ಚಾಮರಾಜನಗರ: ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಎಸ್ ಪಿ ಅಭ್ಯರ್ಥಿ ಹ.ರಾ.ಮಹೇಶ್ ಅವರಿಗೆ ಎಸ್ ಡಿಪಿಐ ಬೆಂಬಲ ನೀಡುವುದಾಗಿ ಎಸ್ ಡಿ ಪಿಐ ಜಿಲ್ಲಾ ಅಧ್ಯಕ್ಷ ಅಬ್ರಾರ್ ಅಹಮದ್ ಘೋಷಿಸಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಾಮರಾಜನಗರ ಕ್ಷೇತ್ರದಲ್ಲಿ ಬಿಎಸ್ ಪಿ ಅಭ್ಯರ್ಥಿ ಹ.ರಾ.ಮಹೇಶ್ ಅವರಿಗೆ ನಾವು ಸಂಪೂರ್ಣ ಬೆಂಬಲ ನೀಡುತ್ತಿದ್ದೇವೆ. ಮೈಸೂರಿನಲ್ಲಿ ಚಾಮರಾಜ ಕ್ಷೇತ್ರ, ಬೆಂಗಳೂರಿನ ಪುಲಿಕೇಶಿನಗರ, ಸರ್ವಜ್ಞನಗರ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗೆ ಬಿಎಸ್ ಪಿ ಬೆಂಬಲ ನೀಡಲಿದೆ ಎಂದರು.
ಚುನಾವಣೆಯಲ್ಲಿ ಪ್ರಾಧ್ಯಾಪಕರೊಬ್ಬರು ನಿಂತಿರುವುದು ಹೆಮ್ಮೆಯ ವಿಷಯ. ಹೋರಾಟಗಾರರಾದ ಅವರು, ಜನರ ಕಷ್ಟಗಳ ಕುರಿತು ಬೀದಿಗಿಳಿದು ಹೋರಾಟ ಮಾಡುವವರು. ಅಂತಹ ವ್ಯಕ್ತಿ ಅಭ್ಯರ್ಥಿಯಾಗುವುದು ಒಳ್ಳೆಯ ಬೆಳವಣಿಗೆ. ಹ.ರಾ.ಮಹೇಶ್ ಶಾಸಕರಾಗಿ ಆಯ್ಕೆಯಾಗುವುದು ಕ್ಷೇತ್ರಕ್ಕೆ ಅನಿವಾರ್ಯ ಎಂದರು.
ಶಾಸಕ, ಕಾಂಗ್ರೆಸ್ ಅಭ್ಯರ್ಥಿ ಪುಟ್ಟರಂಗಶೆಟ್ಟಿ ವಿರುದ್ಧ ವಾಗ್ದಾಳಿ ನಡೆಸಿದ ಅಬ್ರಾರ್ ಅಹಮದ್, ಸಿ.ಪುಟ್ಟರಂಗಶೆಟ್ಟಿ ಅವರ 15 ವರ್ಷಗಳ ಆಡಳಿತ ನೋಡಿದ್ದೇವೆ. ಶಾಸಕ ಸ್ಥಾನಕ್ಕೆ ಅವರು ಅನರ್ಹ. ಅಧಿವೇಶನದಲ್ಲಿ ಅವರ ಪಾಲ್ಗೊಳ್ಳುವಿಕೆ ಕಂಡಿದ್ದೇವೆ. ಪ್ರಮುಖ ಸಮಸ್ಯೆಗಳ ಬಗ್ಗೆ ಅವರು ಚರ್ಚೆ ಮಾಡಿಲ್ಲ. ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯೂ ಮಾತನಾಡಿಲ್ಲ ಎಂದರು.
ಅವರಿಗೆ ತಿಳಿವಳಿಕೆ ಇಲ್ಲ. ಶಾಸಕ ಸ್ಥಾನದ ಪರಿಕಲ್ಪನೆಯೂ ಇಲ್ಲ. ಕ್ಷೇತ್ರದಲ್ಲಿ ಸಾಕಷ್ಟು ಕೆಲಸಗಳನ್ನು ಮಾಡುವುದಕ್ಕೆ ಅವಕಾಶ ಇದ್ದರೂ ಏನೂ ಮಾಡಿಲ್ಲ. ಜನಪರ ಕಾಳಜಿ ಅವರಿಗಿಲ್ಲ. ನಂಬಿಕೆಗೆ ಅರ್ಹವಾದ ವ್ಯಕ್ತಿಯೂ ಅಲ್ಲ. ಇಂತಹವರು ಪುನಃ ಆಯ್ಕೆಯಾಗಬಾರದು ಎಂದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.