ಭೂ ಮಂಜೂರಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆ ಬೇಲೂರು ಕ್ಷೇತ್ರದ ಶಾಸಕ ಕೆ ಎಸ್ ಲಿಂಗೇಶ್ ಒಳಗೊಂಡು 16 ಮಂದಿಯ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನಿರ್ದೇಶನದಂತೆ ಬೇಲೂರು ಪೊಲೀಸರು ಏಪ್ರಿಲ್ 9ರಂದು ಎಫ್ ಆರ್ ದಾಖಲಿಸಿದ್ದಾರೆ.
ಸಾಮಾಜಿಕ ಕಾರ್ಯಕರ್ತ ಕೆ ಸಿ ರಾಜಣ್ಣ ದೂರು ಆಧರಿಸಿ ಶಾಸಕ ಹಾಗೂ ತಾಲ್ಲೂಕಿನ ಬಗರ್ಹುಕುಂ ಸಾಗುವಳಿ ಸಮಿತಿಯ (ಭೂ ಮಂಜೂರಾತಿ) ಅಧ್ಯಕ್ಷರಾಗಿದ್ದ ಕೆ ಎಸ್ ಲಿಂಗೇಶ್, ಸಮಿತಿಯ ಸದಸ್ಯರಾಗಿದ್ದ ಕುಮಾರ್ ಜಿ ಕೆ ಅಲಿಯಾಸ್ ಕೆಂಚೇಗೌಡ, ಶೈಲಾ ಮೋಹನ್, ಟಿ ಆರ್ ರಮೇಶ್ ಅಲಿಯಾಸ್ ರುದ್ರಯ್ಯ, ಪರ್ವತಗೌಡ ಅಲಿಯಾಸ್ ಕಾಳೇಗೌಡ, ಚೇತನಾ, ಈಶ್ವರ ಪ್ರಸಾದ್, ಎಸ್ ಎನ್ ಲಿಂಗೇಶ್, ರಂಗತ್, ಭಾಗ್ಯಮ್ಮ, ಸಮಿತಿಯ ಕಾರ್ಯದರ್ಶಿಗಳು ಹಾಗೂ ತಹಶೀಲ್ದಾರ್’ಗಳಾದ ಬಿ ಎ ಜಗದೀಶ್, ಎಚ್ ಎಸ್ ಪರಮೇಶ್, ಜೆ ಉಮೇಶ್, ಬಿ ಎಸ್ ಪುಟ್ಟಶೆಟ್ಟಿ, ಯು ಮೋಹನ್ ಕುಮಾರ್ ಅವರು ಕ್ರಮವಾಗಿ 1-15 ಆರೋಪಿಗಳಾಗಿದ್ದಾರೆ. ಹಾಸನದ ಅನಾಮಧೇಯ ವ್ಯಕ್ತಿಯನ್ನು 16ನೇ ಆರೋಪಿಯನ್ನಾಗಿ ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.
ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್’ಗಳಾದ 468, 464, 465, 471, 409, 420, 120ಬಿ ಅಡಿ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣದ ಹಿನ್ನೆಲೆ: ಬೇಲೂರು ತಾಲ್ಲೂಕಿನಲ್ಲಿ 2,750 ಎಕರೆ ಭೂಮಿಯನ್ನು 1,430 ಮಂದಿ ನಕಲಿ ಮತ್ತು ಅಕ್ರಮ ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗಿದೆ. ಬೇಲೂರು ತಾಲ್ಲೂಕು ಬಗರ್ ಹುಕುಂ ಸಾಗುವಳಿ ಸಮಿತಿ ಅಧ್ಯಕ್ಷರಾಗಿ ಮೊದಲ ಆರೋಪಿ, ಶಾಸಕ ಲಿಂಗೇಶ್ ಅವರು 750 ಎಕರೆಗಿಂತ ಹೆಚ್ಚಿನ ಪ್ರಮಾಣದ ಸರ್ಕಾರಿ ಜಮೀನುಗಳ ಅನುದಾನವನ್ನು ಅನುಮೋದಿಸಿದ್ದಾರೆ. ಆರೋಪಿಗಳೆಲ್ಲರೂ ಅಧಿಕಾರಿಗಳ ಜೊತೆ ಶಾಮೀಲಾಗಿ ತಮ್ಮ ಅಧಿಕಾರ ಮತ್ತು ಸ್ಥಾನ ದುರ್ಬಳಕೆ ಮಾಡಿಕೊಂಡಿದ್ದಾರೆ. ನಕಲಿ ದಾಖಲೆ ದೃಷ್ಟಿಸಲು ಸಹರಿಸುವ ಮೂಲಕ ಅಧಿಕಾರಿಗಳು ಭಾಗಿಯಾಗಿದ್ದು, ಸರ್ಕಾರಕ್ಕೆ ವಂಚಿಸುವ ಉದ್ದೇಶದಿಂದ ಅಪರಾಧಿಕ ಒಳಸಂಚು ನಡೆಸಿದ್ದಾರೆ. ಮಾಜಿ ಶಾಸಕ ವೈ ಎನ್ ರುದ್ರೇಶ್ ಗೌಡ ಅವರೂ ಅಕ್ರಮ ವಹಿವಾಟಿನ ಭಾಗವಾಗಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ ಎಂದು ಎಫ್ಐಆರ್’ನಲ್ಲಿ ಉಲ್ಲೇಖಿಸಲಾಗಿದೆ.
ಈಚೆಗೆ ಕೋಲಾರದ ರಾಜಣ್ಣ ಅವರ ಖಾಸಗಿ ದೂರನ್ನು ಪರಿಗಣಿಸಿದ್ದ ನ್ಯಾಯಾಲಯವು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲು ಮಾಡಿ, ಅಪರಾಧ ಪ್ರಕ್ರಿಯಾ ಸಂಹಿತೆ ಸೆಕ್ಷನ್ 156 (3)ರ ಅನುಸಾರ ತನಿಖೆ ನಡೆಸಿ 2023ರ ಜುಲೈ 7ಕ್ಕೆ ವರದಿ ಸಲ್ಲಿಸುವಂತೆ ಬೇಲೂರು ಪೊಲೀಸ್ ಠಾಣಾಧಿಕಾರಿಗೆ ನಿರ್ದೇಶಿಸಿತ್ತು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.