ಮನೆ ಅಪರಾಧ ಕ್ಯಾಂಟರ್ – ಬೈಕ್ ನಡುವೆ ಅಪಘಾತ: ಸವಾರ ಸ್ಥಳದಲ್ಲೇ ಸಾವು

ಕ್ಯಾಂಟರ್ – ಬೈಕ್ ನಡುವೆ ಅಪಘಾತ: ಸವಾರ ಸ್ಥಳದಲ್ಲೇ ಸಾವು

0

ಮೈಸೂರು: ಕ್ಯಾಂಟರ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲೂಕಿನ ಮೈಸೂರು ಬಂಟ್ವಾಳ ಹೆದ್ದಾರಿಯ ಯಶೋಧರ ಪುರ ಗಾಮದ ಬಳಿ ನಡೆದಿದೆ.

ಮಾದೇಶ್ ಗೌಡ (57) ಮೃತ ದುರ್ದೈವಿ.

ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆ ಡಿ.ಗ್ರೂಪ್ ನೌಕರರಾಗಿದ್ದ ಮಾದೇಶ ಕೊತ್ತೆಗಾಲ ಗ್ರಾಮದ ನಿವಾಸಿಯಾಗಿದ್ದನು. ಮಾದೇಶ ಕೊತ್ತೆಗಾಲದಿಂದ ಹುಣಸೂರು ಕಡೆಗೆ ತೆರಳುತ್ತಿದ್ದರು. ಪಿರಿಯಾಪಟ್ಟಣದ ಕಡೆಯಿಂದ ಹುಣಸೂರು ಕಡೆಗೆ ಬರುತ್ತಿದ್ದ ಕ್ಯಾಂಟರ್ ಗೂಡ್ಸ್ ವಾಹನ ಹಿಂಬದಿಯಿಂದ ಬೈಕ್‌ಗೆ ಡಿಕ್ಕಿ ಹೊಡೆದಿದೆ.

ಹುಣಸೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.