ಸುಮಾರು 22 ವರ್ಷಗಳ ಹಿಂದೆ ತನ್ನ ಹೆಂಡತಿಯನ್ನು ಕೊಂದದ್ದಾಗಿ ಕೇವಲ ಅನುಮಾನಗಳ ಆಧಾರದ ಮೇಲೆ ಕೆಳ ನ್ಯಾಯಾಲಯಗಳಿಂದ ಶಿಕ್ಷೆಗೆ ಗುರಿಯಾಗಿದ್ದ ವ್ಯಕ್ತಿಯೊಬ್ಬನನ್ನು ಸುಪ್ರೀಂ ಕೋರ್ಟ್ ಇತ್ತೀಚೆಗೆ ದೋಷಮುಕ್ತಗೊಳಿಸಿದೆ.
[ಗುಣೋ ಮಹ್ತೊ ಮತ್ತು ಜಾರ್ಖಂಡ ಸರ್ಕಾರ ನಡುವಣ ಪ್ರಕರಣ].
ಮೃತಪತ್ನಿಯೊಂದಿಗೆ ಆರೋಪಿ ಪತಿಯು ಅಂತಿಮವಾಗಿ ಕಾಣಿಸಿಕೊಂಡಿದ್ದ ಎಂಬ ಕಾರಣಕ್ಕಾಗಿ ಕೆಳ ನ್ಯಾಯಾಲಯಗಳು ಮೇಲ್ಮನವಿದಾರ ಅಪರಾಧಿ ಎಂಬ ಅಭಿಪ್ರಾಯಕ್ಕೆ ಬಂದಿವೆ. ಕೃತ್ಯಕ್ಕೆ ನಂಟು ಕಲ್ಪಿಸುವ ಸಂದರ್ಭಗಳು ಸಾಬೀತಾಗಿಲ್ಲ. ಇದು ಸಮಂಜಸ ಅನುಮಾನವನ್ನು ಮೀರಿದ್ದಾಗಿದೆ ಎಂದು ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಸಂಜಯ್ ಕರೋಲ್ ಅವರಿದ್ದ ವಿಭಾಗೀಯ ಪೀಠ ತಿಳಿಸಿದೆ.
ಸಂಶಯವು ಎಷ್ಟೇ ಗಂಭೀರವಾಗಿದ್ದರೂ, ಅದು ಕೇವಲ ಪ್ರಾಸಿಕ್ಯೂಷನ್ನ ಕಲ್ಪನೆಯ ಕತೆಯಾಗಿದ್ದು ಅದನ್ನು ಸಂಶಯಾಸ್ಪದವಾಗಿ ನಿರೂಪಿಸಲಾಗಿಲ್ಲ. ಇದನ್ನು ಹೊರತುಪಡಿಸಿ ನೇರ, ಸಾಂದರ್ಭಿಕ ಅಥವಾ ಇನ್ನಾವುದೇ ಪುರಾವೆಗಳಿಲ್ಲ. ಆರೋಪಿಯ ಕೃತ್ಯವನ್ನು ಸಾಬೀತುಪಡಿಸುವಂತಹ ಯಾವುದೇ ವಾಸ್ತವಾಂಶ ಪತ್ತೆಯಾಗಿಲ್ಲ. ಸಮಂಜಸ ಅನುಮಾನವನ್ನು ಮೀರಿ ಪ್ರಾಸಿಕ್ಯೂಷನ್ ಇದನ್ನು ಮಂಡಿಸಿದೆ ಎಂದು ತೀರ್ಪು ವಿವರಿಸಿದೆ.
ತಪ್ಪು ಮತ್ತು ಅಪೂರ್ಣ ಪುರಾವೆಗಳ ಆಧಾರದ ಮೇಲೆ ಮೇಲ್ಮನವಿದಾರನನ್ನು ಅಪರಾಧಿ ಎಂದು ನಿರ್ಣಯಿಸಿ ಕೆಳ ನ್ಯಾಯಾಲಯಗಳು ಗಂಭೀರ ತಪ್ಪೆಸಗಿದ್ದು ಇದು ನ್ಯಾಯದ ಅಪಹಾಸ್ಯಕ್ಕೆ ಕಾರಣವಾಗುತ್ತದೆ ಎಂದು ಪೀಠ ಹೇಳಿದೆ.
