ಕೆ.ಆರ್.ನಗರ: ತಾಲ್ಲೂಕಿನ ನಾರಾಯಣಪುರದಲ್ಲಿ ಗುರುವಾರ ಸರ್ಕಾರಿ ಜಾಗಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ವಿವಾದ ತಾರಕಕ್ಕೇರಿದ್ದರಿಂದ ಶವವನ್ನು ರಸ್ತೆಯಲ್ಲಿಟ್ಟು ಪ್ರತಿಭಟಿಸಲಾಗಿದೆ.
ನಾರಾಯಣಪುರದ ಮಂಜುನಾಯಕ ಮೃತಪಟ್ಟಿದ್ದರು. ಪರಿಶಿಷ್ಟ ಪಂಗಡದ ಸ್ಮಶಾನ ಒತ್ತುವರಿಯಾಗಿದೆ. ಅಲ್ಲಿ ತೆಂಗಿನ ಮರಗಳಿವೆ. ಪಂಚಾಯಿತಿಯವರು ತೆರವುಗೊಳಿಸದಿದ್ದರಿಂದ ಸರ್ಕಾರಿ ಜಮೀನಿನಲ್ಲಿ ಅಂತ್ಯಸಂಸ್ಕಾರ ನೆರವೇರಿಸಲು ಕುಟುಂಬಸ್ಥರು, ಸಮುದಾಯದವರು, ನೆಂಟರು ಶವ ಹೊತ್ತೊಯ್ಯುತ್ತಿದ್ದರು.
ಈ ವಿಷಯ ತಿಳಿದೊಡನೆ ಮತ್ತೊಂದು ಕೋಮಿನ ಜನ ಅಂತಿಮ ಯಾತ್ರೆ ತಡೆದರು. ಶವ ಹೂಳಲು ಗುಂಡಿ ತೆಗೆದಿರುವ ಜಾಗವನ್ನು ಈಗಾಗಲೇ ಆಶ್ರಯ ನಿವೇಶನಕ್ಕೆ ಗುರುತಿಸಲಾಗಿದೆ. ಮಂಜೂರು ಸಹ ಆಗಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಶವ ಹೂಳಲು ಇಲ್ಲಿ ಅವಕಾಶ ನೀಡಲ್ಲ ಎಂದು ಪಟ್ಟು ಹಿಡಿದು ಕುಳಿತರು.
ನಮಗೆ ಸ್ಮಶಾನವೂ ಇಲ್ಲ. ಸ್ವಂತ ಭೂಮಿಯೂ ಇಲ್ಲ. ಆದ್ದರಿಂದ ನಾವು ಸರ್ಕಾರಿ ಜಾಗದಲ್ಲೇ ಶವಸಂಸ್ಕಾರ ನಡೆಸುತ್ತೇವೆ ಎಂದು ಮೃತರ ಸಂಬಂಧಿಕರು ರಸ್ತೆಯಲ್ಲೇ ಶವವಿಟ್ಟುಕೊಂಡು ಪ್ರತಿಭಟಿಸಿದರು. ಎರಡೂ ಗುಂಪಿನ ನಡುವೆ ವಾಗ್ವಾದ ನಡೆಯಿತು. ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು.
ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ದೌಡಾಯಿಸಿದರು. ತಾಲ್ಲೂಕು ಆಡಳಿತದ ಅಧಿಕಾರಿಗಳು ಎರಡೂ ಗುಂಪಿನ ಮನವೊಲಿಕೆಗೆ ಯತ್ನಿಸಿದರೂ ತಡರಾತ್ರಿಯವರೆಗೂ ಯಾರೊಬ್ಬರೂ ಪಟ್ಟು ಸಡಿಸಲಿಲ್ಲ. ರಸ್ತೆಯಲ್ಲೇ ಶವವಿಟ್ಟು ಪ್ರತಿಭಟಿಸಿದ್ದರಿಂದ ಈ ಮಾರ್ಗದಲ್ಲಿನ ಸಂಚಾರ ಸ್ಥಗಿತಗೊಳಿಸಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.