ಬೆಂಗಳೂರು: ಕನ್ನಡದ ನಂದಿನಿಯನ್ನು ಗುಜರಾತಿನ ಅಮುಲ್ ನುಂಗಲು ಹೊರಟಿದೆ ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದಲ್ಲಿ ‘ಅಮುಲ್’ ವಹಿವಾಟು ವಿಚಾರ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಅವರು, ‘ಕನ್ನಡಿಗರ ಜೀವನಾಡಿ ನಂದಿನಿಯನ್ನು ಮುಗಿಸಲು ಈಗ ನಡೆದಿದೆ 3ನೇ ಸಂಚು. ಸಂಚು 1: ಅಮುಲ್ ಜತೆ ನಂದಿನಿ ವಿಲೀನ; ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ 2ನೇ ಸಂಚು: ಮೊಸರಿನ ಮೇಲೆ ಹಿಂದಿಯ ‘ದಹಿ’ ಪದ ಮುದ್ರಣ ಕನ್ನಡಿಗರ ತೀವ್ರ ವಿರೋಧದಿಂದ ಎರಡೂ ಸಂಚು ವಿಫಲ. 3ನೇ ಸಂಚು ಸಫಲಗೊಳಿಸಲು ಅಮುಲ್ ಮೂಲಕ ಕೇಂದ್ರ ಸರಕಾರ ಹೊರಟಿದೆ ಎಂದು ಕಿಡಿಕಾರಿದ್ದಾರೆ .
ತನ್ನ ಏಕೈಕ ಪ್ರತಿಸ್ಪರ್ಧಿ ನಂದಿನಿಗೆ ಕರ್ನಾಟಕದಲ್ಲೇ ಅಡ್ಡಿ ಮಾಡಬೇಕೆನ್ನುವುದು ‘ಅಮುಲ್’ ದುರಾಲೋಚನೆಯಾಗಿದೆ. ಒಂದು ದೇಶ, ಒಂದು ಅಮುಲ್, ಒಂದೇ ಹಾಲು, ಒಂದೇ ಗುಜರಾತ್ʼ ಎನ್ನುವುದು ಕೇಂದ್ರ ಸರ್ಕಾರದ ಅಧಿಕೃತ ನೀತಿಯಂತಿದೆ. ಅದಕ್ಕೆ ಅಮುಲ್ಗೆ ಒತ್ತಾಸೆಯಾಗಿ ನಿಂತು ಕೆಎಂಎಫ್ ಕತ್ತು ಹಿಚುಕುತ್ತಿದೆ. ಈಗ ಅಮುಲ್ ಹಿಂಬಾಗಿಲ ಮೂಲಕ ಒಳನುಗ್ಗುತ್ತಿದೆ ಎಂದು ಎಚ್ಡಿಕೆ ಗುಡುಗಿದ್ದಾರೆ.
ಹೈನುಗಾರಿಕೆಯ ಮೂಲ ಉತ್ಪನ್ನ ಹಾಲನ್ನು ತನ್ನ ಬ್ರ್ಯಾಂಡ್ ನಲ್ಲಿಯೇ ಕರ್ನಾಟಕದಲ್ಲಿಯೇ ಮಾರಲು ಹೊರಟಿರುವ ಅಮುಲ್, ನಂದಿನಿಯನ್ನು ಆಪೋಶನ ತೆಗೆದುಕೊಳ್ಳುವುದು ಖಚಿತ. ವಿಲೀನಕ್ಕೆ, ಹಿಂದಿ ಹೇರಿಕೆಗೆ ಪ್ರಬಲ ಪ್ರತಿರೋಧ ಒಡ್ಡುತ್ತಿರುವ ಕನ್ನಡಿಗರು ಮತ್ತು ಕೆಎಂಎಫ್ನ ಕಥೆ ಮುಗಿಸಲೇಬೇಕು ಎಂದು ಅಮುಲ್ ಪಣ ತೊಟ್ಟಂತಿದೆ’ ಎಂದು ಎಚ್ಡಿಕೆ ಕುಟುಕಿದ್ದಾರೆ.
