ದಾವಣಗೆರೆ: ನ್ಯಾಮತಿ ತಾಲ್ಲೂಕಿನ ಕೆಂಚಿಕೊಪ್ಪದ ಬಳಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಸಕ್ರೆಬೈಲು ಆನೆ ಕ್ಯಾಂಪಿನ ವೈದ್ಯಾಧಿಕಾರಿ ಡಾ. ವಿನಯ್ ಅವರ ಮೇಲೆ ಆನೆ ದಾಳಿ ಮಾಡಿದೆ.
ಎರಡು ದಿನಗಳ ಹಿಂದೆ ಚನ್ನಗಿರಿ ತಾಲ್ಲೂಕಿನ ಸೋಮಲಾಪುರ ಗ್ರಾಮದಲ್ಲಿ ವಿದ್ಯಾರ್ಥಿನಿ ಕವನಾ ಅವರ ಮೇಲೆ ದಾಳಿ ಮಾಡಿ ಸಾಯಿಸಿದ್ದ ಕಾಡಾನೆ ಸೆರೆಗೆ ಎರಡು ದಿನಗಳಿಂದ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದ್ದರು.
ಮಂಗಳವಾರ ಬೆಳಿಗ್ಗೆ ಆನೆ ಸೆರೆ ಹಿಡಿಯುವ ವೇಳೆ ಗನ್ ನಿಂದ ಅರವಳಿಕೆ ಚುಚ್ಚುಮದ್ದು ನೀಡಲು ಹೋದಾಗ ಆ ಶಬ್ದದ ಜಾಡು ಹಿಡಿದು ಬಂದು ಡಾ.ವಿನಯ್ ಅವರ ಮೇಲೆ ದಾಳಿ ಮಾಡಿದೆ.
ಗಾಯಗೊಂಡ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆನೆ ಪತ್ತೆಗೆ ಅರಣ್ಯ ಇಲಾಖೆ ಸಿಬ್ಬಂದಿ ಡ್ರೋಣ್ ತಂಡ, ಮಾವುತರು, ಪಶು ವೈದ್ಯಾಧಿಕಾರಿಗಳ ತಂಡದೊಡನೆ ಕಾರ್ಯಾಚರಣೆ ಆರಂಭಿಸಿದ್ದರು.
ಸೋಮವಾರ ಬಸವಾಪಟ್ಟಣದ ಶೃಂಗಾರ ಭಾಗ್ ಬಳಿ ಇರುವ ಸಂಶಯ ವ್ಯಕ್ತವಾಗಿತ್ತು. ಆದರೆ ಮಂಗಳವಾರ ನ್ಯಾಮತಿಯ ಕೆಂಚಿಕೊಪ್ಪ ಸಮೀಪದ ಹನುಮಾಪುರ ಗಡಿ ಭಾಗ ಜಾಲಿ ಹೊಸೂರು ಹತ್ತಿರ ಕಾಣಿಸಿಕೊಂಡಿದೆ.
ಅರಣ್ಯ ಇಲಾಖೆ ಅಧಿಕಾರಿಗಳು ಆನೆ ಸೆರೆಗೆ ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.