ನವದೆಹಲಿ: ದೇಶವು ಪದೇ ಪದೇ ತಿರಸ್ಕರಿಸಿದ ಬಳಿಕ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ದೇಶ ವಿರೋಧಿ ಟೂಲ್ ಕಿಟ್ ನ ಶಾಶ್ವತ ಭಾಗವಾಗಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಟೀಕಿಸಿದ್ದಾರೆ.
ನಮ್ಮ ದೇಶದ ವ್ಯವಹಾರದಲ್ಲಿ ಅನ್ಯ ದೇಶಗಳು ಮಧ್ಯ ಪ್ರವೇಶಿಸಬೇಕೆಂದು ರಾಹುಲ್ ನೀಡಿದ ಹೇಳಿಕೆ ನಾಚಿಕೆಗೇಡು ಎಂದು ಅವರು ಕಿಡಿಕಾರಿದ್ದಾರೆ.
ಎಂದು ಅವರು ಕುಟುಕಿದ್ದಾರೆ.
ಭಾರತವು ವಿಶ್ವದ 5ನೇ ಅತಿದೊಡ್ಡ ಆರ್ಥಿಕತೆಯಾಗಿದ್ದು, ಜಿ–20 ಸಭೆಗಳು ನಡೆಯುತ್ತಿರುವ ಈ ಸಂದರ್ಭದಲ್ಲಿ ರಾಹುಲ್ ಗಾಂಧಿ, ವಿದೇಶಿ ನೆಲದಿಂದ ಭಾರತ, ಸಂಸತ್ ಮತ್ತು ದೇಶದ ಜನರನ್ನು ಅವಮಾನಿಸುವ ಮೂಲಕ ದೇಶ ವಿರೋಧಿಗಳಿಗೆ ಬಲ ನೀಡಿದ್ದಾರೆ ಎಂದು ನಡ್ಡಾ ಟೀಕಿಸಿದ್ದಾರೆ.
ಭಾರತದಲ್ಲಿ ಪ್ರಜಾಪ್ರಭುತ್ವದ ಅಂತ್ಯವಾಗಿದೆ. ಯೂರೋಪ್ ಮತ್ತು ಅಮೆರಿಕ ದೇಶಗಳು ಮಧ್ಯಪ್ರವೇಶಿಸಬೇಕೆಂದು ವಿದೇಶಿ ನೆಲದಲ್ಲಿ ನಿಂತು ಹೇಳಿಕೆ ನೀಡಿದ್ದಾರೆ. ಇದಕ್ಕಿಂತ ನಾಚಿಕೆಗೇಡು ಇನ್ನೇನಿದೆ? ಎಂದು ನಡ್ಡಾ ಪ್ರಶ್ನಿಸಿದ್ದಾರೆ.
ದೇಶ ವಿರೋಧಿಗಳನ್ನು ರಾಹುಲ್ ಬಲಪಡಿಸುತ್ತಿದ್ದಾರೆ ಎಂದು ಟೀಕಿಸಿದ ನಡ್ಡಾ, ಚುನಾಯಿತ ಬಹುಮತದ ಸರ್ಕಾರ ಹಾಗೂ 130 ಕೋಟಿ ಜನಸಂಖ್ಯೆಯನ್ನು ಅವಮಾನಿಸಿದ್ದಾರೆ ಎಂದು ದೂರಿದ್ದಾರೆ.
ಪಾಕಿಸ್ತಾನ ಮತ್ತು ರಾಹುಲ್ ಗಾಂಧಿ ಒಂದೇ ಧಾಟಿಯಲ್ಲಿ ಮಾತನಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.