ಮಳೆಗಾಲ, ಚಳಿಗಾಲ ಕಳೆದು ಬೇಸಿಗೆ ಕಾಲವನ್ನು ಬರಮಾಡಿಕೊಳ್ಳುವ ಸಮಯದಲ್ಲಿ, ಮಾವು ಹಾಗೂ ಹಲಸಿನ ಹಣ್ಣುಗಳು ಮಾರುಕಟ್ಟೆಯಲ್ಲಿ ಕಾಣಲು ಸಿಗುತ್ತದೆ. ಅದರಲ್ಲೂ ಗಜಗಾತ್ರದ ಹಲಸಿನ ಹಣ್ಣುಗಳು ಅಂತೂ ಆಕರ್ಷಕ ಕೇಂದ್ರ ಬಿಂದು ಆಗಿ ಎಲ್ಲರನ್ನೂ ಕೂಡ ಕೈ ಬೀಸಿ ತನ್ನತ್ತ ಕರೆಯುತ್ತಿರುತ್ತದೆ!
ಈ ಹಣ್ಣನ್ನು ಮನೆಗೆ ತಂದು, ಯಾವುದಾದರೂ ಮೂಲೆಯಲ್ಲಿ ಇಟ್ಟರೂ ಸಾಕು, ಇದರ ಪರಿಮಳವು, ಅಕ್ಕಪಕ್ಕ ದವರ ಮನೆಗೂ ಹಬ್ಬುತ್ತದೆ! ಇದೇ ಈ ಹಣ್ಣಿನ ತಾಕತು. ತನ್ನಲ್ಲಿ ಅಡಗಿರುವ ರುಚಿ ಹಾಗೂ ಸುವಾಸನೆಯಿಂದ, ಈ ಹಣ್ಣನ್ನು ಹೆಚ್ಚಿನವರು ಇಷ್ಟಪಡುತ್ತಾರೆ.
ಇನ್ನು ಈ ಹಣ್ಣು ನೋಡಲು ಮಾತ್ರ ಒರಟಾಗಿ, ಮೈಮೇಲೆ ಮುಳ್ಳು ಮುಳ್ಳು ರೀತಿ ಕಂಡು ಬಂದರೂ, ಈ ಹಣ್ಣಿನ ಒಳಗಿನ ಪ್ರತಿಯೊಂದು ಭಾಗವೂ (ಹಲಸಿನ ತೊಳೆ ಹಾಗೂ ಹಲಸಿನ ಬೀಜಗಳು) ಆರೋಗ್ಯಕ್ಕೆ ಬಹಳ ಒಳ್ಳೆಯದು. ಬನ್ನಿ ಇಂದಿನ ಲೇಖನದಲ್ಲಿ ಈ ಹಣ್ಣಿನಿಂದ ಸಿಗುವ ಪ್ರಯೋಜನಗಳು ಏನೆಂಬುದನ್ನು ನೋಡೋಣ…
ಈ ಹಣ್ಣಿನಲ್ಲಿರುವ ವಿಟಮಿನ್ಸ್ ಗಳು
ಹಲಸಿನ ಹಣ್ಣಿನಲ್ಲಿ ವಿಟಮಿನ್ ಅಂಶಗಳಾದ, ಖನಿಜಾಂಶಗಳು, ಕಾರ್ಬೋಹೈಡ್ರೇಟ್ ಅಂಶಗಳು, ಎಲೆಕ್ಟ್ರೋಲೈಟ್ ಅಂಶಗಳು, ಪೊಟಾಷ್ಯಿಯಂ ಹಾಗೂ ನಾರಿನಾಂಶಗಳು ಯಥೇಚ್ಛವಾಗಿ ಸಿಗುವುದರಿಂದ, ಇದೊಂದು ಆರೋಗ್ಯಕಾರಿ ಹಣ್ಣು ಎನ್ನುವು ದರಲ್ಲಿ ಎರಡು ಮಾತಿಲ್ಲ.
ಅಧಿಕ ರಕ್ತದೊತ್ತಡದ ಕಾಯಿಲೆ ಇದ್ದವರಿಗೆ…
• ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿರು ವವರು, ಹಲಸಿನ ಹಣ್ಣುನ್ನು ಮಿತವಾಗಿ ಸೇವನೆ ಮಾಡುತ್ತಾ ಬಂದರೆ, ಈ ಕಾಯಿಲೆಯನ್ನು ನಿಯಂತ್ರ ಣದಲ್ಲಿ ಇಟ್ಟುಕೊಳ್ಳಬಹುದು.
