ಮನೆ ರಾಷ್ಟ್ರೀಯ ಯುಪಿಎಸ್‌ ಸಿ ಮೂಲಕ ನೇಮಕವಾಗುವ ಹೆಚ್ಚಿನ ಅಧಿಕಾರಿಗಳು ದರೋಡೆಕೋರರು: ಕೇಂದ್ರ ಸಚಿವರ ವಿವಾದಾತ್ಮಕ ಹೇಳಿಕೆ

ಯುಪಿಎಸ್‌ ಸಿ ಮೂಲಕ ನೇಮಕವಾಗುವ ಹೆಚ್ಚಿನ ಅಧಿಕಾರಿಗಳು ದರೋಡೆಕೋರರು: ಕೇಂದ್ರ ಸಚಿವರ ವಿವಾದಾತ್ಮಕ ಹೇಳಿಕೆ

0

ಒಡಿಶಾ : ಕೇಂದ್ರ ಲೋಕಸೇವಾ ಆಯೋಗದ(ಯುಪಿಎಸ್‌ ಸಿ) ಮೂಲಕ ನೇಮಕವಾಗುವ ಹೆಚ್ಚಿನ ಅಧಿಕಾರಿಗಳು ದರೋಡೆಕೋರರಾಗಿರುತ್ತಾರೆ ಎಂದು ಕೇಂದ್ರ ಬುಡಕಟ್ಟು ವ್ಯವಹಾರಗಳ ಮತ್ತು ಜಲಶಕ್ತಿ ರಾಜ್ಯ ಸಚಿವ ಬಿಶ್ವೇಶ್ವರ ತುಡು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

Join Our Whatsapp Group

ಒಡಿಶಾದ ಬಾಲಸೋರ್‌ ಜಿಲ್ಲೆಯ ಬಲಿಪಾಲ್‌ ನ ಸರ್ಕಾರಿ ಶಾಲೆಯ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ್ದು, ಯುಪಿಎಸ್‌ ಸಿ ಪರೀಕ್ಷೆ ಮೂಲಕ ಆಯ್ಕೆಯಾದವರು ತುಂಬಾ ಪರಿಣಿತರಾಗಿದ್ದು, ಉತ್ತಮ ಸ್ಥಾನದಲ್ಲಿರುತ್ತಾರೆ ಎಂದು ಭಾವಿಸಿದ್ದೆ. ಆದರೆ ಈಗಿನ ಪರಿಸ್ಥಿತಿಯಲ್ಲಿ ಆ ಮಾತು ಸುಳ್ಳಾಗಿದೆ. ಈಗ ನೇಮಕಗೊಂಡ ಹೆಚ್ಚಿನ ಅಧಿಕಾರಿಗಳು ದರೋಡೆಕೋರ ಮನಸ್ಥಿತಿಯನ್ನು ಹೊಂದಿರುತ್ತಾರೆ. ಎಲ್ಲ ಅಧಿಕಾರಿಗಳು ಹಾಗೇ ಇರುತ್ತಾರೆ ಎಂದು ನಾನು ಹೇಳುವುದಿಲ್ಲ. ಆದರೆ, ಅದರಲ್ಲಿ ಹೆಚ್ಚಿನವರು ಹಾಗೆ ಇರುತ್ತಾರೆ ಎಂದು ಹೇಳಿದ್ದಾರೆ.

ಯುಪಿಎಸ್‌ ಸಿ ಕಚೇರಿಯು ದೆಹಲಿಯಲ್ಲಿರುವ ನಮ್ಮ ನಿವಾಸದ ಹಿಂಭಾಗದಲ್ಲಿದೆ. ಆರಂಭದಲ್ಲಿ ಅದರ ಬಗ್ಗೆ ಹೆಚ್ಚಿನ ಗೌರವವನ್ನು ಹೊಂದಿದ್ದೆ. ಆದರೆ, ಆ ಮನಸ್ಥಿತಿ ಈಗ ಬದಲಾಗಿದೆ. ನೈತಿಕ ಮತ್ತು ಆಧ್ಯಾತ್ಮಕ ಶಿಕ್ಷಣದ ಕೊರತೆಯೇ ಈಗಿನ ಯುವಕರನ್ನು ದರೋಡೆಕೋರ ಮನಸ್ಥಿತಿಗೆ ಸೆಳೆದಿದೆ. ಇಷ್ಟು ವಿದ್ಯಾವಂತರಿದ್ದರು ಯಾಕೆ ನಮ್ಮ ಸಮಾಜ ಇಷ್ಟು ಭ್ರಷ್ಟಾಚಾರದಿಂದ ಕೂಡಿದೆ?‘ ಎಂದು ಪ್ರಶ್ನಿಸಿದ್ದಾರೆ.

ಒಬ್ಬ ಕಳ್ಳನಿಗೆ ಈ ದೇಶದಲ್ಲಿ ಕಠಿಣ ಶಿಕ್ಷೆಯಾಗುತ್ತದೆ. ಆದರೆ, ದೊಡ್ಡ ದೊಡ್ಡ ಮಾಫಿಯಾಗಳಲ್ಲಿ ಶಾಮೀಲಾಗಿರುವ ಇಂತಹ ಅಧಿಕಾರಿಳನ್ನು ಸರ್ಕಾರವೇ ರಕ್ಷಿಸುತ್ತದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ತುಡು ಅವರ ಹೇಳಿಕೆಗೆ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿವೆ. ಕೆಲವರು ಯುಪಿಎಸ್‌ ಸಿ ಪರೀಕ್ಷೆಗಳು ಪಾರದರ್ಶಕತೆಯಿಂದ ಕೂಡಿಲ್ಲ ಎಂದೂ ದೂರಿದ್ದಾರೆ.