ಚಿಕ್ಕಮಗಳೂರು: ಜಗದೀಶ್ ಶೆಟ್ಟರ್ ಪಕ್ಷವನ್ನು ಬಿಟ್ಟು ಕಾಂಗ್ರೆಸ್ ಸೇರಿದ್ದು ದುರದೃಷ್ಟಕರ. ಒಬ್ಬ ವ್ಯಕ್ತಿಗೆ ಒಂದು ಪಕ್ಷ ಏನಿಲ್ಲ ಸ್ಥಾನ ನೀಡಬಹುದು ಅದನ್ನೆಲ್ಲ ಕೊಟ್ಟಿದೆ. ಜಗದೀಶ್ ಶೆಟ್ಟರ್ ಪಕ್ಷ ತೊರೆದು ಯಾವ ಮೆಸೇಜ್ ನೀಡಿದ್ರು. ಸೈದ್ಧಾಂತಿಕವಾಗಿ ಬಿಜೆಪಿ ಜೊತೆ ಶೆಟ್ಟರ್ ಇರ್ಲಿಲ್ವಾ? ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕೆಂಡಕಾರಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಅಸಮಾಧಾನಗೊಂಡಿದ್ದ ಜಗದೀಶ್ ಶೆಟ್ಟರ್ ಬಿಜೆಪಿಗೆ ಬೈ ಹೇಳಿ ಕಾಂಗ್ರೆಸ್ ಸೇರಿರುವ ಕುರಿತು ಪ್ರತಿಕ್ರಿಯಿಸಿದ ಅವರು, ವೈಯಕ್ತಿಕ ಲಾಭ ನಷ್ಟವನ್ನು ಹಾಕಿ ನನಗೆ ಲಾಭ ಆದ್ರೆ ಮಾತ್ರ ಬಿಜೆಪಿ. ಇನ್ನೊಬ್ಬರಿಗೆ ಆದ್ರೆ ಬಿಜೆಪಿ ಅಲ್ಲ ಎಂಬ ಮನಸ್ಥಿತಿ ಆಶ್ಚರ್ಯ ತರಿಸಿದೆ. ಜಗದೀಶ್ ಶೆಟ್ಟರ್ ಅವರಿಂದ ಇಂತಹದನ್ನ ನಿರೀಕ್ಷೆ ಮಾಡಿರಲಿಲ್ಲ ಎಂದರು.
ಬಿಜೆಪಿ ಪಕ್ಷ ಕಷ್ಟಗಳನ್ನು ದಾಟಿ ಬಂದಿದೆ. ಭಾರತೀಯ ಜನತಾ ಪಾರ್ಟಿಯಲ್ಲಿ ಬೆಳವಣಿಗೆಯ ಇತಿಹಾಸದಲ್ಲಿ ಇದ್ದ ಸ್ಥಾನ ಶೆಟ್ಟರ್ ಕಳೆದುಕೊಂಡಿದ್ದಾರೆ. ಒಂದು ಪಕ್ಷ ನಷ್ಟವನ್ನು ರಿಕವರಿ ಮಾಡಿಕೊಳ್ಳುತ್ತೆ. ಆದ್ರೆ ವ್ಯಕ್ತಿ ನಷ್ಟವನ್ನು ರಿಕವರಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಜನಸಂಘದಿಂದ ಭಾರತೀಯ ಜನತಾ ಪಾರ್ಟಿಯನ್ನು ಕಟ್ಟಿ ಬೆಳೆಸಿದ ಕುಟುಂಬ ಎಂಬ ಹೆಗ್ಗಳಿಕೆಯಿಂದ ದೂರ ಆಗಿದ್ದಾರೆ. ಬಿಜೆಪಿ ಕಟ್ಟಿ ಬೆಳಿಸಿದ ನಾಯಕರ ಸಾಲಿಗೆ ಸೇರಬಹುದಾದಂತ ಅವಕಾಶವನ್ನು ಕಳೆದುಕೊಂಡಿದ್ದಾರೆ. ಎಲ್ಲವನ್ನು ಅನುಭವಿಸಿ ಪಕ್ಷ ತೊರೆದಿದ್ದು ದುರದೃಷ್ಟಕರ ಎಂದು ವಾಗ್ದಾಳಿ ನಡೆಸಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.