ಮೈಸೂರು: ಪ್ರತಿ ಗ್ರಾಮಗಳಲ್ಲೂ ಹನುಮ ಮಂದಿರವಿರುತ್ತದೆ. ಹನುಮ ಎಂದರೆ ಅಂತಃ ಶಕ್ತಿಯ ಪ್ರತೀಕ ಎಂದು ದೇವಸ್ಥಾನದ ಪ್ರಧಾನ ಅರ್ಚಕರಾದ ವಿದ್ವಾನ್ ಎಸ್ ಕೃಷ್ಣಮೂರ್ತಿ ಅಭಿಪ್ರಾಯಪಟ್ಟರು.
ನಗರದ ಇರ್ವಿನ್ ರಸ್ತೆಯಲ್ಲಿರುವ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಗುರುವಾರ ಹನುಮ ಜಯಂತಿಯ ಅಂಗವಾಗಿ ನಡೆದ ಸ್ವಾಮಿಗಳಿಗೆ ವಿಶೇಷ ಅಲಂಕಾರ ಹಾಗೂ ವಿವಿಧ ಬಗೆಯ ನೈವೇದ್ಯ ಮತ್ತು ವಿವಿಧ ಧಾರ್ಮಿಕ ಕೈಂಕರ್ಯಗಳನ್ನು ದೇವಸ್ಥಾನದ ಪ್ರಧಾನ ಅರ್ಚಕ ವಿದ್ವಾನ್ ಎಸ್ ಕೃಷ್ಣಮೂರ್ತಿ ನೆರವೇರಿಸಿದರು.
ಆನಂತರ ಆಂಜನೇಯ ಉತ್ಸವ ಮೂರ್ತಿಯನ್ನು ದೇವಾಲಯದ ಆವರಣದಲ್ಲಿ ಪ್ರದಕ್ಷಿಣೆ ಮಾಡಲಾಯಿತು ತದನಂತರ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗಿಸಲಾಯಿತು.
ನಂತರ ಮಾತನಾಡಿದ ಅವರು, ಜೀವನದಲ್ಲಿ ಕೇವಲ ಹಣ ಸಂಪಾದಿಸಿದರೆ ನೆಮ್ಮದಿ ಸಿಗದು. ಭಕ್ತಿ, ಸತ್ಸಂಗ, ದಾನ, ಧರ್ಮ, ಆಧ್ಯಾತ್ಮ ಚಿಂತನೆಗಳಿಂದ ನೆಮ್ಮದಿ ಸಿಗುತ್ತದೆ. ಅದನ್ನೇ ಮುಕ್ತಿ ಎನ್ನುವರು ಎಂದು ಹೇಳಿದರು.
ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ ಪ್ರಕಾಶ್ ಮಾತನಾಡಿ, ಮನುಷ್ಯ ಹುಟ್ಟವಾಗ ಹೇಗೆ ಖಾಲಿಯಾಗಿ ಬುರುವನೋ ಮರಣದಲ್ಲಿಯೂ ಖಾಲಿಯಾಗಿಯೇ ಹೋಗುತ್ತಾನೆ. ಆದರೆ ಈ ನಡುವಿನ ಜೀವನದಲ್ಲಿ ನಾವು ಮಾಡುವ ಧರ್ಮ ಕಾರ್ಯಗಳು ಹಾಗೂ ದೇವತಾ ಕಾರ್ಯಗಳು ನಮ್ಮ ಜೀವನವನ್ನು ಸಾರ್ಥಕಗೊಳಿಸುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಸುರೇಶ್, ಚರಣ್, ಗುರು, ಇರಲಾಲ್ ಹಾಗೂ ಇನ್ನಿತರರು ಭಾಗವಹಿಸಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.