ಮನೆ ರಾಜ್ಯ ಸಿದ್ದರಾಮಯ್ಯ ಕ್ಷೇತ್ರದ ಬಗ್ಗೆ ಗೊಂದಲ ಸೃಷ್ಠಿಸುವುದು ಸರಿಯಲ್ಲ:  ಬಿಎಸ್ ವೈ

ಸಿದ್ದರಾಮಯ್ಯ ಕ್ಷೇತ್ರದ ಬಗ್ಗೆ ಗೊಂದಲ ಸೃಷ್ಠಿಸುವುದು ಸರಿಯಲ್ಲ:  ಬಿಎಸ್ ವೈ

0

ಬೆಂಗಳೂರು: ಸಿದ್ದರಾಮಯ್ಯ ಯಾವುದಾದರೂ ಕ್ಷೇತ್ರ ಫೈನಲ್ ಮಾಡಿ ಹೇಳಬೇಕು. ಅದನ್ನು ಬಿಟ್ಟು ಸುಮ್ಮನೆ ಜನರಲ್ಲಿ ಗೊಂದಲವನ್ನುಂಟು ಮಾಡುವುದು ಸರಿಯಲ್ಲ. ಅದನ್ನು ಅವರೇ ಅರ್ಥ ಮಾಡಿಕೊಳ್ಳಬೇಕು ಎಂದು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ಟಾಂಗ್ ನೀಡಿದರು.

ಚಿತ್ರದುರ್ಗ ಜಿಲ್ಲಾ ಪ್ರವಾಸಕ್ಕೂ ಮುನ್ನ ಅಧಿಕೃತ ನಿವಾಸ ಕಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಸಿದ್ದರಾಮಯ್ಯ ಕೋಲಾರ ಸ್ಪರ್ಧೆ ಯೂಟರ್ನ್ ವಿಚಾರದ ಕುರಿತು ಚರ್ಚೆಯಾಗುತ್ತಿದೆ. ನಾನು ಈ ವಿಚಾರದಲ್ಲಿ ಕಾಮೆಂಟ್ ಮಾಡೋಕೆ ಇಷ್ಟ ಪಡಲ್ಲ.

ರಾಜ್ಯದಲ್ಲಿ ಕಾಂಗ್ರೆಸ್’​ಗೆ ಭವಿಷ್ಯವಿಲ್ಲ, ಈ ಚುನಾವಣೆ ನಂತರ ಕಾಂಗ್ರೆಸ್ ​ನವರನ್ನು ಹುಡುಕಬೇಕಾಗಬಹುದು. ರಾಜ್ಯದಲ್ಲಿ ಬಿಜೆಪಿ 140 ಸ್ಥಾನದೊಂದಿಗೆ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇಂದು ಚಿತ್ರದುರ್ಗ ಜಿಲ್ಲಾ ಪ್ರವಾಸಕ್ಕೆ ತೆರಳುತ್ತಿದ್ದು, ನಾಳೆ ತುಮಕೂರು ಪ್ರವಾಸ ಮಾಡಲಿದ್ದೇನೆ. ಯಾರು ಏನೇ ಹೇಳಿದರೂ ವಾತಾವರಣ ತುಂಬಾ ಚೆನ್ನಾಗಿದೆ. 140ಕ್ಕೂ ಹೆಚ್ಚು ಸ್ಥಾನ ಗೆದ್ದು ಬಿಜೆಪಿ ಮತ್ತೆ ಅಧಿಕಾರಕ್ಕೆ ನಿಶ್ಚಿತ ಎಂದು ಭವಿಷ್ಯ ನುಡಿದರು.