ಮೈಸೂರು: ದಲಿತ ಸಮುದಾಯದ ಪ್ರಭಾವಿ ನಾಯಕರನ್ನು ಸಿದ್ಧರಾಮಯ್ಯ ವ್ಯವಸ್ಥಿತವಾಗಿ ತುಳಿದರು. ಡಾ.ಜಿ.ಪರಮೇಶ್ವರ್, ಕಳೆದ ಲೋಕಸಭಾ ಚುನಾವಣೆಯಲ್ಲಿ ಆರ್ ಧ್ರುವನಾರಾಯಣ್ ಸೋಲಿಗೆ ಸಿದ್ಧರಾಮಯ್ಯ ಕಾರಣರು ಎಂದು ರಾಜ್ಯ ಬಿಜೆಪಿ ಎಸ್ ಸಿ ಮೋರ್ಚಾ ಅಧ್ಯಕ್ಷ, ಎಂಎಲ್ ಸಿ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.
ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ. ಧ್ರುವನಾರಾಯಣ್ ನನಗೆ ಆತ್ಮೀಯರಾಗಿದ್ದರು. ಪ್ರತಿ ಹದಿನೈದು ದಿನಕ್ಕೊಮ್ಮೆ ಮಾತನಾಡುತ್ತಿದ್ಧರು. ಮಾತನಾಡಿದಾಗಲೆಲ್ಲಾ ಸಿದ್ಧರಾಮಯ್ಯ ನಮ್ಮನ್ನು ಬೆಳೆಯಲು ಬಿಡೋದಿಲ್ಲ ಎಂದು ಹೇಳಿಕೊಳ್ಳುತ್ತಿದ್ಧರು.ಅವರ ಸಾವಿಗೂ ಇವರೇ ಕಾರಣರು. ಮಾಜಿ ಸಚಿವ ಮಹದೇವಪ್ಪ ಜೊತೆ ಸೇರಿಕೊಂಡು ಧ್ರುವನಾರಾಯಣ್ ಮುಗಿಸಿದರು ಎಂದು ಗಂಭೀರ ಆರೋಪ ಮಾಡಿದರು.
ಇದೀಗ ಮಹದೇವಪ್ಪ ನಂಜನಗೂಡು ಟಿಕೆಟನ್ನು ಧ್ರುವನಾರಾಯಣ್ ಮಗನಿಗೆ ಬಿಟ್ಟು ಕೊಡುತ್ತೇನೆ ಎಂದಿದ್ದಾರೆ. ಅದರ ಅರ್ಥ ಅವರಾಗಲೇ ನಂಜನಗೂಡನ್ನು ಕಬ್ಜಾ ಮಾಡಿಕೊಂಡಿದ್ಧರು. ಮಗನನ್ನು ಟಿ ನರಸೀಪುರದಲ್ಲಿ ನಿಲ್ಲಿಸಿ ನಂಜನಗೂಡಿನಲ್ಲಿ ನಿಲ್ಲಲು ಸಿದ್ಧತೆ ನಡೆಸಿದ್ಧರು. ಸಿದ್ಧರಾಮಯ್ಯ ದಲಿತ ನಾಯಕರ ಜೊತೆಗೆ ಅಲ್ಪಸಂಖ್ಯಾತ ಸಮುದಾಯದ ನಾಯಕರನ್ನು ಕೂಡ ಮುಗಿಸಿದರು ಎಂದು ಕಿಡಿ ಕಾರಿದರು.
ಒಳ ಮೀಸಲಾತಿ ನೀಡುವ ವಿಚಾರದಲ್ಲಿ ಕಾಂಗ್ರೆಸ್ ಜೆಡಿಎಸ್ ನಾಯಕರು ಸೂಕ್ತ ನಿರ್ಧಾರ ಕೈಗೊಳ್ಳುವಲ್ಲಿ ವಿಫಲರಾಗಿದ್ದರು. ಅವರು ಮಾಡದ ಕೆಲಸವನ್ನು ಬಿಜೆಪಿ ಸರ್ಕಾರ ಮಾಡಿ ತೋರಿಸಿದೆ. ಕೊರಚ, ಕೊರಮ, ಬಂಜಾರ, ಬೋವಿ ಸಮಾಜಗಳನ್ನು ಇಡೀ ದೇಶದಲ್ಲಿ ಎಲ್ಲಿಯೂ ಎಸ್ ಸಿ ಗೆ ಸೇರಿಸಿಲ್ಲ.ನಮ್ಮ ರಾಜ್ಯದಲ್ಲಿ ಮಾತ್ರೆ ಎಸ್ ಸಿ ಕೆಟಗರಿಗೆ ಸೇರಿಸಲಾಗಿದೆ. ಈ ಸಮುದಾಯಳಿಗೆ 3% ಇದ್ದ ಮೀಸಲಾತಿಯನ್ನು 4.5% ಕ್ಕೆ ಹೆಚ್ಚಳ ಮಾಡಿದ್ದೇವೆ. ಆದರೆ ಕಾಂಗ್ರೆಸ್ ನಾಯಕರು ಚಿತಾವಣೆ ಮಾಡಿ ಈ ಸಮುದಾಯಗಳ ಮೀಸಲಾತಿ ಕಡಿತ ಮಾಡಲಾಗಿದೆ ಎಂದು ತಪ್ಪು ಸಂದೇಶ ರವಾನೆ ಮಾಡಿದ್ದಾರೆ. ಹಾಗಾಗಿ ವಾಸ್ತವ ಪರಿಸ್ಥಿತಿ ಅರಿಯದ ಆ ಸಮುದಾಯದ ಜನರು ಪ್ರತಿಭಟನೆ ನಡೆಸಿದ್ದಾರೆ . ಆ ಬಳಿಕ ಜನರಿಗೆ ನೈಜ ಸ್ಥಿತಿ ಗೊತ್ತಾಗಿದೆ ಎಂದರು.
ಅಭ್ಯರ್ಥಿಗಳ ಆಯ್ಕೆ ಸಂಬಂಧ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ. ಎಲ್ಲರೂ ನೀಡಿರುವ ಅಭಿಪ್ರಾಯವನ್ನು ರಾಜ್ಯ ಬಿಜೆಪಿ ಹೈಕಮಾಂಡ್ ಗೆ ಸಲ್ಲಿಸಲಿದೆ ಎಂದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.