ರಾಮನಗರ: ಇದ್ರೀಷ್ ಪಾಷ ಸಾವು ಪ್ರಕರಣದಲ್ಲಿ ನನ್ನ ವಿರುದ್ಧ ಎಫ್ಐಆರ್ ದಾಖಲಾಗಿದ್ದರೆ ವಿಚಾರಣೆ ಎದುರಿಸುತ್ತೇನೆ ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇನೆ ಎಂದು ಪ್ರಕರಣದ ಪ್ರಮುಖ ಆರೋಪಿಯಾಗಿರುವ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಪುನೀತ್ ಕೆರೆಹಳ್ಳಿ ಹೇಳಿದ್ದಾರೆ.
ಈ ಬಗ್ಗೆ ಪುನೀತ್ ಮಾತ ನಾಡಿರುವ ವಿಡಿಯೊ ಒಂದು ಸೋಮವಾರ ರಾತ್ರಿ ಫೇಸ್ಬುಕ್ ನಲ್ಲಿ ಹರಿದಾಡುತ್ತಿದೆ.
ಅನೇಕ ದೇವಸ್ಥಾನಗಳಿಗೆ ಭೇಟಿ ಕೊಡುತ್ತಿದ್ದು, ಈ ಸಂದರ್ಭದಲ್ಲಿ ನನ್ನ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಹೀಗಾಗಿ, ಯಾರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ. ಮಾಹಿತಿ ಬಂದರೆ ನಾನೇ ಖುದ್ದು ಪೊಲೀಸರ ಮುಂದೆ ಬರುತ್ತೇನೆ ಎಂದು ಅವರು ಹೇಳಿದ್ದಾರೆ.
ಶುಕ್ರವಾರ ಮಧ್ಯರಾತ್ರಿ 11.59 ರಿಂದ ನಾನು ಘಟನೆಯನ್ನು ಫೇಸ್ ಬುಕ್ ಲೈವ್ ಮಾಡಿದ್ದೇನೆ. ಶನಿವಾರ ಬೆಳಿಗ್ಗೆ 5ಕ್ಕೆ ಮಠಕ್ಕೆ ಹಸುಗಳನ್ನು ಬಿಡುವವರೆಗೂ ನಾನು ಪೊಲೀಸರ ಜೊತೆಯಲ್ಲೇ ಇದ್ದೆ. ನಾವು ಯಾರನ್ನೂ ಹತ್ಯೆ ಮಾಡಿಲ್ಲ. ಮರಣೋತ್ತರ ಪರೀಕ್ಷೆ ವರದಿಯೇ ಇದಕ್ಕೆ ಉತ್ತರ ನೀಡಲಿದೆ ಎಂದು ಅವರು ಹೇಳಿದ್ದಾರೆ.
ಯಾರಿಗೂ ನಾನು ಹಣಕ್ಕಾಗಿ ಬೇಡಿಕೆ ಇಟ್ಟಿಲ್ಲ. ದುಡ್ಡು ಮಾಡಲು ಈ ಹೋರಾಟಕ್ಕೆ ಬಂದಿಲ್ಲ. ಕುಮಾರಸ್ವಾಮಿ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಯಾರೇ ನನ್ನ ವಿರುದ್ಧ ನಿಂತರೂ ಹೋರಾಟ ಬಿಡುವುದಿಲ್ಲ ಎಂದು ಅವರು ವಿಡಿಯೊದಲ್ಲಿ ಹೇಳಿದ್ದಾರೆ.
ಮಂಡ್ಯದಿಂದ ಹಲಗೂರು, ಸಾತನೂರು ಮಾರ್ಗವಾಗಿ ನಿರಂತರ ವಾಗಿ ಜಾನುವಾರು ಸಾಗಣೆ ಆಗುತ್ತಿದ್ದು, ಇದಕ್ಕೆ ರಾಜಕಾರಣಿಗಳ ಕೃಪಾಕಟಾಕ್ಷವೂ ಇದೆ ಎಂದೂ ಅವರು ದೂರಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.