ನಟ ಸೂರ್ಯ ಅಭಿನಯದ ಹೊಸ ಪ್ಯಾನ್ ಇಂಡಿಯಾ ಸಿನಿಮಾದ ಬಗ್ಗೆ ಈಗಾಗಲೇ ಸಾಕಷ್ಟು ನಿರೀಕ್ಷೆ ಸೃಷ್ಟಿಯಾಗಿದೆ. ಈ ಬಿಗ್ ಬಜೆಟ್ ಸಿನಿಮಾದ ಟೈಟಲ್ ಬಗ್ಗೆ ಆರಂಭದಿಂದಲೂ ಸಾಕಷ್ಟು ಚರ್ಚೆ ಆಗುತ್ತಿತ್ತು. ಆದರೆ ಇದರ ಟೈಟಲ್ ಏನು ಎಂಬುದರ ಬಗ್ಗೆ ಮಾತ್ರ ಚಿತ್ರತಂಡ ಈವರೆಗೂ ಮಾಹಿತಿ ಹಂಚಿಕೊಂಡಿರಲಿಲ್ಲ. ಇದೀಗ ಆ ಬಗ್ಗೆ ಅಧಿಕೃತ ಮಾಹಿತಿಯನ್ನು ಚಿತ್ರತಂಡ ಹಂಚಿಕೊಂಡಿದೆ. ಈ ಪ್ಯಾನ್ ಇಂಡಿಯಾ ಸಿನಿಮಾಗೆ ‘ಕಂಗುವ’ ಎಂದು ಟೈಟಲ್ ಇಡಲಾಗಿದೆ. ಇದು ಸೂರ್ಯ ನಟನೆಯ 42ನೇ ಸಿನಿಮಾವಾಗಿದೆ.
ಮೋಷನ್ ಪೋಸ್ಟರ್ ರಿಲೀಸ್
ಈಚೆಗೆ ‘ಸೂರರೈ ಪೋಟ್ರು’, ‘ಜೈ ಭೀಮ್’, ‘ಈಟಿ’ ಥರದ ಹಿಟ್ ಸಿನಿಮಾಗಳನ್ನು ನೀಡಿರುವ ನಟ ಸೂರ್ಯ, ‘ವಿಕ್ರಮ್’ ಸಿನಿಮಾದ ‘ರೋಲೆಕ್ಸ್’ ಪಾತ್ರದಿಂದಲೂ ಸಾಕಷ್ಟು ಕ್ರೇಜ್ ಹುಟ್ಟುಹಾಕಿದ್ದಾರೆ. ಇದೀಗ ತಮ್ಮ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ‘ಕಂಗುವ’ ಮೂಲಕ ದೊಡ್ಡ ಸದ್ದು ಮಾಡುತ್ತಿದ್ದಾರೆ. ಚಿತ್ರದ ಮೋಷನ್ ಪೋಸ್ಟರ್ ಕೂಡ ರಿಲೀಸ್ ಆಗಿದೆ. ಈ ಸಿನಿಮಾವನ್ನು 10 ಭಾಷೆಗಳಲ್ಲಿ ರಿಲೀಸ್ ಮಾಡುತ್ತಿರುವುದು ವಿಶೇಷ.
ಶಿವ ನಿರ್ದೇಶನದ ಸಿನಿಮಾ
ಈ ಹಿಂದೆ ನಟ ಅಜಿತ್ ಜೊತೆಗೆ ‘ವೀರಂ’, ‘ವಿಶ್ವಾಸಂ’ ಹಾಗೂ ‘ಸೂಪರ್ ಸ್ಟಾರ್’ ರಜನಿಕಾಂತ್ ಜೊತೆಗೆ ‘ಅಣ್ಣಾಥೆ’ ಸಿನಿಮಾಗಳನ್ನು ಮಾಡಿರುವ ನಿರ್ದೇಶನ ಶಿವ ಇದೇ ಮೊದಲ ಬಾರಿಗೆ ಸೂರ್ಯಗೆ ನಿರ್ದೇಶನ ಮಾಡುತ್ತಿದ್ದಾರೆ. ಶಿವ ಕರಿಯರ್ನಲ್ಲೂ ಕೂಡ ‘ಕಂಗುವ’ ದೊಡ್ಡ ಬಜೆಟ್ ನ ಸಿನಿಮಾ ಹಾಗೂ ಪ್ಯಾನ್ ಇಂಡಿಯಾ ಚಿತ್ರ.
