ನವದೆಹಲಿ: ರಾಹುಲ್ ಗಾಂಧಿ ಅನರ್ಹತೆಯನ್ನು ವಿರೋಧಿಸಿ ಸಂಸದರು ಕಪ್ಪು ಬಟ್ಟೆ, ಕಪ್ಪು ಪಟ್ಟಿ ಧರಿಸಿ ಸಂಸತ್ತಿಗೆ ಆಗಮಿಸಿದ್ದಾರೆ. ಬಳಿಕ ಗಾಂಧಿ ಪ್ರತಿಮೆ ಭಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಮಲ್ಲಿಕಾರ್ಜುನ ಖರ್ಗೆ, ನಮ್ಮನ್ನು ಬೆಂಬಲಿಸಿದ ಎಲ್ಲರಿಗೂ ನಾನು ಧನ್ಯವಾದ ಸಲ್ಲಿಸುತ್ತೇನೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಸಂರಕ್ಷಿಸಲು ಯಾರಾದರೂ ಮುಂದೆ ಬಂದರೆ ಅವರನ್ನು ನಾವು ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ.
ಸತ್ಯ ಹೊರಬೇಕೆಂದು ನಾವು ಬಯಸುತ್ತೇವೆ. ಅದಾನಿ ಆಸ್ತಿ ಎರಡೂವರೆ ವರ್ಷಗಳಲ್ಲಿ ಹೆಚ್ಚಾಗಲು ಕಾರಣ ಏನಿರಬಹುದು? ಅವರಲ್ಲಿ ಮಾಟ ಮಂತ್ರವಿದ್ದರೆ ಅದನ್ನು ನಾಗರಿಕರೂ ತಿಳಿಸಲು ಬಯಸುತ್ತೇವೆ. ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಯಾದ್ದಲ್ಲಿ ಆ ಮ್ಯಾಜಿಕ್ ಬಗ್ಗೆ ನಮಗೆ ಮತ್ತು ಜನರಿಗೆ ತಿಳಿಯುತ್ತದೆ ಎಂದು ಹೇಳಿದರು.
ಸಮಾನ ಮನಸ್ಕ ವಿಪಕ್ಷಗಳ ಸಂಸದರ ಸಭೆ
![](https://savaltv.com/wp-content/uploads/2023/03/meeting-1024x461.jpg)
ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಬಿಆರ್’ಎಸ್, ಸಮಾಜವಾದಿ ಪಕ್ಷ ಸೇರಿದಂತೆ ಸಮಾನ ಮನಸ್ಕ ವಿಪಕ್ಷಗಳ ಸಂಸದರು ಸಂಸತ್ತಿನ ಸಂಕೀರ್ಣಿದಲ್ಲಿ ಸೋಮವಾರ ಸಭೆ ನಡೆಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕೊಠಡಿಯಲ್ಲಿ ಡಿಎಂಕೆ, ಸಮಾಜವಾದಿ ಪಕ್ಷ, ಜೆಡಿ (ಯು), ಬಿಆರ್ಎಸ್, ಸಿಪಿಐ (ಎಂ), ಸಿಬಿಐ, ಆರ್ಜೆಡಿ, ಎನ್ಸಿಪಿ, ಐಯುಎಂಎಲ್, ಎಂಡಿಎಂಕೆ, ಕೇರಳ ಕಾಂಗ್ರೆಸ್, ಟಿಎಂಸಿ, ಆರ್ಎಸ್ಪಿ, ಎಎಪಿ, ಎನ್ಪಿ ಮತ್ತು ಶಿವಸೇನೆ (ಯುಬಿಟಿ) ಪಕ್ಷಗಳ ನಾಯಕರು ಭೇಟಿಯಾದರು.
ಪ್ರಮುಖವಾಗಿಯೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಿರುವುದು ಮತ್ತು ಅದಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಲಾಗಿದೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.