ಮನೆ ಅಪರಾಧ ಎಪಿಎಂಸಿ ದಾಸ್ತಾನು ಮಳಿಗೆ ಮೇಲೆ ಸಿಸಿಬಿ ಪೊಲೀಸರ ದಾಳಿ: ಐವರ ಬಂಧನ, 450 ಚೀಲ ಅಕ್ಕಿ;...

ಎಪಿಎಂಸಿ ದಾಸ್ತಾನು ಮಳಿಗೆ ಮೇಲೆ ಸಿಸಿಬಿ ಪೊಲೀಸರ ದಾಳಿ: ಐವರ ಬಂಧನ, 450 ಚೀಲ ಅಕ್ಕಿ; 5 ಲಕ್ಷ ನಗದು ವಶ

0

ಹುಬ್ಬಳ್ಳಿ: ನಗರದ ಅಮರಗೋಳದ ಎಪಿಎಂಸಿ ದಾಸ್ತಾನು ಮಳಿಗೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಐವರನ್ನು ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ, ಎಸಿಪಿ ನಾರಾಯಣ ಬರಮನಿ ನೇತೃತ್ವದ ತಂಡ ದಾಳಿ ನಡೆಸಿದ್ದು, ಮಳಿಗೆಯಲ್ಲಿದ್ದ 450 ಚೀಲ ಅಕ್ಕಿ,  5 ಲಕ್ಷ ನಗದು ಹಾಗೂ 4 ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. 

ಸರ್ಕಾರದಿಂದ ಬಿಪಿಎಲ್ ಕಾರ್ಡುದಾರರಿಗೆ ಉಚಿತವಾಗಿ ಪೂರೈಸುವ ಪಡಿತರ ಅಕ್ಕಿಯನ್ನು ಆರೋಪಿ ಷಣ್ಮುಖಪ್ಪ ಬೆಟಗೇರಿ ಎಂಬಾತ 10ರಿಂದ 15 ಕೊಟ್ಟು ಖರೀದಿಸುತ್ತಿದ್ದ. ಬಳಿಕ, ಮಂಜುನಾಥ ಹರ್ಲಾಪುರ ಎಂಬುವವರಿಗೆ ಮಾರಾಟ ಮಾಡುತ್ತಿದ್ದ. ಈತ 35ರಿಂದ 40 ಬೆಲೆಗೆ ಮಾಹಾರಾಷ್ಟ್ರದಲ್ಲಿ ಮಾರಾಟ ಮಾಡಲು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಎಂದು ಪ್ರಾಥಮಿಕ‌ ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಕಾರ್ಯಾಚರಣೆಯ ತಂಡದಲ್ಲಿ ಸಿಸಿಬಿ ಇನ್ಸ್‌ಪೆಕ್ಟರ್ ರಮೇಶ ಕಾಂಬಳೆ, ಗೋಪಾಲ ರಾಠೋಡ, ಎಸ್.ಎಚ್. ಸಾಳುಂಕೆ, ಬಿ.ಎನ್. ಲಂಗೋಟಿ, ಎನ್.ಓ. ಜಾಧವ, ಎಸ್.ಸಿ. ಜಾಲವಾಡಗಿ, ಉಮೇಶ ದೊಡ್ಡಮನಿ, ಬಿ.ಎಫ್. ಬೆಳಗಾವಿ, ಮಾರುತಿ ಭಜಂತ್ರಿ, ರಾಜೀವ ಬಿಷ್ಟಂಡೇರ, ಎಫ್.ಬಿ. ಕುರಿ, ಅನೀಲ ಹುಗ್ಗಿ, ಡಿ.ಎನ್.‌ಗುಂಡಗೈ, ಎಸ್‌.ಎಚ್‌. ಕೆಂಪಡಿ ಹಾಗೂ ಆರ್.ಎಸ್.‌ ಗುಂಜಳ‌ ಇದ್ದರು.

ನವನಗರ ಎಪಿಎಂಸಿ  ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.