ನವದೆಹಲಿ: ಮಾಂಸದ ವ್ಯಾಪಾರಿಗಳ ಮೇಲೆ ಮೂವರು ಪೊಲೀಸರು ಸೇರಿದಂತೆ ಏಳು ಮಂದಿ ಹಲ್ಲೆ ನಡೆಸಿ ಸುಲಿಗೆ ಮಾಡಿರುವ ಘಟನೆ ಪೂರ್ವ ದೆಹಲಿಯ ಆನಂದ್ ವಿಹಾರ್ನಲ್ಲಿ ನಡೆದಿದೆ.
ಮಾರ್ಚ್ 7ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಮಾಂಸ ಮಾರಾಟಗಾರರು ಸಂಚರಿಸುತ್ತಿದ್ದ ಕಾರು ಸ್ಕೂಟರ್’ಗೆ ಡಿಕ್ಕಿ ಹೊಡೆದಿದೆ. ಈ ಸಂದರ್ಭ ಮಾತಿಗೆ ಮಾತು ಬೆಳೆದು ಗಲಭೆ ಸಂಭವಿಸಿದೆ. ಆರೋಪಿಗಳಲ್ಲಿ ಒಬ್ಬ ‘ಗೋ ರಕ್ಷಕ’ನಾಗಿದ್ದು, ಮಾಂಸ ಮಾರಾಟಗಾರರ ಮುಖದ ಮೇಲೆ ಮೂತ್ರ ಮಾಡಿದ್ದಾನೆ. ಅಲ್ಲದೆ, ಅವರನ್ನು ಕೊಲ್ಲುವುದಾಗಿ ಬೆದರಿಕೆ ಒಡ್ಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತರು ಕೂಡಲೇ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಸಹ 4 ದಿನಗಳ ಬಳಿಕ ಪ್ರಕರಣ ದಾಖಲಾಗಿದೆ.
ಮೂವರು ಪೊಲೀಸರು ಸೇರಿ 7 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳಲ್ಲಿ ಒಬ್ಬ ಎಎಸ್:ಐ ಆಗಿದ್ದು, ಆತನನ್ನು ಅಮಾನತು ಮಾಡಲಾಗಿದೆ.
ಮುಸ್ತಾಫಾಬಾದ್’ನ ನಿವಾಸಿಯಾಗಿರುವ ನವಾಬ್, ಗಾಜಿಪುರಕ್ಕೆ ಮಾಂಸ ಸರಬರಾಜು ಮಾಡುತ್ತಿದ್ದರು. ಸೋದರ ಸಂಬಂಧಿ ಶೋಯಬ್ ಜೊತೆ ಕಾರಿನಲ್ಲಿ ಮಾಂಸ ಇಟ್ಟುಕೊಂಡು ಮನೆಯತ್ತ ತೆರಳುತ್ತಿದ್ದರು. ಈ ಸಂದರ್ಭ, ಕಾರು, ಬೈಕ್ಗೆ ಡಿಕ್ಕಿ ಹೊಡೆದಿದೆ. ಸ್ಕೂಟರ್ ಚಾಲಕ ಮಾಂಸದ ವ್ಯಾಪಾರಿಗಳಿಂದ ₹4,000 ಡ್ಯಾಮೇಜ್ ಪರಿಹಾರವಾಗಿ ನೀಡುವಂತೆ ಒತ್ತಾಯಿಸಿದ್ದಾನೆ. ಈ ವೇಳೆ, ಸ್ಥಳಕ್ಕಾಗಮಿಸಿದ ಪೊಲೀಸರು ಮಾಂಸ ಮಾರಾಟಗಾರರಿಂದ ₹2,500 ಪಡೆದು ಸ್ಕೂಟರ್ ಚಾಲಕನಿಗೆ ನೀಡಿದ್ದಾರೆ. ಬಳಿಕ, ಪೊಲೀಸರು ಮಾಂಸದ ವ್ಯಾಪಾರಿಗಳಿಂದ 15 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಹಣ ನೀಡದಿದ್ದರೆ ಪೊಲೀಸ್ ಠಾಣೆಗೆ ಕೊಂಡೊಯ್ಯುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ವರದಿ ತಿಳಿಸಿದೆ.
ಇದಕ್ಕೆ ಮಾಂಸದ ವ್ಯಾಪಾರಿಗಳು ನಿರಾಕರಿಸಿದಾಗ , ಇನ್ನೂ ನಾಲ್ವರನ್ನು ಕರೆಸಿಕೊಂಡ ಪೊಲೀಸರು, ಮಾಂಸದ ವ್ಯಾಪಾರಿಗಳನ್ನು ಪೊಲೀಸ್ ವಾಹನದಲ್ಲಿ ಕೂರಿಸಿಕೊಂಡು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ.
ಈ ಸಂದರ್ಭ ನವಾಬ್ ಮತ್ತು ಶೋಯಬ್ ಅವರಿಗೆ ಪೊಲೀಸರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಅಲ್ಲದೆ, ಆರೋಪಿಯೊಬ್ಬ ಅವರ ಮೇಲೆ ಮೂತ್ರ ಮಾಡಿ, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ವರದಿ ತಿಳಿಸಿದೆ.
ಅಲ್ಲದೆ, ಅವರನ್ನು ಗೋಹತ್ಯೆ ಮಾಡುವವರು ಎಂದು ಆರೋಪಿಸಿರುವ ಪೊಲೀಸರು, 25,000 ಸುಲಿಗೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸಂತ್ರಸ್ತರಿಗೆ ಪ್ರಜ್ಞೆ ತಪ್ಪುವ ಚುಚ್ಚುಮದ್ದನ್ನು ಚುಚ್ಚಿ, ಖಾಲಿ ಪತ್ರಗಳಿಗೆ ಸಹಿ ಮಾಡಿಸಿಕೊಳ್ಳಲಾಗಿದೆ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.
ಸಂತ್ರಸ್ತರು ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ದೂರು ದಾಖಲಿಸಿದ್ದಾರೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.