ಬೆಳಗಾವಿ: ಕಾಂಗ್ರೆಸ್ ಪಕ್ಷದ ನಾಲ್ಕನೇ ಭರವಸೆಯಾಗಿ ‘ಯುವನಿಧಿ’ ಕಾರ್ಡ್ಗಳನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ನಡೆದ ಕಾಂಗ್ರೆಸ್ ಯುವ ಕ್ರಾಂತಿ ಸಮಾವೇಶದಲ್ಲಿ ಬಿಡುಗಡೆ ಮಾಡಿದರು.
ಈ ವೇಳೆ ರಾಜ್ಯದ ನಿರುದ್ಯೋಗಿ ಪದವೀಧರರಿಗೆ 3,000 ಹಾಗೂ ಡಿಪ್ಲೊಮಾ ಪದವೀಧರರಿಗೆ 1,500 ನಿರುದ್ಯೋಗ ಭತ್ಯೆಯನ್ನು ಎರಡು ವರ್ಷಗಳವರೆಗೆ, ಪ್ರತಿ ತಿಂಗಳು ನೀಡುವುದಾಗಿ ರಾಹುಲ್ ಗಾಂಧಿ ಘೋಷಿಸಿದ್ದಾರೆ.
ರಾಜ್ಯದ ಬಿಜೆಪಿ ಸರ್ಕಾರ ಯುವಜನರಿಗೆ ಉದ್ಯೋಗ ನೀಡುವಲ್ಲಿ ವಿಫಲವಾಗಿವೆ. ಹೀಗಾಗಿ, ಯುವಜನರಿಗೆ ಭದ್ರ ಭವಿಷ್ಯ ಕಟ್ಟಿಕೊಡಲು ಕಾಂಗ್ರೆಸ್ ಮುಂದಾಗಿದೆ. ನಿರುದ್ಯೋಗದಿಂದ ತತ್ತರಿಸಿದ ಯುವ ಸಮುದಾಯಕ್ಕೆ ಭರವಸೆಯ ಬೆಳಕಾಗಿ ಯುವನಿಧಿ ನೀಡುತ್ತಿದ್ದೇವೆ ಎಂದರು.
ನಮ್ಮ ಘೋಷಣೆ ಇಷ್ಟಕ್ಕೇ ನಿಲ್ಲುವುದಿಲ್ಲ. ರಾಜ್ಯದಲ್ಲಿ ಇನ್ನೂ 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಉಳಿದಿವೆ. ಕಾಂಗ್ರೆಸ್ ಸರ್ಕಾರ ರಚನೆಯಾದ ಒಂದು ವರ್ಷದೊಳಗೆ ಈ ಎಲ್ಲ ಹುದ್ದೆಗಳನ್ನೂ ಭರ್ತಿ ಮಾಡುತ್ತೇವೆ. ಯುವ ಸಶಕ್ತೀಕರಣವೇ ನಮ್ಮ ಮೊದಲ ಹೆಜ್ಜೆ ಆಗಲಿದೆ. ನಿರುದ್ಯೋಗದಿಂದ ಕಾಂಗಾಲಾದವರಿಗೆ ಆರ್ಥಿಕ ಶಕ್ತಿ ನೀಡುತ್ತೇವೆ ಎಂದೂ ಭರವಸೆ ನೀಡಿದರು.
ಈಗಾಗಲೇ ಮಹಿಳೆಯರಿಗಾಗಿ ಪ್ರತಿ ತಿಂಗಳು 2,000 ನೆರವು, 200 ಯುನಿಟ್ ಉಚಿತ ವಿದ್ಯುತ್ ಹಾಗೂ ಪ್ರತಿ ಕುಟುಂಬಕ್ಕೆ 10 ಕೆ.ಜಿ ಅಕ್ಕಿ ಉಚಿತ ನೀಡುವ ಗ್ಯಾರಂಟಿ ಕೊಟ್ಟಿದ್ದೇವೆ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರಗಳು ಬಂದಾಗಿನಿಂದ ಯುವ ಸಮುದಾಯವನ್ನು ನಿರ್ಲಕ್ಷ್ಯ ಮಾಡಿವೆ. ಹೀಗಾಗಿ, ಕಾಂಗ್ರೆಸ್ ನಿಮಗಾಗಿಯೇ ಪ್ರತ್ಯೇಕ ಯೋಜನೆ ರೂಪಿಸಿದೆ ಎಂದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.