`ಚಾರ್ಲಿ 777’ಚಿತ್ರ ಬಿಡುಗಡೆ ಬಳಿಕ ನಟ ರಕ್ಷಿತ್ ಶೆಟ್ಟಿ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದಲ್ಲಿ ಸಂಪೂರ್ಣವಾಗಿ ಮಗ್ನರಾಗಿದ್ದರು. ಇದೀಗ ಚಿತ್ರದ ಕುರಿತು ನಟ ರಕ್ಷಿತ್ ಶೆಟ್ಟಿ ಅಭಿಮಾನಿಗಳಿಗೆ ಮಹತ್ವದ ಅಪ್ಡೇಟ್ ನೀಡಿದ್ದಾರೆ.
‘137 ಸೊಗಸಾದ ದಿನಗಳ ಚಿತ್ರೀಕರಣಕ್ಕೆ ಪೂರ್ಣವಿರಾಮ..’ ಎಂದು ‘ಸಪ್ತ ಸಾಗರದಾಚೆ’ ಚಿತ್ರೀಕರಣ ಮುಕ್ತಾಯಗೊಂಡಿರುವ ಸುದ್ದಿಯನ್ನು ತಮ್ಮ ಸಾಮಾಜಿಕ ಮಾಧ್ಯಮ ತಾಣದಲ್ಲಿ ಹಂಚಿಕೊಂಡಿದ್ದಾರೆ.
ಜತೆಗೆ ಚಿತ್ರೀಕರಣ ಮುಗಿಸಿ ಕುಂಬಳಕಾಯಿ ಒಡೆಯುವ ವಿಡಿಯೊ ಶೇರ್ ಮಾಡಿದ್ದಾರೆ. ಚಿತ್ರಮಂದಿರದಲ್ಲಿ ಸಪ್ತ ಸಾಗರದ ಅಲೆ ಪ್ರಾರಂಭವಾದಾಗ ನೀವು ನಿಮ್ಮ ಪಾತ್ರರೊಂದಿಗೆ ಚಿತ್ರ ವೀಕ್ಷಿಸುವಿರಿ ಎಂಬ ಭರವಸೆ ಇದೆ ಎಂದು ರಕ್ಷಿತ್ ಶೆಟ್ಟಿ ಬರೆದುಕೊಂಡಿದ್ದಾರೆ.
‘ಗೋಧಿಬಣ್ಣ ಸಾಧಾರಣ ಮೈಕಟ್ಟು’ ನಂತರ ನಟ ರಕ್ಷಿತ್ ಶೆಟ್ಟಿ, ನಿರ್ದೇಶಕ ಹೇಮಂತ್ ರಾವ್, ಸಂಗೀತ ನಿರ್ದೇಶಕ ಚರಣ್ ರಾಜ್ ಮತ್ತೆ ‘ಸಪ್ತ ಸಾಗರ’ದಲ್ಲಿ ಒಂದಾಗಿದ್ದಾರೆ. ಚಿತ್ರದ ಮೊದಲ ಟೀಸರ್ ಅಭಿಮಾನಿಗಳ ಗಮನ ಸೆಳೆದಿತ್ತು. ಚಿತ್ರಕ್ಕೆ ನಾಯಕಿಯಾಗಿ ರುಕ್ಮಿಣಿ ವಸಂತ ನಟಿಸುತ್ತಿದ್ದು, ಅವರ ಗೆಟಪ್ ನಿಂದ ಇದೊಂದು ಸುಂದರ ಪ್ರೇಮ ಕಥೆ ಇರುವ ಚಿತ್ರವೆಂಬುದು ಮೇಲ್ನೋಟಕ್ಕೆ ತಿಳಿಯುತ್ತಿದೆ.
‘ಚಾರ್ಲಿ’ ಬಳಿಕ ರಕ್ಷಿತ್ ಶೆಟ್ಟಿ ಅತ್ಯಂತ ಭರವಸೆ ಇಟ್ಟುಕೊಂಡಿರುವ ಚಿತ್ರವಿದು. ಈ ಬಗ್ಗೆ ಅವರು ಸಾಕಷ್ಟು ಸಲ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ. ರಕ್ಷಿತ್ ಶೆಟ್ಟಿ ತಮ್ಮದೇ ‘ಪರಂವ’ ನಿರ್ಮಾಣ ಸಂಸ್ಥೆಯಡಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ಕಥೆಯಲ್ಲಿ ಹಲವು ಶೇಡ್ಗಳಿವೆ. ಒಂದು ಶೇಡ್ ನಲ್ಲಿ ರಕ್ಷಿತ್ ಕೈದಿಯಾಗಿರುತ್ತಾರೆ ಎಂದು ನಿರ್ದೇಶಕ ಹೇಮಂತ್ ರಾವ್ ಈ ಹಿಂದೆ ಹೇಳಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.