• ಪ್ರಮುಖವಾಗಿ ಈ ಹಣ್ಣಿನಲ್ಲಿ ಪೊಟಾಷ್ಯಿಯಂ ಅಂಶ ಅಧಿಕವಾಗಿ ಕಂಡುಬರುವುದರಿಂದ, ಈ ಕಾಯಿಲೆಯನ್ನು ನಿಯಂತ್ರಣದಲ್ಲಿಡಲು ನೆರವಾಗುತ್ತದೆ.
• ಇಲ್ಲಿ ಪ್ರಮುಖವಾಗಿ ನೆನಪಿನಲ್ಲಿ ಇಟ್ಟುಕೊಳ್ಳಬೇಕಾದ ಸಂಗತಿ ಏನೆಂದರೆ, ಪೊಟ್ಯಾಶಿಯಂ ಅಂಶ ದೇಹದಲ್ಲಿ ಸೋಡಿಯಂ ಅಂಶವನ್ನು ನಿಯಂತ್ರಣ ಮಾಡಲು ನೆರವಾಗುತ್ತದೆ.
• ಇದರಿಂದ ಅಧಿಕ ರಕ್ತದೊತ್ತಡದ ಸಮಸ್ಯೆ ನಿಯಂತ್ರಣಕ್ಕೆ ಬರುವುದು ಮಾತ್ರವಲ್ಲದೆ, ಹೃದಯಕ್ಕೆ ಸಂಬಂಧಪಟ್ಟ ಇನ್ನಿತರ ಆರೋಗ್ಯ ಸಮಸ್ಯೆಗಳು ಕೂಡ ದೂರ ವಾಗುತ್ತದೆ.
ಜೀರ್ಣಕ್ರಿಯೆಗೆ ಸಂಬಂಧ ಪಟ್ಟ ಸಮಸ್ಯೆಗಳು ದೂರವಾಗುತ್ತದೆ
• ಮೊದಲೇ ಹೇಳಿದ ಹಾಗೆ ಈ ಹಣ್ಣಿನಲ್ಲಿ ನಾರಿನಾಂಶ, ಯಥೇಚ್ಛವಾಗಿ ಕಂಡು ಬರುವುದರಿಂದ, ಜೀರ್ಣಾಂಗ ವ್ಯವಸ್ಥೆಗೆ ಸಂಬಂಧಪಟ್ಟ ಸಮಸ್ಯೆಗಳನ್ನು ನಿವಾರಿಸು ವಲ್ಲಿ, ಪ್ರಮುಖ ಪಾತ್ರ ವಹಿಸುತ್ತದೆ.
• ಹೀಗಾಗಿ ನಿಯಮಿತವಾಗಿ ಈ ಹಣ್ಣನ್ನು ಸೇವನೆ ಮಾಡುವು ದರಿಂದ, ಜೀರ್ಣ ಪ್ರಕ್ರಿಯೆಗಳು ಸರಿಯಾಗಿ ನಡೆದು, ಅಜೀರ್ಣತೆ, ಮಲಬದ್ಧತೆ ಸಮಸ್ಯೆ ಕ್ರಮೇಣವಾಗಿ ದೂರ ವಾಗುತ್ತಾ ಹೋಗುತ್ತದೆ.
ಕ್ಯಾನ್ಸರ್ ಕಾಯಿಲೆಯಿಂದ ರಕ್ಷಿಸುತ್ತದೆ
• ಹಲಸಿನ ಹಣ್ಣಿನಲ್ಲಿ ಆಂಟಿಆಕ್ಸಿಡೆಂಟ್ ಹಾಗು ಫ್ಲೇವ ನಾಯ್ಡ್ ಅಂಶಗಳು ಕೂಡ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುತ್ತದೆ.
• ಅದರಲ್ಲೂ ಆಂಟಿಆಕ್ಸಿಡೆಂಟ್ ಅಂಶಗಳು ದೇಹದ ಲ್ಲಿರುವ ಕಂಡು ಬರುವ ಫ್ರೀ ರಾಡಿಕಲ್ ಗಳ ವಿರುದ್ಧ ರಕ್ಷಣಾತ್ಮ ಕವಾಗಿ ಕೆಲಸ ಮಾಡುತ್ತವೆ. ಇದರಿಂದ ಕ್ಯಾನ್ಸರ್ ಕಣಗಳು ನಮ್ಮ ದೇಹದಲ್ಲಿ ಉತ್ಪತ್ತಿ ಆಗುವುದನ್ನು ತಡೆಯಲು ನೆರವಾಗುತ್ತದೆ.
