ಮನೆ ರಾಜಕೀಯ ಬಿಜೆಪಿ ಶಾಸಕ ಎನ್.ವೈ. ಗೋಪಾಲಕೃಷ್ಣ ರಾಜೀನಾಮೆ

ಬಿಜೆಪಿ ಶಾಸಕ ಎನ್.ವೈ. ಗೋಪಾಲಕೃಷ್ಣ ರಾಜೀನಾಮೆ

0

ಶಿರಸಿ: ಕೂಡ್ಲಿಗಿಯ ಬಿಜೆಪಿ ಶಾಸಕ ಎನ್.ವೈ. ಗೋಪಾಲಕೃಷ್ಣ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಶಿರಸಿಯಲ್ಲಿ ಶುಕ್ರವಾರ ರಾಜೀನಾಮೆ ಸಲ್ಲಿಸಿದರು.

ಶಿರಸಿಯ ಕಚೇರಿಗೆ ಆಗಮಿಸಿದ್ದ ಶಾಸಕ ಗೋಪಾಲಕೃಷ್ಣ, ಕಾಗೇರಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು.

ಗೋಪಾಲಕೃಷ್ಣ ಅವರು ಮೂಲತಃ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಗೋಪಾಲಕೃಷ್ಣ ಅವರು ನಾಲ್ಕು ಬಾರಿ ಶಾಸಕರಾಗಿ ಗೆದ್ದಿದ್ದರು.

2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಗದ ಕಾರಣ ಬಿಜೆಪಿ ಪಕ್ಷ ಸೇರ್ಪಡೆಯಾಗಿ ಅಲ್ಲಿ ಬಿಜೆಪಿಯಿಂದ ಟಿಕೆಟ್ ಪಡೆದು ಕೂಡ್ಲಿಗಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ್ದರು.