ಮನೆ ರಾಜಕೀಯ ಕಾಂಗ್ರೆಸ್ ನಾಯಕರಿಂದ ರಾಜಭವನ ಚಲೋ: ಸಿದ್ದರಾಮಯ್ಯ ಡಿಕೆಶಿ ಪೊಲೀಸರ ವಶಕ್ಕೆ

ಕಾಂಗ್ರೆಸ್ ನಾಯಕರಿಂದ ರಾಜಭವನ ಚಲೋ: ಸಿದ್ದರಾಮಯ್ಯ ಡಿಕೆಶಿ ಪೊಲೀಸರ ವಶಕ್ಕೆ

0

ಬೆಂಗಳೂರು: ಎಸ್‌’ಸಿ ಮೀಸಲಾತಿ ವಿಳಂಬ ಖಂಡಿಸಿ ರಾಜಭವನ ಚಲೋ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ನಾಯಕರನ್ನು ಪೊಲೀಸರು ಮಾರ್ಗ ಮಧ್ಯೆ ತಡೆದು ವಶಕ್ಕೆ ಪಡೆದಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ಸೇರಿದಂತೆ ಮುಖಂಡರು ಹಲವು ಘೋಷಣೆ ಕೂಗಿದರು.

ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಸದ್ಯ ಕಾಂಗ್ರೆಸ್‌ ನಾಯಕರನ್ನು ವಶಕ್ಕೆ ಪಡೆದಿರುವ ಪೊಲೀಸರು ಬಸ್‌’ನಲ್ಲಿ ಕರೆದುಕೊಂಡು ಹೋಗಿದ್ದಾರೆ.