ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಕಾಂಗ್ರೆಸ್ ಪಕ್ಷದ ಡಿ.ತ್ರಿವೇಣಿ ಆಯ್ಕೆಯಾಗಿದ್ದು, ಉಪ ಮೇಯರ್ ಆಗಿ ಬಿ.ಜಾನಕಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
23 ವರ್ಷದ ತ್ರಿವೇಣಿ ರಾಜ್ಯದ ಅತಿ ಕಿರಿಯ ಮೇಯರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಬಳ್ಳಾರಿ ಮಹಾನಗರ ಪಾಲಿಕೆಗೆ ಇಂದು ಚುನಾವಣೆ ನಡೆಯಿತು. ಮೇಯರ್ ಸ್ಥಾನ ಪರಿಶಿಷ್ಟ ಜಾತಿಗೆ, ಉಪ ಮೇಯರ್ ಸ್ಥಾನ ಎಸ್ಟಿ ಮಹಿಳೆಗೆ ಮೀಸಲಿತ್ತು. ಇನ್ನು ಪಾಲಿಕೆಯಲ್ಲಿ 39 ಸದಸ್ಯರಿದ್ದು, ಸಂಸದರು, ಶಾಸಕರ ಮತಗಳಿಂದ ಬಿಜೆಪಿ 16 ಮತಗಳನ್ನು ಹೊಂದಿದ್ದರೆ ಕಾಂಗ್ರೆಸ್ 28 ಮತಗಳನ್ನು ಹೊಂದಿತ್ತು.
ಮೇಯರ್ ಸ್ಥಾನಕ್ಕೆ ಕಾಂಗ್ರೆದ್ ನಿಂದ 35ನೇ ವಾರ್ಡಿನ ಸದಸ್ಯ ವಿ.ಕುಬೇರ, 7ನೇ ವಾರ್ಡಿನ ಉಮದೇವಿ ಶಿವರಾಜ್ ಮತ್ತು ಡಿ.ತ್ರಿವೇಣಿ ಅವರು, ಬಿಜೆಪಿಯಿಂದ 16ನೇ ವಾರ್ಡಿನ ನಾಗರತ್ನ ಅವರು ನಾಮಪತ್ರ ಸಲ್ಲಿಸಿದ್ದರು. ಈ ಮಧ್ಯೆ ಕಾಂಗ್ರೆಸ್ ಪಕ್ಷದ ಕುಬೇರ ಮತ್ತು ಉಮಾದೇವಿ ನಾಮ ಪತ್ರ ಪಡೆದಿದ್ದು ಡಿ.ತ್ರಿವೇಣಿ ಮತ್ತು ನಾಗರತ್ನ ಅವರ ನಡುವೆ ಸ್ಪರ್ಧೆ ಏರ್ಪಟ್ಟಿತ್ತು. ಹಾಜರಿದ್ದ 44 ಸದಸ್ಯರ ಪೈಕಿ ತ್ರಿವೇಣಿ 28 ಮತಗಳನ್ನು ಪಡೆದರೆ ನಾಗರತ್ನ ಅವರು 16 ಮತಗಳನ್ನು ಪಡೆದಿದ್ದರು.
ಮೇಯರ್ ಆಗಿ ತ್ರಿವೇಣಿ ಆಯ್ಕೆಯನ್ನು ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ ಘೋಷಣೆ ಮಾಡಿದರು. ಪಾಲಿಕೆ ಆಯುಕ್ತ ರುದ್ರೇಶ್, ಎಡಿಸಿ ಉಪಸ್ಥಿತರಿದ್ದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.