ಕೆಎಂಎಫ್ ಜತೆ ಅಮುಲ್ ಅನಗತ್ಯ ಸ್ಪರ್ಧೆ ನಡೆಸಿ ದಿನದಿಂದ ದಿನಕ್ಕೆ ನಂದಿನಿಯನ್ನು ತುಳಿಯುವ ಹುನ್ನಾರ ನಡೆಸುತ್ತಿದೆ, ಇದು ಸ್ಪಷ್ಟ. ಸಹಕಾರಿ ಕ್ಷೇತ್ರದ ಪ್ರಸಿದ್ಧ ಸೋದರ ಸಂಸ್ಥೆಗಳ ನಡುವೆ ಅನಾರೋಗ್ಯಕರ ಪೈಪೋಟಿ ಯಾರಿಗೂ ಹಿತವಲ್ಲ. ಕೆಎಂಎಫ್ ರಾಜ್ಯದ ಸಾವಿರಾರು ಗ್ರಾಮಗಳ ಸಹಕಾರ ಸಂಘಗಳ ಮೂಲಕ ರೈತರಿಂದಲೇ ಹಾಲನ್ನು ನೇರವಾಗಿ ಖರೀದಿಸುತ್ತದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಬಿಜೆಪಿ ಡಬಲ್ ಎಂಜನ್ ಸರ್ಕಾರ ನಮ್ಮ ರಾಜ್ಯದ ಹಾಲು ಉತ್ಪಾದಕರನ್ನು ಬೀದಿಗೆ ತಳ್ಳಿ ಗುಜರಾತಿಗಳ ಗುಲಾಮರನ್ನಾಗಿ ಮಾಡುವ ಹುನ್ನಾರ ನಡೆಸಿರುವುದು ಸ್ಪಷ್ಟ. ಇದುರೆಗೂ ಇಷ್ಟೆಲ್ಲಾ ಆದರೂ ರಾಜ್ಯ ಬಿಜೆಪಿ ಸರ್ಕಾರದ ದಿವ್ಯಮೌನ, ಕೆಎಂಎಫ್ ನಿಷ್ಕ್ರಿಯತೆ ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಎಚ್ಡಿಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗುಜರಾತಿನಲ್ಲಿ ಎಂದೂ ಕೆಎಂಎಫ್ ಹಾಲು ಮಾರಿದ್ದಿಲ್ಲ. ಅದು ಅಮುಲ್ ನ ಸ್ಥಳೀಯ ಮಾರುಕಟ್ಟೆ ಹಿತ, ಸಹಕಾರಿ ತತ್ವವನ್ನು ಗೌರವಿಸಿದೆ. ಹಾಲು ಸಮೃದ್ಧಿ ಇರುವ ಯಾವುದೇ ಮಹಾಮಂಡಳದ ಸ್ಥಳೀಯ ವ್ಯಾಪ್ತಿಯಲ್ಲಿ ಕೆಎಂಎಫ್ ತನ್ನ ಹಾಲನ್ನು ಮಾರಲ್ಲ. ಕರ್ನಾಟಕ ನೈಜ ಸಹಕಾರ ತತ್ವ ನಂಬಿದ್ದರೆ, ಗುಜರಾತ್ ಅಸಹಕಾರವನ್ನೇ ನಂಬಿದೆ ಎಂದು ಟೀಕಿಸಿದ್ದಾರೆ.