‘ಕಂಗುವ ಚಿತ್ರವು 10 ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿರುವುದರಿಂದ ಎಲ್ಲ ಭಾಷೆಗಳಿಗೂ ಕನೆಕ್ಟ್ ಆಗುವಂತಹ ಶೀರ್ಷಿಕೆಯೊಂದರ ಹುಡುಕಾಟದಲ್ಲಿ ಚಿತ್ರತಂಡ ಇತ್ತು. ಆ ಶೀರ್ಷಿಕೆ ಕೊನೆಗೂ ಸಿಕ್ಕಿದ್ದು, ‘ಕಂಗುವ’ ಎಂದರೆ, ಬೆಂಕಿಯ ಶಕ್ತಿಯುಳ್ಳವನು ಎಂದರ್ಥ. ಇಲ್ಲಿ ನಾಯಕ ಒಬ್ಬ ಸೂಪರ್ ಹೀರೋ ಆಗಿದ್ದು, ಹಲವು ಅವತಾರಗಳಲ್ಲಿ ಕಾಣಿಸಿಕೊಳ್ಳುತ್ತಾನೆ’ ಎಂದು ಚಿತ್ರತಂಡ ಹೇಳಿಕೊಂಡಿದೆ.
‘ಕಂಗುವ’ ಸಿನಿಮಾವನ್ನು ಸ್ಟುಡಿಯೋ ಗ್ರೀನ್ ಸಂಸ್ಥೆಯ ಕೆ ಇ ಜ್ಞಾನವೇಲ್ ರಾಜ ಹಾಗೂ ತೆಲುಗಿನ ಯುವಿ ಪ್ರೊಡಕ್ಷನ್ಸ್ನ ವಂಶಿ ಮತ್ತು ಪ್ರಮೋದ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಈ ಬಹುಕೋಟಿ ವೆಚ್ಚದ ‘ಕಂಗುವ’ ಚಿತ್ರದಲ್ಲಿ ಸೂರ್ಯಗೆ ನಾಯಕಿಯಾಗಿ ಬಾಲಿವುಡ್ ಬೆಡಗಿ ದಿಶಾ ಪಠಾಣಿ ಅಭಿನಯಿಸುತ್ತಿದ್ದಾರೆ. ಪ್ರಮುಖ ಪಾತ್ರಕ್ಕೆ ಹಾಸ್ಯ ನಟ ಯೋಗಿ ಬಾಬು ಬಣ್ಣ ಹಚ್ಚಿದ್ದಾರೆ.
‘ಕಂಗುವ’ ಸಿನಿಮಾಗೆ ವೆಟ್ರಿ ಪಳನಿಸಾಮಿ ಛಾಯಾಗ್ರಹಣ ಮಾಡುತ್ತಿದ್ದು, ದೇವಿಶ್ರೀ ಪ್ರಸಾದ್ ಅವರ ಸಂಗೀತ ಸಂಯೋಜನೆ ಇದೆ. ಈ ಚಿತ್ರದ ವಿಎಫ್ ಎಕ್ಸ್ ಗೆ ಸಾಕಷ್ಟು ಹಣ ಖರ್ಚಾಗಲಿದೆಯಂತೆ. ‘ಕಂಗುವ’ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಿಗೆ ಸಾಕಷ್ಟು ಸಮಯ ಬೇಕಾಗಿರುವುದರಿಂದ 2024ರ ಆರಂಭದಲ್ಲಿ ಈ ಸಿನಿಮಾವನ್ನು ರಿಲೀಸ್ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ. ಗೋವಾ, ಚೆನ್ನೈ ಮುಂತಾದ ಕಡೆ ಈಗಾಗಲೇ ‘ಕಂಗುವ’ ಚಿತ್ರಕ್ಕೆ ಶೇ.50ರಷ್ಟು ಚಿತ್ರೀಕರಣ ಮುಗಿದಿದೆ. ಶೀಘ್ರದಲ್ಲೇ ರಿಲೀಸ್ ಡೇಟ್ ಘೋಷಣೆ ಮಾಡಲು ‘ಕಂಗುವ’ ಚಿತ್ರತಂಡ ಯೋಜನೆ ಹಾಕಿಕೊಂಡಿದೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.