ಮನೆ ರಾಷ್ಟ್ರೀಯ ತೆಲಂಗಾಣದಲ್ಲಿ ಅಪಘಾತ: ಬಿಜೆಪಿ ನಾಯಕಿ ನೀರಜಾ ರೆಡ್ಡಿ ನಿಧನ

ತೆಲಂಗಾಣದಲ್ಲಿ ಅಪಘಾತ: ಬಿಜೆಪಿ ನಾಯಕಿ ನೀರಜಾ ರೆಡ್ಡಿ ನಿಧನ

0

ತೆಲಂಗಾಣದ ಬೀಚುಪಲ್ಲಿಯಲ್ಲಿ ನಡೆದ ಅಪಘಾತದಲ್ಲಿ ಬಿಜೆಪಿ ನಾಯಕಿ ನೀರಜಾ ರೆಡ್ಡಿ ಕೊನೆಯುಸಿರೆಳೆದಿದ್ದಾರೆ.

Join Our Whatsapp Group

ಕರ್ನೂಲ್‌’ನ ಆಲೂರು ಬಿಜೆಪಿ ಉಸ್ತುವಾರಿ ಹಾಗೂ ಮಾಜಿ ಶಾಸಕಿ ನೀರಜಾ ರೆಡ್ಡಿ(52) ಅವರು ಹೈದರಾಬಾದ್‌’ನಿಂದ ಕರ್ನೂಲ್‌ಗೆ ಹಿಂತಿರುಗುತ್ತಿದ್ದಾಗ ಭಾನುವಾರ ತೆಲಂಗಾಣದ ಬೀಚುಪಲ್ಲಿ ಎಂಬಲ್ಲಿ ಟೈರ್ ಸ್ಫೋಟಗೊಂಡು ವಾಹನದ ಮೇಲೆ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ..

ಅಪಘಾತದಲ್ಲಿ ಗಾಯಗೊಂಡ ನೀರಜಾರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಆಲೂರು ಕ್ಷೇತ್ರದ ಮಾಜಿ ಶಾಸಕಿ ನೀರಜಾ ರೆಡ್ಡಿ ಅವರು 2009 ರಲ್ಲಿ ಕಾಂಗ್ರೆಸ್​ ನಿಂದ ಆಯ್ಕೆಯಾದರು, ಆದರೆ ನಂತರ 2019 ರಲ್ಲಿ ವೈಎಸ್‌’ಆರ್ ಕಾಂಗ್ರೆಸ್ ಪಕ್ಷಕ್ಕೆ (ವೈಎಸ್‌ ಆರ್‌ ಸಿಪಿ) ಸೇರಿದರು.

ಕೋದಂಡಪುರಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.