ರಾಯಚೂರು: ಎಸ್’ಎಸ್’ಎಲ್’ಸಿ ವಿದ್ಯಾರ್ಥಿನಿಗೆ ಅಂಕ ಮತ್ತು ಉಚಿತ ದಾಖಲಾತಿಯ ಆಸೆ ತೋರಿಸಿ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿರುವ ಗಂಭೀರ ಆರೋಪದಡಿ ಪ್ರಾಂಶುಪಾಲ ವಿಜಯಕುಮಾರ ಅಂಗಡಿಯನ್ನು ಇಲ್ಲಿನ ಶಕ್ತಿನಗರ ಪೊಲೀಸರು ಬಂಧಿಸಿದ್ದಾರೆ.
ಶಕ್ತಿನಗರದ ಶಾಲೆಯೊಂದರಲ್ಲಿ ಪ್ರಾಂಶುಪಾಲರಾಗಿರುವ ವಿಜಯಕುಮಾರ ಅಂಗಡಿ ವಿರುದ್ಧ ಎಸ್’ಎಸ್’ಎಲ್’ಸಿ ವಿದ್ಯಾರ್ಥಿನಿ, ನನ್ನ ಜೊತೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದೂರಿನ ವಿವರ: ವಿಜಯಕುಮಾರ ಅಂಗಡಿ ನಮ್ಮ ಸರ್. ಕಳೆದ 6 ತಿಂಗಳಿನಿಂದ ಆಗಾಗ್ಗೆ ತಮ್ಮ ಕೊಠಡಿಗೆ ಕರೆದು ಅಸಭ್ಯವಾಗಿ ವರ್ತಿಸುವುದು, ಕರೆ ಮಾಡಿ ಅಸಭ್ಯವಾಗಿ ಮಾತನಾಡುವುದು, ವಾಟ್ಸ್ ಆ್ಯಪ್ ನಲ್ಲಿ ಅಸಭ್ಯ ಪದಗಳಿಂದ ಚಾಟಿಂಗ್ ಮಾಡುತ್ತಿದ್ದಾರೆ. 2023ರ ಮಾರ್ಚ್16ರಂದು ಮಧ್ಯಾಹ್ನ 1 ಗಂಟೆಗೆ ಶಾಲೆಯ ಚೇಂಬರ್ ಗೆ ನನ್ನನ್ನು ಕರೆಸಿದ್ದರು. ನೀನು ನನಗೆ ಸಹಕರಿಸು, ಒಳ್ಳೆಯ ಅಂಕ ನೀಡುತ್ತೇನೆ. ರಾಯಚೂರಿನಲ್ಲಿ ಮುಂದಿನ ವಿದ್ಯಾಭ್ಯಾಸಕ್ಕೆ ಒಳ್ಳೆಯ ಕಾಲೇಜಿಗೆ ಯಾವುದೇ ಫೀಸ್ ಇಲ್ಲದೇ ಅಡ್ಮಿಶನ್ ಕೊಡಿಸಿ ಸೇರಿಸುತ್ತೇನೆ ಎಂದು ಹೇಳಿದ್ದಾರೆ. ನಾನು ಭಯಗೊಂಡು ಕೊಠಡಿಯಿಂದ ಹೊರಬಂದು ಮನೆಗೆ ತೆರಳಿದೆ. ವಿದ್ಯಾಭ್ಯಾಸಕ್ಕೆ ಸಮಸ್ಯೆ ಎದುರಾಗಬಹುದೆಂದು ವಿಷಯವನ್ನು ಯಾರಿಗೂ ತಿಳಸದೆ ಸುಮ್ಮನಿದ್ದೆ. ಆದರೆ ಪ್ರಾಂಶುಪಾಲರ ದುರ್ವರ್ತನೆ ಅತಿಯಾಯಿತು. ಇದರಿಂದ ಮನನೊಂದು ನಡೆದ ವಿಷಯವನ್ನೆಲ್ಲ ತಾಯಿಗೆ ತಿಳಿಸಿದೆ ಎಂದು ವಿವರಿಸಿದ್ದಾರೆ.
ವಿಷಯ ತಿಳಿದ ವಿದ್ಯಾರ್ಥಿನಿಯ ಪೋಷಕರಿಗೆ ಶಾಲೆಗೆ ತೆರಳಿ ಪ್ರಾಂಶುಪಾಲರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳೀಯರು, ವಿವಿಧ ಸಂಘಟನೆ ಸದಸ್ಯರು ಆರೋಪಿ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದ್ದಾರೆ. ಬಳಿಕ ಪೊಲೀಸರು ಸ್ಥಳಕ್ಕಾಗಮಿಸಿ ಆರೋಪಿಯನ್ನು ವಶಕ್ಕೆ ಪಡೆದು ನಂತರ ಬಂಧಿಸಿದ್ದಾರೆ.
ಶಕ್ತಿನಗರ ಪೊಲೀಸರು ರಾಯಚೂರು ಮಹಿಳಾ ಪೊಲೀಸ್ ಠಾಣೆಗೆ ಆರೋಪಿಯನ್ನು ಒಪ್ಪಿಸಿದ್ದಾರೆ. ವಿದ್ಯಾರ್ಥಿನಿ ನೀಡಿದ ದೂರಿನ ಆಧಾರದ ಮೇಲೆ ಆರೋಪಿಯ ವಿರುದ್ಧ 20/2023 ಕಲಂ 354 (ಎ), (ಸಿ) ಐಪಿಸಿ ಮತ್ತು 8, 12, ಪೋಕ್ಸೋ ಕಾಯ್ದೆ ಹಾಗೂ 3(1)(ಆರ್)(ಯು)(ವಿ) ಎಸಿ/ಎಸ್ ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.