ ಮೂಲಕ ಕೃತ್ಯ ಎಸಗಿದವನನ್ನು ಗುರುತಿಸಲಾಗಿದ್ದರೂ, ಇಲ್ಲಿಯವರೆಗೆ ಯಾರನ್ನೂ ಬಂಧಿಸಿಲ್ಲ. ಫೆಬ್ರವರಿ 7 ರಂದು, ನ್ಯಾಯಾಧೀಶೆಯ ಮಕ್ಕಳು ಓದುತ್ತಿರುವ ಶಾಲೆಯಿಂದ ಬಂದವನೆಂದು ಹೇಳಿಕೊಂಡ ವ್ಯಕ್ತಿಯೊಬ್ಬ ನ್ಯಾಯಾಧೀಶರ ಸ್ಟೆನೋಗ್ರಾಫ್ಗೆ ಪತ್ರ ನೀಡಿದ್ದ. ಅದರಲ್ಲಿ ಛಾಯಾಚಿತ್ರಗಳಿದ್ದವು. ಆತನಿಗೆ ಸುಮಾರು 20 ವರ್ಷಗಳಿರಬಹುದು ಎಂದು ಸಿಸಿಟಿವಿ ದೃಶ್ಯಾವಳಿಗಳಿಂದ ತಿಳಿದುಬಂದಿದೆ. ಫೆಬ್ರವರಿ 27 ರಂದು ಕೂಡ ನ್ಯಾಯಾಧೀಶರು ವಾಸಿಸುವ ಸರ್ಕಾರಿ ವಸತಿಗೃಹಕ್ಕೂ ಇದೇ ಬಗೆಯ ಪತ್ರವನ್ನು ನೀಡಲಾಗಿತ್ತು.
ಈ ಹಿನ್ನೆಲೆಯಲ್ಲಿ ಫೆಬ್ರವರಿ 28 ರಂದು ದೂರು ದಾಖಲಿಸಿರುವ ನ್ಯಾಯಾಧೀಶೆ ತಮ್ಮ ನಿತ್ಯದ ಆಗುಹೋಗುಗಳ ಮೇಲೆ ಯಾರೋ ಕಣ್ಣಿಟ್ಟಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.