ಹೊಸದಿಲ್ಲಿ : ಕಳೆದ ವರ್ಷ ಡಿಸೆಂಬರ್ 30ರಂದು ಡೆಲ್ಲಿ-ಡೆಹರಾಡೂನ್ ಹೈ-ವೇನಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡ ಟೀಮ್ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ರಿಷಭ್ ಪಂತ್, ಬರೋಬ್ಬರಿ ಒಂದು ವರ್ಷಕ್ಕೂ ಹೆಚ್ಚು ಸಮಯ ಕ್ರಿಕೆಟ್ ನಿಂದ ದೂರ ಉಳಿಯುವಂತ್ತಾಗಿದೆ.
ಪರಿಣಾಮ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್, 2023ರ ಐಸಿಸಿ ಟೆಸ್ಟ್ ವಿಶ್ವ ಚಾಂಪಿಯನ್ಷಿಪ್ ಫೈನಲ್, ಏಷ್ಯಾ ಕಪ್ ಹಾಗೂ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಅಂತಹ ಮಹತ್ವದ ಟೂರ್ನಿಗಳಿಂದ ಹೊರಬಿದ್ದಿದ್ದಾರೆ.
ಇನ್ನು ಐಪಿಎಲ್ 2023 ಟೂರ್ನಿ ಮಾರ್ಚ್ 31ರಂದು ಶುರುವಾಗಲಿದ್ದು, ಡೆಲ್ಲಿ ಕ್ಯಾಪಿಟಲ್ಸ್ ತಂಡ ಏಪ್ರಿಲ್ 1ರಂದು ಲಖನೌ ಸೂಪರ್ ಜಯಂಟ್ಸ್ ಎದುರು ತನ್ನ ಅಭಿಯಾನ ಆರಂಭಿಸಲಿದೆ. ಕ್ಯಾಪ್ಟನ್ ರಿಷಭ್ ಪಂತ್ ಅಲಭ್ಯರಾಗಿರುವ ಹಿನ್ನಲೆಯಲ್ಲಿ ಆಸ್ಟ್ರೇಲಿಯಾದ ಅನುಭವಿ ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಲಿದ್ದಾರೆ. ಟೂರ್ನಿಗೆ ಹೊಸ ಹುರುಪಿನಲ್ಲಿ ಕಣಕ್ಕಿಳಿಯುತ್ತಿರುವ ಡೆಲ್ಲಿ ಫ್ರಾಂಚೈಸಿ ಶುಕ್ರವಾರ ತನ್ನ ನೂತನ ಜರ್ಸಿ ಅನಾವರಣ ಪಡಿಸಿದೆ.
ಸಮವಸ್ತ್ರ ಬಿಡುಗಡೆ ಬಳಿಕ ಮಾತನಾಡಿದ ಡೆಲ್ಲಿ ತಂಡದ ಮುಖ್ಯ ಕೋಚ್ ರಿಕಿ ಪಾಂಟಿಂಗ್, ಕ್ಯಾಪ್ಟನ್ ರಿಷಭ್ ಪಂತ್ ಅವರ ಉಪಸ್ಥಿತಿ ಇರದೇ ಇದ್ದರೂ ತಂಡ ಜೀವ ಮತ್ತು ಹೃದಯ ಅವರೇ ಎಂದು ಕರೆದಿದ್ದಾರೆ.
