ನವದೆಹಲಿ: ಅರುಣಾಚಲ ಪ್ರದೇಶದ ಕೆಲವು ಸ್ಥಳಗಳ ಚೀನಾ ಮರುನಾಮಕರಣವನ್ನು ಭಾರತ ಸರ್ಕಾರ ಮಂಗಳವಾರ ಸಾರಾಸಗಟಾಗಿ ತಿರಸ್ಕರಿಸಿದ್ದು, ಅರುಣಾಚಲ ಪ್ರದೇಶ ರಾಜ್ಯವು ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗವಾಗಿದೆ ಎಂದು ಪ್ರತಿಪಾದಿಸಿದೆ.
ಅರುಣಾಚಲ ಪ್ರದೇಶವು ಭಾರತದ ಅವಿಭಾಜ್ಯ ಅಂಗ ಎಂದು ತಿರುಗೇಟು ನೀಡಿದೆ.ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು, ನಾವು ಈ ರೀತಿಯ ಹಲವು ವರದಿಗಳನ್ನು ನೋಡಿದ್ದೇವೆ. ಚೀನಾ ಇಂತಹ ಪ್ರಯತ್ನ ಮಾಡಿದ್ದು ಇದೇ ಮೊದಲೇನಲ್ಲ. ನಾವು ಇದನ್ನು ಸಾರಾಸಗಟಾಗಿ ತಿರಸ್ಕರಿಸುತ್ತಿದ್ದೇವೆ. ಅರುಣಾಚಲ ಪ್ರದೇಶವು ಈ ಹಿಂದೆ, ಈಗ ಹಾಗೂ ಎಂದೆಂದೂ ಭಾರತದ ಅವಿಭಾಜ್ಯ ಹಾಗೂ ಬೇರ್ಪಡಿಸಲಾಗದ ಭಾಗ. ಹೊಸದಾಗಿ ಸೃಷ್ಟಿಸಿದ ಹೆಸರುಗಳನ್ನು ಇಡುವುದರಿಂದ ವಾಸ್ತವ ಬದಲಾಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ಐದು ಶಿಖರಗಳು, ಎರಡು ಭೂ ಪ್ರದೇಶಗಳು, ಎರಡು ವಸತಿ ಪ್ರದೇಶಗಳು ಮತ್ತು ಎರಡು ನದಿಗಳ ಹೆಸರನ್ನು ಬದಲಿಸಿ ಚೀನಾ ಪಟ್ಟಿ ಬಿಡುಗಡೆ ಮಾಡಿದೆ ಎಂದು ‘ಗ್ಲೋಬಲ್ ಟೈಮ್ಸ್’ ಸೋಮವಾರ ವರದಿ ಮಾಡಿತ್ತು.ಅರುಣಾಚಲ ಪ್ರದೇಶದ ಸ್ಥಳಗಳ ಹೆಸರುಗಳನ್ನು ಬದಲಿಸುತ್ತಿರುವುದು ಇದು ಮೂರನೇ ಬಾರಿ. 2018 ಹಾಗೂ 2021ರಲ್ಲಿಯೂ ಇಂತಹದೇ ಪಟ್ಟಿಯನ್ನು ಬಿಡುಗಡೆ ಮಾಡಿತ್ತು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.