ಕೇಂಬ್ರಿಜ್ ವಿಶ್ವವಿದ್ಯಾಲಯದಲ್ಲಿ ಈಚೆಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಮಾಡಿದ ಭಾಷಣದ ಸಂಬಂಧ ಎಫ್’ಐಆರ್ ದಾಖಲಿಸಲು ಆದೇಶಿಸುವಂತೆ ಕೋರಿ ಬಿಜೆಪಿ ನಾಯಕರೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ವಾರಾಣಸಿ ನ್ಯಾಯಾಲಯವು ವಜಾ ಮಾಡಿದೆ.
ಕೇಂಬ್ರಿಜ್ ವಿಶ್ವವಿದ್ಯಾಲಯದಲ್ಲಿ ರಾಹುಲ್ ಗಾಂಧಿ ಅವರು ಮಾಡಿದ ಭಾಷಣವು ವಿಭಜನಕಾರಿ ಮತ್ತು ಭಾರತದ ಸಂವಿಧಾನಕ್ಕೆ ವಿರುದ್ಧವಾಗಿವೆ ಎಂದು ಆಕ್ಷೇಪಿಸಿ ಬಿಜೆಪಿ ಸದಸ್ಯ ಮತ್ತು ವಕೀಲ ಶಶಾಂಕ್ ಶೇಖರ್ ತ್ರಿಪಾಠಿ ಅವರು ಅರ್ಜಿ ಸಲ್ಲಿಸಿದ್ದರು.
ರಾಹುಲ್ ಗಾಂಧಿ ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 120ಬಿ (ಕ್ರಿಮಿನಲ್ ಪಿತೂರಿ), 147 (ಗಲಭೆ ಸೃಷ್ಟಿ), 153ಎ (ದ್ವೇಷ ಹರಡುವುದು), 295ಎ (ದುರುದ್ದೇಶಪೂರಿತ ಕೃತ್ಯ), 295 (ಪೂಜಾ ಸ್ಥಳಕ್ಕೆ ಹಾನಿ) ಅಡಿ ಪ್ರಕರಣ ದಾಖಲಿಸಲು ಕೋರಲಾಗಿತ್ತು.
ಸಿಆರ್ಪಿಸಿ ಸೆಕ್ಷನ್ 156ರ ಅಡಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ನ್ಯಾಯಾಧೀಶರಾದ ಉಜ್ವಲ್ ಉಪಾಧ್ಯಾಯ ಅವರು ವಜಾ ಮಾಡಿದ್ದು, ಸಂವಿಧಾನದ 19(1)(ಎ) ಅಡಿ ದೊರೆತಿರುವ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ವ್ಯಾಪ್ತಿಗೆ ರಾಹುಲ್ ಗಾಂಧಿ ಅವರು ನೀಡಿರುವ ಹೇಳಿಕೆಗಳು ಒಳಪಡಲಿವೆ ಎಂದು ಹೇಳಿದ್ದರು.
ದೇಶದ ಏಕತೆ ಮತ್ತು ಸಾರ್ವಭೌಮತೆಗೆ ಧಕ್ಕೆಯಾಗುವ ರೀತಿಯಲ್ಲಿ ರಾಹುಲ್ ಗಾಂಧಿ ಹೇಳಿಕೆಗಳು ಇದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಭಯೋತ್ಪಾದನಾ ಸಂಘಟನೆಗೆ ಹೋಲಿಕೆ ಮಾಡಿದ್ದಾರೆ. ಮುಸ್ಲಿಮ್ ಭ್ರಾತೃತ್ವದ ಬಗ್ಗೆಯೂ ಮಾತನಾಡಿದ್ದು, ರಾಹುಲ್ ಹೇಳಿಕೆಗಳು 10 ಕೋಟಿ ಸ್ವಯಂಸೇವಕರಿಗೆ ನೋವುಂಟು ಮಾಡಿವೆ ಎಂದು ಅರ್ಜಿಯಲ್ಲಿ ವಿವರಿಸಲಾಗಿತ್ತು.
ಜಾತಿ, ಧರ್ಮ ಇತ್ಯಾದಿ ವಿಚಾರಗಳ ಆಧಾರದಲ್ಲಿ ದೇಶವನ್ನು ವಿಭಜಿಸುವ ಪಿತೂರಿಯ ಹೇಳಿಕೆಗಳನ್ನು ರಾಹುಲ್ ನೀಡಿದ್ದು, ಅದು ದ್ವೇಷ ಭಾಷೆಗೆ ಸಮನಾಗಿದೆ ಎಂದು ಆಕ್ಷೇಪಿಸಲಾಗಿತ್ತು.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.