ಮನೆ ಅಪರಾಧ ಧಾರವಾಡ: ಎರಡು ಗುಂಪಿನ ನಡುವೆ ಜಗಳ ಬಿಡಿಸಿದ ವ್ಯಕ್ತಿಯ ಕೊಲೆ

ಧಾರವಾಡ: ಎರಡು ಗುಂಪಿನ ನಡುವೆ ಜಗಳ ಬಿಡಿಸಿದ ವ್ಯಕ್ತಿಯ ಕೊಲೆ

0

ಧಾರವಾಡ: ಎರಡು ಗುಂಪಿನ ನಡುವಿನ ಜಗಳವನ್ನು ಬಿಡಿಸಿ ಕಳುಹಿಸಿದ ವ್ಯಕ್ತಿಯನ್ನು ಚಾಕುವಿನಿಂದ ಹತ್ಯೆ ಮಾಡಿರುವ ಘಟನೆ ತಾಲೂಕಿನ ಕೋಟೂರು ಗ್ರಾಮದಲ್ಲಿ ನಡೆದಿದೆ.

Join Our Whatsapp Group

ಪ್ರವೀಣ್ ಕಮ್ಮಾರ(36) ಮೃತ ವ್ಯಕ್ತಿ. ಗ್ರಾಮ ಪಂಚಾಯತ್ ಉಪಾಧ್ಯಕ್ಷ ಆಗಿರುವ ಪ್ರವೀಣ್, ಗ್ರಾಮದಲ್ಲಿ ನಡೆದಿದ್ದ ಉಡಚಮ್ಮ ದೇವಿ ಜಾತ್ರೆಯ ಪ್ರಸಾದದ ವೇಳೆ ಕೆಲವರು ಕುಡಿದು ಜಗಳವಾಡಿಕೊಳ್ಳಲು ಶುರು ಮಾಡಿದ್ದಾರೆ.

ಈ ವೇಳೆ ಪ್ರವೀಣ್ ಜಗಳ ಬಿಡಿಸಿ ಕಳುಹಿಸಿದ್ದ. ಆದರೆ ಜಗಳ ಮಾಡಿದ್ದ ಒಂದು ಗುಂಪಿನ ಕಡೆಯವರು ಪುನಃ ಜಗಳವಾಡಲು ಬಂದಿದ್ದಾರೆ. ಈ ವೇಳೆ ಪ್ರವೀಣ್ ಗೆ ಚಾಕು ಇರಿದಿದ್ದಾರೆ. ಇನ್ನು ಚಾಕು ಇರಿತದಿಂದ ತೀವ್ರವಾಗಿ ಗಾಯಗೊಂಡಿದ್ದ ಪ್ರವೀಣ್ ರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇಂದು(ಏ.19) ಬೆಳಗಿನ ಜಾವ ಚಿಕಿತ್ಸೆ ಫಲಿಸದೇ ಪ್ರವೀಣ್ ಸಾವನ್ನಪ್ಪಿದ್ದಾನೆ.

ಚಾಕು ಇರಿದಿದ್ದ ರಾಘವೇಂದ್ರ ಪಟಾತ್ ಸೇರಿದಂತೆ ನಾಲ್ಕು ಜನರನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಗರಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗ್ರಾಮಕ್ಕೆ ಎಸ್ಪಿ ಲೋಕೇಶ ಜಗಲಾಸರ್ ಭೇಟಿ

ಪ್ರವೀಣ್ ಬಿಜೆಪಿ ಯುವ ಮೋರ್ಚಾ ಮುಖಂಡನೂ ಆಗಿದ್ದರಿಂದ ರಾಜಕೀಯ ತಿರುವು ಪಡೆದುಕೊಳ್ಳುವ ಸಾಧ್ಯತೆಯಿರುವ ಕಾರಣ ಗ್ರಾಮಕ್ಕೆ ಎಸ್ಪಿ ಲೋಕೇಶ ಜಗಲಾಸರ್ ಭೇಟಿ ನೀಡಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಗ್ರಾಮಕ್ಕೆ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.