ವಿಚಾರಣಾ ನ್ಯಾಯಾಲಯ ಆರೋಪಿಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು 2004ರಲ್ಲಿ ಜಾರ್ಖಂಡ್ ಹೈಕೋರ್ಟ್ ಎತ್ತಿ ಹಿಡಿದಿತ್ತು. ಈ ತೀರ್ಪನ್ನು ಪ್ರಶ್ನಿಸಿ ಆರೋಪಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.
ಸುಮಾರು 35 ವರ್ಷಗಳ ಹಿಂದೆ, ಅಂದರೆ ಆಗಸ್ಟ್ 1988ರಲ್ಲಿ, ಮೇಲ್ಮನವಿದಾರನ ಹೆಂಡತಿ ಬಾವಿಯೊಂದರಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಆರೋಪಿಯೇ ತನ್ನ ಪತ್ನಿಯನ್ನು ಕೊಂದು ಸಾಕ್ಷ್ಯಾಧಾರಗಳನ್ನು ನಾಶಗೊಳಿಸಲು ಆಕೆಯ ಮೃತದೇಹವನ್ನು ಹಳ್ಳಿಯ ಬಾವಿಗೆ ಎಸೆದಿದ್ದಾನೆ. ಬಳಿಕ ಪೊಲೀಸರೆದುರು ನಾಪತ್ತೆಯ ಕತೆ ಕಟ್ಟಿದ್ದಾನೆ ಎಂದು ಪ್ರಾಸಿಕ್ಯೂಷನ್ ಆರೋಪಿಸಿತ್ತು. ಆದರೆ ಹೈಕೋರ್ಟ್ ಪ್ರತ್ಯಕ್ಷದರ್ಶಿಗಳ ಸಾಕ್ಷ್ಯವನ್ನು ಮಾತ್ರ ಅವಲಂಬಿಸಿ ತೀರ್ಪು ನೀಡಿರುವುದನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಲಾಗಿತ್ತು.
ಇಡೀ ಪ್ರಕರಣ ಸಾಂದರ್ಭಿಕ ಸಾಕ್ಷ್ಯವನ್ನು ಆಧರಿಸಿದೆ. ತನಿಖಾ ಅಧಿಕಾರಿಯನ್ನು ವಿಚಾರಣೆಗೆ ಒಳಪಡಿಸಿಲ್ಲ. ಪೊಲೀಸರಿಗೆ ಮಾಹಿತಿ ನೀಡುವ ಮೂಲಕ ಆರೋಪಿ, ಸಾಕ್ಷ್ಯ ಮರೆಮಾಚಿರುವುದಕ್ಕೆ ನೇರ ಅಥವಾ ಸಾಂದರ್ಭಿಕ ಸಾಕ್ಷ್ಯಗಳಿಲ್ಲ. ಮೇಲ್ಮನವಿದಾರ ತನ್ನ ಮೃತಪತ್ನಿಯನ್ನು ಕೆಟ್ಟದಾಗಿ ನಡೆಸಿಕೊಂಡಿದ್ದಕ್ಕೆ ಯಾವುದೇ ಸಾಕ್ಷ್ಯ ಲಭ್ಯವಾಗಿಲ್ಲ. ಹೀಗಾಗಿ ಅಪರಾಧಕ್ಕೆ ನಂಟು ಕಲ್ಪಿಸುವ ಸನ್ನಿವೇಶಗಳು ಸಾಬೀತಾಗಿಲ್ಲ ಎಂದು ಪೀಠ ಹೇಳಿತು. ಅದರಂತೆ ಮೇಲ್ಮನವಿಯನ್ನು ಪುರಸ್ಕರಿಸಿದ ಸುಪ್ರೀಂ ಕೋರ್ಟ್, ವಿಚಾರಣಾ ನ್ಯಾಯಾಲಯ ಹಾಗೂ ಹೈಕೋರ್ಟ್ ನೀಡಿದ್ದ ಆದೇಶಗಳನ್ನು ರದ್ದುಗೊಳಿಸಿತು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.