ರಕ್ತಹೀನತೆ ಸಮಸ್ಯೆ ಇದ್ದರೆ
• ರಕ್ತಹೀನತೆಯ ಸಮಸ್ಯೆಯು ಕಂಡುಬಂದರೆ, ಆಗ ನಾಲ್ಕು ಹಜ್ಜೆ ನಡೆದರೂ ಸಾಕು ತುಂಬಾನೇ ಸುಸ್ತು, ಬಳಲಿಕೆ ಆಗುವ ಅನು ಭವ ಉಂಟಾಗುತ್ತದೆ.
• ಇದಕ್ಕೆ ಪ್ರಮುಖ ಕಾರಣ, ಆರೋಗ್ಯದಲ್ಲಿ ಕಂಡು ಬರುವ ಕಬ್ಬಿಣಾಂಶದ ಕೊರತೆ. ಹಾಗಾಗಿ ಕಬ್ಬಿಣದ ಅಂಶವನ್ನು ಹೆಚ್ಚು ಒಳಗೊಂಡ ಆಹಾರ ಪದಾರ್ಥಗಳ ಮೇಲೆ ಗಮನ ಹರಿಸಬೇಕು. ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ಹಲಸಿನ ಹಣ್ಣು.
• ಹೌದು ಈ ಹಣ್ಣಿನಲ್ಲಿ, ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಠಿಕ ಸತ್ವಗಳು ಯತೇಚ್ಛವಾಗಿ ಕಂಡು ಬರುತ್ತದೆ.
• ಉದಾಹರಣೆಗೆ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಇ, ವಿಟಮಿನ್ ಕೆ ಮತ್ತು ನಯಾಸಿನ್ ಅಂಶದ ಜೊತೆಗೆ ತಾಮ್ರ ಮತ್ತು ಫೋಲೆಟ್ ಅಂಶಗಳು ಕೂಡ ಹೆಚ್ಚಾಗಿ ಇರುತ್ತವೆ. ಇದು ದೇಹದಲ್ಲಿ ಕಬ್ಬಿಣದ ಅಂಶದ ಕೊರತೆ ಯನ್ನು ನೀಗಿಸಿ, ಕೆಂಪು ರಕ್ತ ಕಣಗಳನ್ನು ಹೆಚ್ಚಿಸುತ್ತದೆ.
ಹೃದಯದ ಆರೋಗ್ಯಕ್ಕೆ
• ಹೃದಯದ ಆರೋಗ್ಯವನ್ನು ಚೆನ್ನಾಗಿಟ್ಟು ಕೊಂಡಿರಬೇಕು, ಎಂದರೆ ಸರಿಯಾದ ಆಹಾರ ಪದ್ಧತಿ ಹಾಗೂ ಜೀವನ ಶೈಲಿಯನ್ನು ಬೆಳೆಸಿಕೊಳ್ಳಬೇಕು.
• ಇಲ್ಲಾಂದ್ರೆ ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆಗಳು ಕಂಡು ಬರುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ತಮ್ಮ ಹೃದಯಕ್ಕೆ ಅನುಕೂಲಕರ ವಾದ ಆಹಾರ ಪದಾರ್ಥ ಗಳನ್ನು ಮಾತ್ರ ಸೇವನೆ ಮಾಡಬೇಕು.
• ಈ ನಿಟ್ಟಿನಲ್ಲಿ ನೋಡುವುದಾದರೆ, ಹಲಸಿನ ಹಣ್ಣಿನಲ್ಲಿ ವಿಟಮಿನ್ ಬಿ6 ಅಂಶ ಹೆಚ್ಚಾಗಿ, ಕಂಡು ಬರುತ್ತದೆ. ಇವು ರಕ್ತ ಸಂಚಾರದಲ್ಲಿ ಕಂಡುಬರುವ ಹೋಮೊಸಿಸ್ಟೀನೆ ಅಂಶಗಳನ್ನು ಕಡಿಮೆ ಮಾಡಿ, ಹೃದಯದ ರಕ್ತನಾಳಗಳಿಗೆ ಸರಿಯಾಗಿ ರಕ್ತ ಪೂರೈಕೆ ಆಗುವಂತೆ ಮಾಡುತ್ತದೆ. ಇದರಿಂದ ಹೃದಯ ಆರೋಗ್ಯ ಕೂಡ ಚೆನ್ನಾಗಿರುತ್ತದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.