ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿ ಅವರು ಚಿಕ್ಕಬಳ್ಳಾಪುರಕ್ಕೆ ಶನಿವಾರ ಆಗಮಿಸಿದರು.
ಸೇನಾ ಹೆಲಿಕಾಪ್ಟರ್ ಮೂಲಕ ಬೆಳಗ್ಗೆ 11 ಗಂಟೆ ಸುಮಾರಿಗೆ ಮೋದಿ ಚಿಕ್ಕಬಳ್ಳಾಪುರದ ಸತ್ಯಸಾಯಿ ಗ್ರಾಮದ ಹೆಲಿಪ್ಯಾಡ್’ಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರು, ಶಾಸಕರು ಬರಮಾಡಿಕೊಂಡರು.
ಪ್ರಧಾನಿ ಅವರು ಸತ್ಯಸಾಯಿ ಗ್ರಾಮದಲ್ಲಿ ನಿರ್ಮಿಸಿರುವ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕಾಲೇಜು, ಸತ್ಯಸಾಯಿ ರಾಜೇಶ್ವರಿ ಭವನವನ್ನು ಉದ್ಘಾಟಿಸಲಿದ್ದಾರೆ.
ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದಲೇ ಆಶ್ರಮದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಕಳೆದ ವರ್ಷ ಕೇಂದ್ರ ಗೃಹ ಸಚಿವ ಅಮಿತ್ ಶಾ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕಾಲೇಜು ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ್ದರು.
ಒಂದೇ ವರ್ಷದಲ್ಲಿ ಭವ್ಯವಾದ ಕಟ್ಟಡ ತಲೆ ಎತ್ತಿದೆ. ಬುಧವಾರ ಮತ್ತು ಗುರುವಾರ ಇಡೀ ಕಾಲೇಜಿನ ಕಟ್ಟಡವನ್ನು ಆಶ್ರಮವನ್ನು ನಾನಾ ರೀತಿಯ ಕೃತಕ ಹೂಗಳು, ಮ್ಯಾಟ್ಗಳಿಂದ ಸಿಂಗರಿಸಲಾಗಿತ್ತು.
ಶುಕ್ರವಾರ ಇಡೀ ಆವರಣವನ್ನು ಪೊಲೀಸರು ಮತ್ತು ಪ್ರಧಾನಿ ಅವರ ಭದ್ರತಾ ಸಿಬ್ಬಂದಿ ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದರು. ಕಳೆದ ಎರಡು ದಿನಗಳಿಂದ ಪೊಲೀಸರು ಆಶ್ರಮದಲ್ಲಿ ಮೊಕ್ಕಾಂ ಹೂಡಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.