ಮನೆ ರಾಜಕೀಯ ರಾಮನಗರ ಕ್ಷೇತ್ರದಿಂದ ಡಿ.ಕೆ ಸುರೇಶ್ ಸ್ಪರ್ಧೆ ಬಗ್ಗೆ ಪ್ರಸ್ತಾಪವಿದೆ: ಡಿ.ಕೆ ಶಿವಕುಮಾರ್

ರಾಮನಗರ ಕ್ಷೇತ್ರದಿಂದ ಡಿ.ಕೆ ಸುರೇಶ್ ಸ್ಪರ್ಧೆ ಬಗ್ಗೆ ಪ್ರಸ್ತಾಪವಿದೆ: ಡಿ.ಕೆ ಶಿವಕುಮಾರ್

0

ಬೆಂಗಳೂರು: ರಾಮನಗರ ಕ್ಷೇತ್ರದಿಂದ ಡಿ.ಕೆ ಸುರೇಶ್ ಸ್ಪರ್ಧೆ ಬಗ್ಗೆ ಪ್ರಸ್ತಾಪವಿದೆ. ಆದರೆ ಈ ಬಗ್ಗೆ ತೀರ್ಮಾನಿಸಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಶಿವಕುಮಾರ್,  ಡಿ ಕೆ ಸುರೇಶ್ ಸ್ಪರ್ಧೆ ಬಗ್ಗೆ ಹೈಕಮಂಡ್ ನಿಂದ ಒತ್ತಡ  ಬಂದಿದ್ದು ನಿಜ. ಆದರೆ ನಾವಿನ್ನೂ ತೀರ್ಮಾನ ಮಾಡಿಲ್ಲ ಎಂದರು.

ಈ ಹಿಂದೆಯೂ ಡಿ ಕೆ ಸುರೇಶ್ ಸ್ಪರ್ಧೆಗೆ ಕಾರ್ಯಕರ್ತರು ಒತ್ತಾಯ ಮಾಡಿದ್ದರು. ಆದರೆ ಮತ್ತೆ ಬೈಎಲೆಕ್ಷನ್ ಎಲ್ಲಾ ಮಾಡುವುದಕ್ಕೆ ಇಷ್ಟವಿಲ್ಲ. ಸ್ಪರ್ಧೆಗೆ ಡಿ ಕೆ ಸುರೇಶ್ ಅರ್ಜಿ ಹಾಕಿಲ್ಲ. ಚರ್ಚೆಯೂ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.