ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಮತದಾನವನ್ನು ಕಡ್ಡಾಯಗೊಳಿಸಲು ಆದೇಶಿಸುವಂತೆ ಕೋರಿ ಬಿಜೆಪಿಯ ಅಶ್ವಿನಿ ಉಪಾಧ್ಯಾಯ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಗೆ ಶುಕ್ರವಾರ ದೆಹಲಿ ಹೈಕೋರ್ಟ್ ನಿರಾಕರಿಸಿದೆ.
[ಅಶ್ವಿನಿ ಕುಮಾರ್ ಉಪಾಧ್ಯಾಯ ವರ್ಸಸ್ ಭಾರತ ಸರ್ಕಾರ ಮತ್ತು ಇತರರು].
ಮತದಾನ ಆಯ್ಕೆಯ ವಿಚಾರವಾಗಿದ್ದು, ನ್ಯಾಯಮೂರ್ತಿಗಳು ಶಾಸನ ರೂಪಿಸುವವರಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾ. ಸುಬ್ರಮೊಣಿಯಂ ಪ್ರಸಾದ್ ಅವರ ನೇತೃತ್ವದ ವಿಭಾಗೀಯ ಪೀಠವು ಹೇಳಿದೆ.
ಚೆನ್ನೈನಲ್ಲಿ ನೆಲೆಸಿರುವ ಶ್ರೀನಗರದ ವ್ಯಕ್ತಿಯನ್ನು ತನ್ನ ತವರಿಗೆ ಬಂದು ಮತದಾನ ಮಾಡುವಂತೆ ಬಲವಂತ ಮಾಡಲಾಗದು. “ಪೊಲೀಸರಿಗೆ ಅವರನ್ನು ಬಂಧಿಸಿ, ಶ್ರೀನಗರಕ್ಕೆ ಕಳುಹಿಸುವಂತೆ ನಿರ್ದೇಶಿಸಬೇಕು ಎಂದು ನೀವು ಬಯಸುತ್ತಿದ್ದೀರಾ” ಎಂದು ಪೀಠ ಪ್ರಶ್ನಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ಉಪಾಧ್ಯಾಯ ತಾನು ನ್ಯಾಯಾಲಯವನ್ನು ಒತ್ತಾಯಿಸುವುದಿಲ್ಲ ಎಂದರು.
“ನಿಮ್ಮನ್ನು ಹಿಡಿದು ಕೇಳಿದಾಗ ಮಾತ್ರ ನಾನು ನ್ಯಾಯಾಲಯವನ್ನು ಒತ್ತಾಯಿಸುವುದಿಲ್ಲ ಎನ್ನುತ್ತೀರಿ” ಎಂದು ಸಿಜೆ ಶರ್ಮಾ ಹೇಳಿದರು.
“ಕಾಸ್ ಲಿಸ್ಟ್ ನೋಡಿದಾಗ ಇಂಥದ್ದೇ ಪ್ರಕರಣಗಳು ರಾಶಿ ಬಿದ್ಧಿರುತ್ತವೆ” ಎಂದು ಪೀಠ ಇದೇ ವೇಳೆ ತನ್ನ ಅಸಮಾಧಾನವನ್ನು ವ್ಯಕ್ತಪಡಿಸಿತು. ಅರ್ಜಿ ಹಿಂಪಡೆಯದಿದ್ದರೆ ದಂಡ ವಿಧಿಸಲಾಗುವುದು ಎಂದು ನ್ಯಾಯಾಲಯ ಹೇಳಿದಾಗ ಅವರು ಮನವಿ ಹಿಂಪಡೆದರು.
ಮತದಾನ ಕಡ್ಡಾಯಗೊಳಿಸಿದರೆ ಮತದಾನ ಹೆಚ್ಚಳವಾಗಲಿದ್ದು, ರಾಜಕೀಯದಲ್ಲಿ ಭಾಗವಹಿಸುವಿಕೆ ಹೆಚ್ಚಿ, ಪ್ರಜಾಪ್ರಭುತ್ವದ ಗುಣಮಟ್ಟ ಹೆಚ್ಚಳವಾಗುತ್ತದೆ ಎಂದು ಉಪಾಧ್ಯಾಯ ಸಲ್ಲಿಸಿದ್ದ ಅರ್ಜಿಯಲ್ಲಿ ವಿವರಿಸಲಾಗಿತ್ತು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.