ಯೋಗಾಸನಗಳು ದೇಹದ ಸರ್ವೊತೋಮುಖ ಆರೋಗ್ಯವನ್ನು ಕಾಪಾಡಿಕೊಳ್ಳಲು ಮಹತ್ವದ ಪಾತ್ರವಹಿಸುತ್ತವೆ. ಒಂದೊಂದು ಆಸನವೂ ಕೂಡ ವಿವಿಧ ರೀತಿಯಲ್ಲಿ ದೇಹವನ್ನು ಸದೃಡಗೊಳಿಸುತ್ತದೆ. ಅಂತಹ ಆಸನಗಳಲ್ಲಿ ಒಂದು ಪಶ್ಚಿಮೋತ್ಥಾನಾಸನ.
ನೆಲದ ಮೇಲೆ ಕುಳಿತು ಮುಂದಕ್ಕೆ ಬಾಗಿ ಮಾಡುವ ಆಸನ ಇದಾಗಿದೆ. ಇದರಿಂದ ಬೆನ್ನು ಮತ್ತು ಸೊಂಟದ ಭಾಗಗಳಿಗೆ ಹೆಚ್ಚಿನ ವ್ಯಾಯಾಮ ದೊರಕಿ ದೇಹದ ಎಲ್ಲಾ ಭಾಗಕ್ಕೆ ರಕ್ತ ಸಂಚಾರ ಸುಗಮವಾಗಿ ಆಗುತ್ತದೆ.
ಅಲ್ಲದೆ ಪಶ್ಚಿಮೋತ್ಥಾನಾಸನದಿಂದ ಜೀರ್ಣಕ್ರಿಯೆಲ್ಲಿನ ತೊಂದರೆಗಳೂ ಕೂಡ ನಿವಾರಣೆಯಾಗುತ್ತದೆ. ಹಾಗಾದರೆ ಈ ಪಶ್ಚಿಮೋತ್ಥಾನಾಸದಿಂದ ಇನ್ನು ಏನೆಲ್ಲ ಉಪಯೋಗಗಳಿವೆ, ಮಾಡುವುದು ಹೇಗೆ ಎನ್ನುವ ಮಾಹಿತಿ ಇಲ್ಲಿದೆ ನೋಡಿ.
ಪಶ್ಚಿಮೋತ್ಥಾನಾಸನ ಮಾಡುವ ವಿಧಾನ
•ಮೊದಲು ಎರಡೂ ಕಾಲುಗಳನ್ನು ಮುಂದಕ್ಕೆ ಚಾಚಿ ದಂಡಾಸನದಲ್ಲಿ ಬೆನ್ನು ನೇರವಾಗಿರಿಸಿ ಕುಳಿತುಕೊಳ್ಳಿ.
• ನಂತರ ಎರಡೂ ಕೈಗಳನ್ನು ತೊಡೆಯ ಮೇಲಿರಿಸಿ ದೀರ್ಘವಾಗಿ ಉಸಿರನ್ನು ತೆಗೆದುಕೊಳ್ಳುತ್ತಾ ಎರಡು ಕೈಗಳನ್ನು ನೇರವಾಗಿ ತಲೆಯ ಮೇಲಕ್ಕೆ ಎತ್ತಿ.
• ಬಳಿಕ ಉಸಿರನ್ನು ಹೊರ ಹಾಕುತ್ತಾ ನಿಧಾನವಾಗಿ ಮುಂದಕ್ಕೆ ಬಾಗಿ ಕೈ ಬೆರಳುಗಳಿಂದ ಕಾಲಿನ ಹೆಬ್ಬೆರಳನ್ನು ಹಿಡಿದುಕೊಂಡು ಹಣೆಯನ್ನು ಮೊಣಕಾಲಿಗೆ ತಾಗಿಸಲು ಪ್ರಯತ್ನಿಸಿ. ನೆನಪಿಡಿ, ಮೊಣಕಾಲು ನೇರವಾಗಿರಲಿ.
• ಇದೇ ಸ್ಥಿತಿಯಲ್ಲಿ ನಾಲ್ಕೈದು ಬಾರಿ ಉಸಿರಾಟ ಮಾಡಿ, ನಂತರ ಉಸಿರನ್ನು ತೆಗೆದುಕೊಳ್ಳುತ್ತಾ, ನಿಧಾನವಾಗಿ ಮೇಲಕ್ಕೆ ಬನ್ನಿ.
