ಮನೆ ರಾಜ್ಯ ಜಗದೀಶ್ ಶೆಟ್ಟರ್ ದುರ್ಜನರ ಸಂಗ ಮಾಡಿದ್ದಾರೆ: ಸಿಎಂ ಬಸವರಾಜ ಬೊಮ್ಮಾಯಿ

ಜಗದೀಶ್ ಶೆಟ್ಟರ್ ದುರ್ಜನರ ಸಂಗ ಮಾಡಿದ್ದಾರೆ: ಸಿಎಂ ಬಸವರಾಜ ಬೊಮ್ಮಾಯಿ

0

ಮೈಸೂರು: ಜಗದೀಶ್ ಶೆಟ್ಟರ್ ಇಷ್ಟು ದಿನ ಸಜ್ಜನರ ಸಂಗದಲ್ಲಿದ್ದರು. ಈಗ ದುರ್ಜನರ ಸಂಗ ಮಾಡಿದ್ದಾರೆ. ಬಸವಣ್ಣ ದುರ್ಜನ ಸಂಗ ಮಾಡಬೇಡಿ ಎಂದು ಹೇಳಿದ್ದರು. ಇದನ್ನ ಎಲ್ಲರೂ ನೆನಪಿಟ್ಟುಕೊಳ್ಳಿ. ಶೆಟ್ಟರ್ ಈಗ ಮಾಡಿರುವ ಸಂಗ ಸರಿಯಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Join Our Whatsapp Group

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸಂಪೂರ್ಣ ಬಹುಮತ ಪಡೆಯುತ್ತದೆ. ಶೆಟ್ಟರ್ ರಾಜೀನಾಮೆಯಿಂದ ಯಾವುದೇ ಸಮಸ್ಯೆ ಆಗುವುದಿಲ್ಲ. ನಮ್ಮದು ಕಾರ್ಯಕರ್ತರ ಆಧಾರಿತ ಪಕ್ಷ ಎಂದರು.

ವರುಣ ಕ್ಷೇತ್ರದಲ್ಲಿ ಫೈಟ್ ಬಹಳ ಬಿಗಿಯಾಗಿದೆ. ನಾವು ಕ್ಷೇತ್ರವನ್ನು ಬಹಳ ಗಂಭೀರವಾಗಿ ಪರಿಗಣಿಸಿದ್ದೇವೆ. ಈ ಕಾರಣಕ್ಕೆ ನಾವು ಸೋಮಣ್ಣನಂತಹ ನಾಯಕನನ್ನು ಅಲ್ಲಿ ಕಣಕ್ಕಿಳಿಸಿದ್ದೇವೆ. ರಾಜ್ಯ ಹಾಗೂ ರಾಷ್ಟ್ರ ನಾಯಕರು ಪ್ರಚಾರಕ್ಕೆ ಬರುತ್ತಾರೆ. ಮೋದಿ ಅವರ ಚುನಾವಣಾ ಪ್ರಚಾರದ ದಿನಾಂಕಗಳು ಇನ್ನೂ ನಿಗದಿಯಾಗಿಲ್ಲ. ಬಹುತೇಕ ನಾಮಪತ್ರ ಪ್ರಕ್ರಿಯೆ ಮುಗಿದ ಮೇಲೆ ದಿನಾಂಕಗಳು ನಿರ್ಧಾರವಾಗುತ್ತದೆ ಎಂದರು.

ಕಾಂಗ್ರೆಸ್ ನಲ್ಲಿ ಅಭ್ಯರ್ಥಿಗಳ ಕೊರತೆ ಬಹಳವಿತ್ತು. 60 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಅವರಿಗೆ ಅಭ್ಯರ್ಥಿಗಳೇ ಇರಲಿಲ್ಲ. ಮೊದಲ ಪಟ್ಟಿಯನ್ನು ಮಾತ್ರ ವೀರಾವೇಶದಿಂದ ಬಿಡುಗಡೆ ಮಾಡಿದರು. ಈಗ ಅವರ ಸ್ಥಿತಿ ಗೊತ್ತಾಗುತ್ತಿದೆ ಎಂದು ವ್ಯಂಗ್ಯವಾಡಿದರು.