ಮನೆ ಅಪರಾಧ ಧಾರ್ಮಿಕ ಭಾವನೆಗೆ ಧಕ್ಕೆ: ನಟ ಚೇತನ್ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ: ನಟ ಚೇತನ್ ಬಂಧನ

0

ಬೆಂಗಳೂರು: ಅವಹೇಳನಕಾರಿ ಟ್ವೀಟ್ ಮಾಡಿ‌ ಧಾರ್ಮಿಕ ಭಾವನೆಗೆ ಧಕ್ಕೆ‌ ತಂದ ಆರೋಪದಡಿ ನಟ ಚೇತನ್ ಅವರನ್ನು‌ ಶೇಷಾದ್ರಿಪುರ ಪೊಲೀಸರು‌ ಬಂಧಿಸಿದ್ದಾರೆ.

ಹಿಂದೂ ಧರ್ಮದ ಬಗ್ಗೆ ನಟ ಚೇತನ್ ಇತ್ತೀಚೆಗೆ ಟ್ವೀಟ್ ಮಾಡಿದ್ದರು. ಇದರಿಂದ ಧಾರ್ಮಿಕ ಭಾವನೆಗೆ ಧಕ್ಕೆ ಆಗಿದೆ ಎಂಬುದಾಗಿ ಶಿವಕುಮಾರ್ ಎಂಬುವವರು ದೂರು ನೀಡಿದ್ದು, ಎಫ್’ಐಆರ್ ದಾಖಲಿಸಿಕೊಳ್ಳಲಾಗಿತ್ತು.

ಮಂಗಳವಾರ ಬೆಳಿಗ್ಗೆ ಮನೆಯಲ್ಲಿ ಚೇತನ್ ಅವರನ್ನು ಬಂಧಿಸಲಾಗಿದೆ. ನ್ಯಾಯಾಧೀಶರ ಎದುರು ಹಾಜರುಪಡಿಸಲು ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.