ಮನೆ ರಾಜ್ಯ ಸಿದ್ದರಾಮಯ್ಯ ಬಯಸಿದರೆ ಆಳಂದ ಕ್ಷೇತ್ರ ಬಿಟ್ಟುಕೊಡುತ್ತೇನೆ: ಬಿ.ಆರ್. ಪಾಟೀಲ

ಸಿದ್ದರಾಮಯ್ಯ ಬಯಸಿದರೆ ಆಳಂದ ಕ್ಷೇತ್ರ ಬಿಟ್ಟುಕೊಡುತ್ತೇನೆ: ಬಿ.ಆರ್. ಪಾಟೀಲ

0

ಕಲಬುರಗಿ: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬಯಸಿದರೆ ಅವರಿಗಾಗಿ ಆಳಂದ ಕ್ಷೇತ್ರವನ್ನು ಬಿಟ್ಟು ಕೊಡುತ್ತೇನೆ ಎಂದು ಮಾಜಿ ಶಾಸಕ ಬಿ.ಆರ್. ಪಾಟೀಲ ಸ್ಪಷ್ಟಪಡಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಅವರು ನನಗೆ ಮೊದಲಿನಿಂದಲೂ ಆಪ್ತರು. ಇಬ್ಬರೂ ಒಂದೇ ಸಮಯಕ್ಕೆ ರಾಜಕಾರಣ ಪ್ರವೇಶ ಮಾಡಿದ್ದೇವೆ. ಅವರು ಇಲ್ಲಿಂದ ಸ್ಪರ್ಧಿಸಲು ಬಯಸಿದರೆ ಅತ್ಯಂತ ಸಂತೋಷದಿಂದ ಅವರಿಗಾಗಿ ಕ್ಷೇತ್ರ ಬಿಟ್ಟು ಕೊಡುತ್ತೇನೆ. ಅವರು ಒಮ್ಮೆ ಬಂದು ನಾಮಪತ್ರ ಸಲ್ಲಿಸಿ ಹೋದರೂ ಸಾಕು. ನಾನೇ ಮುಂದೆ ನಿಂತು ಅವರನ್ನು ಗೆಲ್ಲಿಸಿಕೊಂಡು ಬರುತ್ತೇನೆ ಎಂದರು.