• ನಂತರ ಉಸಿರನ್ನು ಹೊರಹಾಕುತ್ತಾ ನಿಧಾನವಾಗಿ ಕೈಗಳನ್ನು ಕೆಳಗೆ ಇಳಿಸಿ, ವಿಶ್ರಾಂತಿ ತೆಗೆದುಕೊಳ್ಳಿ.
ಉಪಯೋಗಗಳು
ಜಠರದ ಸ್ನಾಯುಗಳು ಬಲಗೊಳ್ಳುತ್ತವೆ
ಪಶ್ಚಿಮೋತ್ಥಾನಾಸನ ಮಾಡುವುದರಿಂದ ಹೊಟ್ಟೆಗೆ ಬಿಗಿಯಾದ ಅನುಭವವಾಗುತ್ತದೆ. ಇದರಿಂದ ಜಠರದ ಸ್ನಾಯುಗಳು ಬಲಗೊಳ್ಳುತ್ತವೆ. ಇದರಿಂದ ಜೀರ್ಣಕ್ರಿಯೆ ಸರಾಗವಾಗಿ ಆಗಲು ಸಾಧ್ಯವಾಗುತ್ತದೆ.
ಮಧುಮೇಹ, ರಕ್ತದೊತ್ತಡ ನಿಯಂತ್ರಣ
ಪಶ್ಚಿಮೋತ್ತನಾಸನ ಮೂತ್ರಪಿಂಡದ ವ್ಯವಸ್ಥೆ ಮತ್ತು ಮೇದೋಜ್ಜೀರಕ ಗ್ರಂಥಿಯ ಕಾರ್ಯನಿರ್ವಹಣೆಯನ್ನು ಸುಧಾರಿಸುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಕೂಡ ಸಹಾಯ ಮಾಡುತ್ತದೆ.
ಇದರಿಂದಾಗಿ ಮಧುಮೇಹವನ್ನು ನಿಯಂತ್ರಿಸಬಹುದಾಗಿದೆ. ಜೊತೆಗೆ ಮಾನಸಿಕ ಆರೋಗ್ಯವನ್ನು ಸುಧಾರಿಸಲು ಸಹ ಈ ಆಸನ ಸಹಾಯಕವಾಗಿದೆ.
ಹೊಟ್ಟೆಯ ಬೊಜ್ಜು ಕರಗುತ್ತದೆ
ಈ ಆಸನದಲ್ಲಿ ದೇಹದ ಭಾಗ ಸಂಪೂರ್ಣವಾಗಿ ಮುಂದಕ್ಕೆ ಭಾಗುವುದರಿಂದ ಹೊಟ್ಟೆ ಮತ್ತು ಸೊಂಟದ ಭಾಗಗಳಲ್ಲಿನ ಬೊಜ್ಜು ಕರಗುತ್ತದೆ. ದೇಹದ ತೂಕ ಇಳಿಸಿಕೊಳ್ಳುವವರು ಈ ಆಸನವನ್ನು ಮಾಡುವುದು ಒಳ್ಳೆಯದು.
ಅಲ್ಲದೆ ಬೊಜ್ಜಿನಿಂದ ಕೂಡಿದ ದೇಹ ತೆಳುವಾಗಿ ಸುಂದರವಾಗಿಯೂ ಕಾಣಲು ಸಹಾಯಕವಾಗಿದೆ.
ಒತ್ತಡವನ್ನು ನಿವಾರಿಸುತ್ತದೆ
ಪಶ್ಚಿಮೊತ್ಥಾನಸನವು ಮನಸ್ಸನ್ನು ವಿಶ್ರಾಂತಿಗೊಳಿಸುತ್ತದೆ. ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡುತ್ತದೆ. ಇದು ತಲೆನೋವು ನಿವಾರಿಸಲು ಸಹ ಸಹಾಯ ಮಾಡುತ್ತದೆ. ಆದ್ದರಿಂದ ಪ್ರತಿದಿನ ಯೋಗಾಭ್ಯಾಸದ ವೇಳೆ ಪಶ್ಚಿಮೋತ್ಥಾನಸನವನ್ನು ರೂಢಿಸಿಕೊಳ್ಳುವುದು ಹೆಚ್ಚು ಉಪಯುಕ್ತವಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.