ಮನೆ ರಾಜ್ಯ ನಾನು ಎಲ್ಲಿಯೂ ಗುಳಿಗ ದೈವದ ಟೀಕೆ ಮಾಡಿಲ್ಲ: ಆರಗ ಜ್ಞಾನೇಂದ್ರ ಸ್ಪಷ್ಟನೆ

ನಾನು ಎಲ್ಲಿಯೂ ಗುಳಿಗ ದೈವದ ಟೀಕೆ ಮಾಡಿಲ್ಲ: ಆರಗ ಜ್ಞಾನೇಂದ್ರ ಸ್ಪಷ್ಟನೆ

0

ಶಿವಮೊಗ್ಗ: ನಾನು ಎಲ್ಲಿಯೂ ಗುಳಿಗದ ಬಗ್ಗೆ ಟೀಕೆ ಮಾಡಿಲ್ಲ. ನನಗೆ ಗುಳಿಗ, ಪಂಜುರ್ಲಿ ಕುರಿತು ಗೌರವ ಭಕ್ತಿಯಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ.

ನನ್ನ ವಿರುದ್ಧ ಟೀಕೆ ಮಾಡುವವರು ಯಾರು? ನಿನ್ನೆ ಕೂಡ ಒಂದು ಕಾರ್ಯಕ್ರಮಕ್ಕೆ ಹೋಗಿ ಬಂದಿದ್ದೇನೆ. ಯಾರಿಗೆ ಈ ದೈವದ ಬಗ್ಗೆ ನಂಬಿಕೆಯಿಲ್ಲ, ವಿಶ್ವಾಸ ಇಲ್ಲ, ಮೂಢನಂಬಿಕೆ ಎಂದು ಹೇಳಿಕೊಂಡು ತಿರುಗಾಡುತ್ತಿದ್ದವರು ನಿನ್ನೆ ತೀರ್ಥಹಳ್ಳಿಯಲ್ಲಿ ನಾಟಕವಾಡಿಸಿದ್ದಾರೆ. ಚುನಾವಣೆ ಸಮಯದಲ್ಲಿ ಜನರ ಭಾವನೆಗಳನ್ನು ರಾಜಕಾರಣಕ್ಕೆ ಕಾಂಗ್ರೆಸ್ ದುರುಪಯೋಗ ಮಾಡಿದ್ದಾರೆ ಎಂದು ನಾನು ಹೇಳಿದ್ದು” ಎಂದಿದ್ದಾರೆ.

ಗುಳಿಗ ಬೋರ್ಡ್ ಹಾಕಿಕೊಂಡು ಜನರ ಶ್ರದ್ಧೆ ಕಾಂಗ್ರೆಸ್ ದುರುಪಯೋಗ ಮಾಡಿಕೊಂಡಿದೆ ಎನ್ನುವ ಹಿನ್ನಲೆಯಲ್ಲಿ ನಾನು ಹೇಳಿದ್ದೆ ಎಂದು ಆರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ.