ಮನೆ ಮನರಂಜನೆ ಮೈಸೂರಿನಲ್ಲಿ ಚಿತ್ರಮಂದಿರಕ್ಕೆ ನಟ ಶಿವರಾಜ್ ಕುಮಾರ್ ಭೇಟಿ: ಪಟಾಕಿ ಸಿಡಿಸಿ ಅಭಿಮಾನಿಗಳಿಂದ ಸಂಭ್ರಮ

ಮೈಸೂರಿನಲ್ಲಿ ಚಿತ್ರಮಂದಿರಕ್ಕೆ ನಟ ಶಿವರಾಜ್ ಕುಮಾರ್ ಭೇಟಿ: ಪಟಾಕಿ ಸಿಡಿಸಿ ಅಭಿಮಾನಿಗಳಿಂದ ಸಂಭ್ರಮ

0

ಮೈಸೂರು:  ನಟ ದಿ. ಪುನೀತ್ ರಾಜ್ ಕುಮಾರ್ ಅವರ ಹುಟ್ಟಹಬ್ಬವಾದ ಇಂದು ಅವರ ಕೊನೆಯ ಚಿತ್ರ ಜೇಮ್ಸ್ ಬಿಡುಗಡೆಯಾಗಿದ್ದು, ಭರ್ಜರಿ ಸ್ವಾಗತ ಸಿಕ್ಕಿದೆ.

ಈ ನಡುವೆ ಗಾಯತ್ರಿ ಚಿತ್ರಮಂದಿರಕ್ಕೆ ನಟ ಶಿವರಾಜ್ ಕುಮಾರ್ ಭೇಟಿ ನೀಡಿದ್ದು, ಶಿವಣ್ಣನ ಅಭಿಮಾನಿಗಳು ಹರ್ಷೋದ್ಗಾರ ವ್ಯಕ್ತಪಡಿಸಿದರು. ಈ ವೇಳೆ ಅಭಿಮಾನಿಗಳು ನೀಡಿದ ಪುನೀತ್ ಭಾವಚಿತ್ರಕ್ಕೆ  ಮುತ್ತಿಟ್ಟ ನಟ ಶಿವಣ್ಣ ಮುತ್ತಿಕ್ಕಿದರು. ಇದೇ ವೇಳೆ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಈ ವೇಳೆ ಮಾತನಾಡಿದ ನಟ ಶಿವಕುಮಾರ್, ಡಬ್ಬಿಂಗ್ ಮಾಡುವ ವೇಳೆ ನನಗೆ ತುಂಬಾ ನೋವಾಗ್ತಾ ಇತ್ತು. ಅಪ್ಪು ಇಲ್ಲದ ಹುಟ್ಟುಹಬ್ಬ ಆಚರಣೆ ತುಂಬಾ ದುಃಖದ ವಿಚಾರ. ಏನ್ ಇದೆ ಅದನ್ನ ನೋಡಿಕೊಂಡು ಮುಂದೆ ಹೋಗ್ತಾ ಇರಬೇಕು. ಹುಟ್ಟುಹಬ್ಬಕ್ಕೆ ಇಬ್ಬರೂ ಗಿಫ್ಟ್ ಗಳನ್ನ ಶೇರ್ ಮಾಡ್ತಾ ಇದ್ದವು.  ಅಪ್ಪುಗೆ ಬ್ರಾಂಡ್ ವಾಚ್ ,ಬೆಲ್ಟ್, ಗಾಗಲ್ ಸಾಕಷ್ಟು ಕೊಟ್ಟಿದ್ದೇನೆ ಅಪ್ಪು ಎಲ್ಲರ ಹೃದಯದಲ್ಲಿ ಇದ್ದಾನೆ‌. ಅವನ ಸಿನಿಮಾ ಬಿಡುಗಡೆ ಆಗಿದೆ. ಅವನಿಲ್ಲದ ವೇಳೆ ಸಿನಿಮಾ ಬಿಡುಗಡೆ ಹೆಚ್ಚು ದುಃಖ ತರುತ್ತಿದೆ ಎಂದು ಸ್ಮರಿಸಿದರು.

ಫಿಲ್ಮ್ ಸಿಟಿಗೆ ಪುನೀತ್ ರಾಜ್ ಕುಮಾರ್ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ನಟ ಶಿವಣ್ಣ, ಪುನೀತ್ ರಾಜ್ ಕುಮಾರ್ ಹೆಸರಿಟ್ಟರೆ ಸಂತೋಷನೆ ಆಗುತ್ತೆ. ಕುಟುಂಬ ಸದಸ್ಯನಾಗಿ ನಾನು ಆ ರೀತಿಯ ಒತ್ತಾಯ ಮಾಡಲ್ಲ. ಅಭಿಮಾನಿಗಳು ಅಭಿಮಾನದಿಂದ ಹೇಳ್ತಿದ್ದಾರೆ. ಅದರಂತೆ ಪುನೀತ್ ರಾಜ್ ಕುಮಾರ್ ಹೆಸರಿಟ್ಟರೂ ಸಂತೋಷ‌. ಚಿತ್ರರಂಗಕ್ಕೆ ದುಡಿದವ್ರು ಸಾಕಷ್ಟು ಮಂದಿ ಇದ್ದಾರೆ ಅವ್ರ ಹೆಸರನ್ನೂ ಇಡಬಹುದು ಎಂದು ತಿಳಿಸಿದರು.