ಕನ್ನಡಿಗರಿಗೆ ಅಮುಲ್ ಋಣಿ ಇರಬೇಕು. ಎಚ್.ಡಿ.ದೇವೇಗೌಡರು ಪ್ರಧಾನಿ ಆಗಿದ್ದಾಗ, ಎಚ್.ಡಿ.ರೇವಣ್ಣ ಅವರು ಕೆಎಂಎಫ್ ಅಧ್ಯಕ್ಷರಾಗಿದ್ದಾಗ ಯಲಹಂಕ ಮದರ್ ಡೈರಿಯಲ್ಲಿ ವಿಶೇಷ ಐಸ್ ಕ್ರೀಮ್ ಘಟಕ ಸ್ಥಾಪಿಸಿ, ಈ ಘಟಕದಿಂದ ದಶಕಗಳಿಂದ ನಿತ್ಯವೂ ಕೆಎಂಎಫ್ ದೊಡ್ಡ ಪ್ರಮಾಣದಲ್ಲಿ ಅಮುಲ್ ಬ್ರ್ಯಾಂಡ್ ಐಸ್ ಕ್ರೀಮ್ ತಯಾರಿಸಿ ಈಗಲೂ ಕೊಡುತ್ತಿದೆ. ಅಷ್ಟೇ ಅಲ್ಲ, ರಾಜ್ಯ ಸರ್ಕಾರವು ಗುಜರಾತ್ ಹಾಲು ಮಹಾಮಂಡಳಿ ಅಮುಲ್ಗೆ ಬೆಂಗಳೂರಿನ ಕೋರಮಂಗಲದಲ್ಲಿ ಅತೀ ಕಡಿಮೆ ದರಕ್ಕೆ ಬೆಲೆ ಬಾಳುವ ಬೃಹತ್ ಜಾಗ ನೀಡಿದೆ. ಇಷ್ಟು ಔದಾರ್ಯ ತೋರಿದ ಕರ್ನಾಟಕ ಹಾಲು ಉತ್ಪಾದಕರು ಮತ್ತು ಕೆಎಂಎಫ್ ಗೆ ದೊಡ್ಡ ಖೆಡ್ಡಾ ತೋಡಲು ಅಮುಲ್ ಹೊರಟಿದೆ ಎಂದು ಹೇಳಿದ್ದಾರೆ.
ಕನ್ನಡಿಗರಾದ ನಾವು ತಕ್ಷಣ ಎಚ್ಚೆತ್ತು ನಂದಿನಿಯನ್ನೇ ಅವಲಂಬಿಸಿರುವ ರಾಜ್ಯದ ರೈತರ ಹಿತವನ್ನು ಆದ್ಯತೆಯಲ್ಲಿ ರಕ್ಷಿಸಿ ಉಳಿಸಿಕೊಳ್ಳಬೇಕು. ನಮ್ಮ ಜನತೆ -ಗ್ರಾಹಕರು ನಂದಿನಿ ಉತ್ಪನ್ನಗಳನ್ನಷ್ಟೇ ಆದ್ಯತೆಯ ಮೇರೆಗೆ ಬಳಸಿ ರಾಜ್ಯದ ರೈತರ ಬದುಕನ್ನು ಕಾಪಾಡಬೇಕು ಎಂದು ಎಚ್ ಡಿಕೆ ಮನವಿ ಮಾಡಿದ್ದಾರೆ.
ಡಬಲ್ ಎಂಜಿನ್ ಬಿಜೆಪಿ ಸರ್ಕಾರ ಈಗಲಾದರೂ ಎಚ್ಚೆತ್ತು ತಕ್ಷಣ ರಾಜ್ಯದಲ್ಲಿ ಅಮುಲ್ ನ ಪ್ಯಾಕೆಟ್ ಹಾಲಿನ ಮಾರಾಟಕ್ಕೆ ತಡೆ ಒಡ್ಡಬೇಕು. ಕೇಂದ್ರದ ಒತ್ತಾಸೆಯಿಂದ ಅಮುಲ್ ಕದ್ದುಮುಚ್ಚಿ ಹಿಂಬಾಗಿಲ ಮೂಲಕ ಬರುತ್ತಿದೆ. ಕೆಎಂಎಫ್ ಮತ್ತು ರೈತರ ಕುತ್ತಿಗೆಗೆ ಕುಣಿಕೆ ಬಿಗಿಯುತ್ತಿರುವ ಅಮುಲ್ ವಿರುದ್ಧ ಕನ್ನಡಿಗರು ಸಿಡಿದೇಳಬೇಕು ಎಂದು ಎಚ್ ಡಿಕೆ ಕರೆ ನೀಡಿದ್ದಾರೆ.
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
ಬೀಜಗಳಿಂದ ತಯಾರಾದ ಪರಿಸರ ಸ್ನೇಹಿ ತ್ರಿವರ್ಣ ಧ್ವಜ
ಕರ್ನಾಟಕ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದಲ್ಲಿ ಅಧಿಕಾರಿ ಶ್ರೇಣಿ ಹುದ್ದೆಗಳ ಭರ್ತಿ
ಪ್ಲಾಸ್ಟಿಕ್ ಬಾಟಲ್ ಗಳಿಂದ ಆರೋಗ್ಯಕ್ಕೆ ಮಾರಕ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.