ಚಾಮರಾಜನಗರ: ಸಚಿವ ವಿ ಸೋಮಣ್ಣ ಅವರಿಗೆ ಚಾಮರಾಜನಗರ ಜಿಲ್ಲೆಯ ಚುನಾವಣಾ ಉಸ್ತುವಾರಿ ನೀಡಬಾರದು ಎಂದು ಚಾಮರಾಜನಗರ ಜಿಲ್ಲಾ ಬಿಜೆಪಿ ವಕ್ತಾರ ಅಯ್ಯನಪುರ ಶಿವಕುಮಾರ್ ಒತ್ತಾಯಿಸಿದರು.
ನಗರದಲ್ಲಿ ಇಂದು ಬಿಜೆಪಿಯ 6 ಮಹಾಶಕ್ತಿ ಕೇಂದ್ರಗಳ ಅಧ್ಯಕ್ಷರೊಂದಿಗೆ ಸುದ್ದಿಗೋಷ್ಢಿ ನಡೆಸಿದ ಅವರು, ಚಾಮರಾಜನಗರ ಜಿಲ್ಲೆಯಲ್ಲಿ ಸೋಮಣ್ಣ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಬಾರದು. ಕಳೆದ ಬಾರಿ ಚುನಾವಣೆಯಲ್ಲಿ ಸೋಮಣ್ಣ ನಮ್ಮ ಪಕ್ಷದ ಪರ ಕೆಲಸ ಮಾಡಿಲ್ಲ. ನಮ್ಮ ಅಭ್ಯರ್ಥಿ ವಿರುದ್ಧ ಗೆದ್ದ ಅಭ್ಯರ್ಥಿಗೆ ಮನೆಯನ್ನೇ ಗಿಫ್ಟ್ ಕೊಟ್ಟಿದ್ದಾರೆ. ಲೋಕಸಭಾ ಚುನಾವಣೆಯಲ್ಲೂ ಪಕ್ಷದ ಪರ ಕೆಲಸ ಮಾಡಿಲ್ಲ. ಹೀಗಾಗಿ ಅವರಿಗೆ ಇಲ್ಲಿಂದ ಸ್ಪರ್ಧಿಸಲು ಅವಕಾಶ ನೀಡಬಾರದು. ಅವರಿಗೆ ಚುನಾವಣಾ ಉಸ್ತುವಾರಿಯನ್ನು ನೀಡಬಾರದು ಎಂದರು.
ತನಗೆ ಚಾಮರಾಜನಗರ ಚುನಾವಣಾ ಉಸ್ತುವಾರಿ ಮತ್ತು ಟಿಕೆಟ್ ನೀಡಬೇಕು. ಇಲ್ಲವಾದರೆ ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತೇನೆ ಎಂದು ಅವರು ದೆಹಲಿಯಲ್ಲಿ ಬ್ಲಾಕ್ಮೇಲ್ ಮಾಡಿದ್ದಾರೆ. ಸೋಮಣ್ಣ ನನಗೆ ಫೋನ್ ಮಾಡಿ ಸುದ್ದಿಗೋಷ್ಠಿ ಮಾಡಬೇಡಿ ಎಂದು ಹೇಳಿದರು. ಅವರು ಚಾಮರಾಜನಗರ ಜಿಲ್ಲೆಯಲ್ಲೇ ಸ್ಪರ್ಧೆ ಮಾಡಬಾರದು. ಅವರಿಗೆ ಯಾವುದೇ ಕಾರಣಕ್ಕೂ ಟಿಕೆಟ್ ನೀಡಲು ಬಿಡಲ್ಲ ಎಂದು ಗುಡುಗಿದರು.
ಜನ ಸಂಕಲ್ಪ ರಥಯಾತ್ರೆಯಲ್ಲೂ ಪಾಲ್ಗೊಳ್ಳಲಿಲ್ಲ. ಕಳೆದ ಒಂದೂವರೆ ವರ್ಷದಿಂದ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆ ಬೆಂಬಲ ನೀಡುವ ರೀತಿ ನಡೆದುಕೊಂಡಿದ್ದಾರೆ. ಜಿಲ್ಲೆಗೆ ಸೋಮಣ್ಣ ಬೇಕು ಎಂಬುವವರು ಅವರ ಕೆಲವು ಬೆಂಬಲಿಗರು ಮಾತ್ರ. ಪಕ್ಷದ ಅಧಿಕಾರದಲ್ಲಿರುವವರು ಸೋಮಣ್ಣ ಜಿಲ್ಲೆಗೆ ಬೇಡ ಎಂದು ಹೇಳುತ್ತಾರೆ ಎಂದು ಹೇಳಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.