ಮನೆ ರಾಜ್ಯ ಜಮಖಂಡಿ: ಇಂದು ಮಧ್ಯರಾತ್ರಿವರೆಗೆ ನಿಷೇದಾಜ್ಞೆ ಜಾರಿ

ಜಮಖಂಡಿ: ಇಂದು ಮಧ್ಯರಾತ್ರಿವರೆಗೆ ನಿಷೇದಾಜ್ಞೆ ಜಾರಿ

0

ಜಮಖಂಡಿ: ನಗರದ‌ಲ್ಲಿ ಅನಧಿಕೃತವಾಗಿ ವೃತ್ತಗಳನ್ನು ನಿರ್ಮಾಣ ಮಾಡಿರುವ ಹಿನ್ನಲೆಯಲ್ಲಿ ಶಾಂತಿ ಕಾಪಾಡುವ ದೃಷ್ಠಿಯಿಂದ ಶನಿವಾರ ಬೆಳಿಗ್ಗೆಯಿಂದ ಮಧ್ಯರಾತ್ರಿ 12ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ನಗರದಲ್ಲಿ ಜನರು ಗುಂಪು, ಗುಂಪಾಗಿ ಸೇರುವಂತಿಲ್ಲ. ಶವ ಸಂಸ್ಕಾರಕ್ಕೆ ಅನ್ವಯಿಸುವುದಿಲ್ಲ ಎಂದು ತಹಶೀಲ್ದಾರ್ ಸದಾಶಿವ ಮುಕ್ಕೋಜಿ ಆದೇಶದಲ್ಲಿ ತಿಳಿಸಿದ್ದಾರೆ.

ಶಾಸಕ ಆನಂದ ನ್ಯಾಮಗೌಡರ ನೇತ್ರತ್ವದಲ್ಲಿ ಮೌಲಾನಾ ಅಬುಲ್ ಕಲಾಂ ಆಜಾದ್ ವೃತ್ತ ನಿರ್ಮಾಣಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗಿತ್ತು.

ವೃತ್ತ ನಿರ್ಮಾಣ ಮಾಡಲಾಯಿತು. ಇದನ್ನು ಖಂಡಿಸಿ ಬಿಜೆಪಿ ಮುಖಂಡರು ಆರು ವೃತ್ತಗಳನ್ನು ನಿರ್ಮಾಣ ಮಾಡಿದ್ದಾರೆ.