“ನೀವು ಭೂಮಿನ ಹಾಳು ಮಾಡೋಕೆ ನಿಂತಿದ್ದೀರ, ನಾನು ಕಾಪಾಡೋಕೆ ನಿಂತಿದ್ದೀನಿ…’ ಪೊಲೀಸ್ ಅಧಿಕಾರಿ ಗುರುದೇವ್ ಇಂಥದ್ದೊಂದು ಖಡಕ್ ಡೈಲಾಗ್ ಎದುರಾಳಿಗಳ ಮುಂದೆ ಹೇಳುವಷ್ಟರೊಳಗೆ, ಕೆಲ ಅಮಾಯಕರು ಉಸಿರು ನಿಲ್ಲಿಸಿರುತ್ತಾರೆ.
ದ್ವೇಷದ ಕಿಡಿ ಸುತ್ತಮುತ್ತಲಿರುವವರನ್ನು ಒಂದಷ್ಟು ಆಹುತಿ ತೆಗೆದುಕೊಂಡಿರುತ್ತದೆ. ಗುಂಡಿನ ಮೊರೆತಕ್ಕೆ ದುರಾಳಿಗಳ ಒಂದಷ್ಟು ತಲೆಗಳೂ ಉರುಳಿರುತ್ತದೆ. ಇದು ಈ ವಾರ ತೆರೆಗೆ ಬಂದಿರುವ “ಗುರುದೇವ್ ಹೊಯ್ಸಳ’ ಸಿನಿಮಾದ ಕೆಲ ದೃಶ್ಯಗಳು. ಇಷ್ಟು ಹೇಳಿದ ಮೇಲೆ ಇದೊಂದು ಹೈ ವೋಲ್ಟೇಜ್ ಆ್ಯಕ್ಷನ್ ಸಿನಿಮಾ ಅನ್ನೋದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಹಾಗಾದ್ರೆ, ಈ “ಭೂಮಿ’ ಅಂದ್ರೆ ಯಾವುದು? ಅದರ ರಕ್ಷಣೆ ಆಗುತ್ತದೆಯಾ? “ಭೂಮಿ’ ಹಾಳು ಮಾಡಲು ಬಂದವರಿಗೆ ತಕ್ಕ ಶಾಸ್ತಿ ಆಗುತ್ತದೆಯಾ? ಇಲ್ಲವಾ ಎಂಬುದು ಗೊತ್ತಾಗಬೇಕಾದರೆ “ಗುರುದೇವ್ ಹೊಯ್ಸಳ’ನನ್ನು ಕ್ಲೈಮ್ಯಾಕ್ ವರೆಗೂ ನೋಡಬೇಕು.
ಬಿಡುಗಡೆಗೂ ಮೊದಲೇ ಚಿತ್ರತಂಡ ಹೇಳಿದಂತೆ, ಟೀಸರ್ ಮತ್ತು ಟ್ರೇಲರ್ ಗಳಲ್ಲಿ ತೋರಿಸಿರುವಂತೆ “ಗುರುದೇವ್ ಹೊಯ್ಸಳ’ ಔಟ್ ಆ್ಯಂಡ್ ಔಟ್ ಆ್ಯಕ್ಷನ್ ಕಥಾಹಂದರದ ಸಿನಿಮಾ. ಒಬ್ಬ ಪ್ರಾಮಾಣಿಕ ಪೊಲೀಸ್ ಅಧಿಕಾರಿಯೊಬ್ಬ ತನ್ನ ಕರ್ತವ್ಯ ನಿರ್ವಹಣೆಯಲ್ಲಿ ಏನೇನು ಸಮಸ್ಯೆ, ಸವಾಲು ಮತ್ತು ಸಂಕಷ್ಟಗಳನ್ನು ಎದುರಿಸುತ್ತಾನೆ. ಅಂತಿಮವಾಗಿ ಪ್ರೀತಿ, ಪ್ರೇಮ, ಕರ್ತವ್ಯ, ಜಾತೀಯತೆ ವೈಷಮ್ಯ ಅದೆಲ್ಲವನ್ನೂ ಹೇಗೆ ಎದುರಿಸಿ ನಿಲ್ಲುತ್ತಾನೆ ಎಂಬುದು ಸಿನಿಮಾದ ಕಥಾವಸ್ತು. ಮಾಮೂಲಿ ಪೊಲೀಸ್ ಸ್ಟೋರಿ ಸಿನಿಮಾಗಳಂತೆ ಇಲ್ಲೂ ಪೊಲೀಸ್ ಮತ್ತು ಪಾತಕಿಗಳ ನಡುವೆ ಗುದ್ದಾಟ, ಹೋರಾಟ, ಮಾಫಿಯಾ, ಎಲ್ಲವೂ ಇದೆ. ಇವೆಲ್ಲದರ ಜೊತೆಗೆ ಮರ್ಯಾದ ಹತ್ಯೆಯಂತಹ ವಿಷಯವನ್ನು ಹಿನ್ನೆಲೆಯಾಗಿಟ್ಟುಕೊಂಡು ಆ್ಯಕ್ಷನ್ ಕಥೆಯನ್ನು ಕಟ್ಟಿಕೊಟ್ಟಿದ್ದಾರೆ ನಿರ್ದೇಶಕ ವಿಜಯ್.