ಸಾಮಾನ್ಯವಾಗಿ ಅವರು ಪ್ರತಿ ಪಂದ್ಯದಲ್ಲಿ ನನ್ನ ಪಕ್ಕ ಕುಳಿತುಕೊಳ್ಳುತ್ತಿದ್ದರು. ಈ ಬಾರಿ ಅದು ಸಾಧ್ಯವಾಗದೇ ಇದ್ದರೆ, ಸಾಧ್ಯವಾದ ರೀತಿಯಲ್ಲಿ ತಂಡದಲ್ಲಿ ಅವರ ಉಪಸ್ಥಿತಿ ತಂದುಕೊಳ್ಳಲಿದ್ದೇವೆ. ನಮ್ಮ ಜರ್ಸಿ ಮತ್ತು ಕ್ಯಾಪ್ ನಲ್ಲಿ ಅವರ ನಂಬರ್ ನಮೂದಿಸಲಿದ್ದೇವೆ. ರಿಷಭ್ ಪಂತ್ ಇಲ್ಲಿ ಇರದೇ ಇದ್ದರೂ ಅವರೇ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕ್ಯಾಪ್ಟನ್ ಎಂಬುದು ಸ್ಪಷ್ಟ ಎಂದು ರಿಕಿ ಪಾಂಟಿಂಗ್ ಹೇಳಿದ್ದಾರೆ.
ಡೇವಿಡ್ ವಾರ್ನರ್ ತಂಡದ ಹಂಗಾಮಿ ನಾಯಕ ಎಂಬುದು ಸ್ಪಷ್ಟವಾಗಿದೆ. ಆದರೆ ಮೊದಲ ಆಯ್ಕೆಯ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಯಾರು ಎಂಬುದು ಇನ್ನು ತಿಳಿದುಬಂದಿಲ್ಲ.
ವಿಕೆಟ್ ಕೀಪರ್ ಯಾರಾಗಲಿದ್ದಾರೆ ಎಂಬುದನ್ನು ನಾವಿನ್ನೂ ನಿರ್ಧರಿಸಿಲ್ಲ. ಗಾಯದಿಂದ ಚೇತರಿಸಿರುವ ಸರ್ಫರಾಝ್ ಖಾನ್ ತಂಡ ಸೇರಿಕೊಂಡಿದ್ದಾರೆ. ಅಭ್ಯಾಸ ಪಂದ್ಯದ ಬಳಿಕ ವಿಕೆಟ್ ಕೀಪರ್ ಯಾರೆಂದು ನಿರ್ಧಾರ ಮಾಡುತ್ತೇವೆ. ರಿಷಭ್ ಪಂತ್ ಅನುಪಸ್ಥಿತಿಯಲ್ಲಿ ತಂಡಕ್ಕೆ ಎದುರಾದ ಬಹುದೊಡ್ಡ ಹಿನ್ನಡೆ ಎಂದರೆ ವಿಕೆಟ್ ಕೀಪಿಂಗ್. ಈ ಬಾರಿ ಇಂಪ್ಯಾಕ್ಟ್ ಪ್ಲೇಯರ್ ನಿಯಮ ಬಂದಿರುವುದರಿಂದ ಅದರ ಸದ್ಬಳಕೆ ಮಾಡಿಕೊಳ್ಳಲಿದ್ದೇವೆ ಎಂದು ವಿವರಿಸಿದ್ದಾರೆ.
ಸನ್ ರೈಸರ್ಸ್ ಹೈದರಾಬಾದ್ ತಂಡದ ಮಾಜಿ ನಾಯಕ ಡೇವಿಡ್ ವಾರ್ನರ್ ಅವರನ್ನು ಐಪಿಎಲ್ 2022 ಟೂರ್ನಿ ಸಲುವಾಗಿ ನಡೆದ ಮೆಗಾ ಆಕ್ಷನ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 6.25 ಕೋಟಿ ರೂ. ನೀಡಿ ಖರೀದಿ ಮಾಡಿತ್ತು. ಇದಕ್ಕೆ ಬೆಲೆ ತಂದ ವಾರ್ನರ್, 48ರ ಸರಾಸರಿಯಲ್ಲಿ 432 ರನ್ ಬಾರಿಸಿ ತಂಡದ ಪರ ಗರಿಷ್ಠ ರನ್ ಸ್ಕೋರರ್ ಆಗಿ ಹೊರಹೊಮ್ಮಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.