ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ 68ನೇ ಮಹಾಲಕ್ಷ್ಮಿಪುರ ವಾರ್ಡಿನ ಬಿಬಿಎಂಪಿ 1ನೇ ಮುಖ್ಯ ರಸ್ತೆಗಳ ಬಳಿ ಇರುವ ಮನೆ ಮನೆಗೆ ಭೇಟಿ ನೀಡಿ ಕ್ಷೇತ್ರದ ಅಭಿವೃದ್ಧಿಯನ್ನು ನೆನೆದು ಗೋಪಾಲಯ್ಯನವರಿಗೆ ಮತ ನೀಡಿ ಎಂದು ಹೇಮಲತಾ ಗೋಪಾಲಯ್ಯ ಅವರು ಸ್ಥಳೀಯ ಶಾಸಕರು ಹಾಗೂ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯನವರ ಪರವಾಗಿ ಮತಯಾಚನೆ ನಡೆಸಿದರು.
ಸಚಿವರು ಕ್ಷೇತ್ರದಲ್ಲಿ ಮಾಡಿದಂತಹ ಉತ್ತಮ ಕೆಲಸಗಳಾದ ಕುಡಿಯುವ ನೀರಿನ ಘಟಕ, ನವ ನಂದಿನಿ ಪಾರ್ಕ್, ಸರ್ಕಾರಿ ಶಾಲೆಗಳ ನಿರ್ಮಾಣ, ನಮ್ಮ ಕ್ಲಿನಿಕ್, ಮಹಾನಗರ ಪಾಲಿಕೆಗಳ ಶಾಲೆಗಳು, ವಿವಿಧ ಕ್ರೀಡಾ ಮೈದಾನಗಳು ಹೀಗೆ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಜನಸಾಮಾನ್ಯರಿಗೆ ತಿಳಿಸುವ ಮೂಲಕ ಮತಯಾಚನೆ ಮಾಡಿದರು.
ಕ್ಷೇತ್ರದ ಜನರಿಂದ ಸಚಿವರಿಗೆ ಉತ್ತಮ ಪ್ರತಿಕ್ರಿಯೆ ಹಾಗೂ ಬೆಂಬಲ ದೊರೆಯಿತು. ಮಹಾಲಕ್ಷ್ಮಿ ಲೇಔಟ್ ನಲ್ಲಿ ಈ ಬಾರಿ ಮತ್ತೊಮ್ಮೆ ಗೋಪಾಲಣ್ಣ ಅವರನ್ನು ಗೆಲ್ಲಿಸುವುದಾಗಿ ತಿಳಿಸಿದ್ದಾರೆ.
ಇದೇ ವೇಳೆ ಮಾಜಿ ಉಪಮೇಯರ್ ಎಸ್.ಹರೀಶ್, ಡಾ.ಮಂಜುನಾಥ್ ಗೌಡ, ರೈಲು ನಾರಾಯಣ್, ಶಿವಾನಂದಮೂರ್ತಿ, ವಾರ್ಡ್ ಅಧ್ಯಕ್ಷ ಆರ್.ನಾರಾಯಣ್, ವೆಂಕಟೇಶ್ ಮೂರ್ತಿ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಕೆ ಸುಧಾಕರ್ ಗೆ ಗಂಡಾಂತರ.
ಕಾಂಗ್ರೆಸ್ ಕಾರ್ಯಕರ್ತರಿಗೆ ಐಟಿ ಕಿರುಕುಳ
ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ದ್ವಂಸ
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.