ಇನ್ನು ನಾಯಕ ನಟ ಧನಂಜಯ್ “ಗುರುದೇವ್ ಹೊಯ್ಸಳ’ನಾಗಿ ಇಡೀ ಸಿನಿಮಾವನ್ನು ಆವರಿಸಿಕೊಂಡಿದ್ದಾರೆ. ಡೈಲಾಗ್ ಡೆಲಿವರಿ, ಆ್ಯಕ್ಷನ್, ಮ್ಯಾನರಿಸಂ, ಪೊಲೀಸ್ ಗೆಟಪ್ ಎಲ್ಲದರಲ್ಲೂ ಧನಂಜಯ್ ಅವರದ್ದು “ಅಬ್ಬರ’ದ ಅಭಿನಯ. “ಗುರುದೇವ್ ಹೊಯ್ಸಳ’ನಾಗಿ ಮಾಸ್ ಆಡಿಯನ್ಸ್ ಮನ-ಗಮನ ಎರಡನ್ನೂ ಸೆಳೆಯಲು ಧನಂಜಯ್ಯಶಸ್ವಿಯಾಗಿದ್ದಾರೆ. ನಾಯಕಿ ಅಮೃತಾ ಅಯ್ಯಂಗಾರ್ ತೆರೆಮೇಲೆ ಇರುವಷ್ಟು ಹೊತ್ತು ಇಷ್ಟವಾಗುತ್ತಾರೆ.
ಖಳನಾಯಕನಾಗಿ ನವೀನ್ ಶಂಕರ್ ತಮ್ಮ ಪಾತ್ರಕ್ಕೆ ಫುಲ್ ಮಾರ್ಕ್ಸ್ ಪಡೆದುಕೊಳ್ಳುತ್ತಾರೆ. ಉಳಿದಂತೆ ಅಚ್ಯುತ ಕುಮಾರ್, ರಾಜೇಶ್ ನಟರಂಗ, ನಾಗಭೂಷಣ್ ಸೇರಿದಂತೆ ಬಹುತೇಕ ಎಲ್ಲ ಕಲಾವಿದರದ್ದೂ ನಿರ್ದೇಶಕರ ಆಶಯಕ್ಕೆ ತಕ್ಕಂತೆ ಅಚ್ಚುಕಟ್ಟು ಅಭಿನಯ.
ತಾಂತ್ರಿಕವಾಗಿ ಛಾಯಾಗ್ರಹಣ, ಲೊಕೇಶನ್ಸ್ ಸಿನಿಮಾವನ್ನು ಅದ್ಧೂರಿಯಾಗಿ ಕಾಣುವಂತೆ ಮಾಡಿದೆ. ಒಂದೆರಡು ಹಾಡುಗಳು ಗುನುಗುಡುವಂತಿದ್ದು, ಹಿನ್ನೆಲೆ ಸಂಗೀತ ಸಿನಿಮಾದ ಮತ್ತೂಂದು ಪ್ಲಸ್ ಪಾಯಿಂಟ್ ಎನ್ನಬಹುದು. ಒಟ್ಟಾರೆ ಮಾಸ್ ಪ್ರೇಕ್ಷಕರನ್ನೇ ಗಮನದಲ್ಲಿರಿಸಿಕೊಂಡು ಮಾಡಿದಂತಿರುವ “ಗುರುದೇವ್ ಹೊಯ್ಸಳ’ ಥಿಯೇಟರ್ ಹೋದವರಿಗೆ ಒಂದಷ್ಟು ಅಬ್ಬರದ ಮನರಂಜನೆಯನ್ನೇ ನೀಡುತ್ತಾನೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.