ಮನೆ ರಾಜ್ಯ ಸಚಿವ ಕೆ.ಗೋಪಾಲಯ್ಯ ಅವರಿಂದ ಬಿರುಸಿನ ಮತ ಯಾಚನೆ

ಸಚಿವ ಕೆ.ಗೋಪಾಲಯ್ಯ ಅವರಿಂದ ಬಿರುಸಿನ ಮತ ಯಾಚನೆ

0

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಜೈ ಮಾರುತಿ ನಗರದಲ್ಲಿ ಇಂದು ಬೆಳಗ್ಗೆ, ಮಾನ್ಯ ಸ್ಥಳೀಯ ಶಾಸಕರು ಹಾಗೂ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ಮನೆ ಮನೆಗೆ ಭೇಟಿ ನೀಡಿ ಬಿರುಸಿನ ಮತಯಾಚನೆ ಮಾಡಿದರು.

Join Our Whatsapp Group

ಜನತೆಯ ಕಲ್ಯಾಣಕ್ಕಾಗಿ ಹಾಗೂ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಹಗಲಿರುಳು ಶ್ರಮಿಸಿ ಸರ್ಕಾರಿ ಶಾಲೆಗಳು, ಮಹಾನಗರ ಪಾಲಿಕೆಗಳ ಶಾಲೆಗಳು, ಉದ್ಯಾನವನ, ನಮ್ಮ ಕ್ಲಿನಿಕ್, ರಾಣಿ ಅಬ್ಬಕ್ಕ ದೇವಿ ಕ್ರೀಡಾಂಗಣ ಸೇರಿದಂತೆ ಅನೇಕ ಉತ್ತಮ ಕೆಲಸಗಳನ್ನು ಜನರ ಮುಂದೆ ಇಟ್ಟು  ಮಹಾಲಕ್ಷ್ಮಿ ಲೇಔಟ್ ನಲ್ಲಿ ಬಹುಮತದಿಂದ ಗೆಲ್ಲಿಸುವಂತೆ ಜನಸಾಮಾನ್ಯರಿಗೆ ತಿಳಿಸುವ ಮೂಲಕ ಮತ ಯಾಚನೆ ನಡೆಸಿದರು.

ಇದೇ ವೇಳೆ ಮಾಜಿ ಶಾಸಕ ನೆ.ಲ.ನರೇಂದ್ರಬಾಬು, ಡಾ.ಗಿರೀಶ್ ನಾಶಿ, ಮಾಜಿ ಬಿಬಿಎಂಪಿ ಸದಸ್ಯ ರಾಜೇಂದ್ರ ಕುಮಾರ್, ಮಂಡಲದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ರಾಘವೇಂದ್ರ ನಾಗರಾಜ್ ಹಾಗೂ ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ನಾಗಪುರ  ವಾರ್ಡ್ ನಲ್ಲಿ, ಬಿಜೆಪಿ ಸರ್ಕಾರದಿಂದ ಸಚಿವರು ಕ್ಷೇತ್ರದಲ್ಲಿ ಈವರೆಗೆ ಮಾಡಿರುವಂತಹ ಅಭಿವೃದ್ಧಿ ಕಾರ್ಯಗಳು ಹಾಗೂ ಇನ್ನಿತರ ಉತ್ತಮ ಕಾರ್ಯಕ್ರಮಗಳನ್ನು ಜನಸಾಮಾನ್ಯರಿಗೆ ತಿಳಿಸುವುದರ ಮೂಲಕ ಸಚಿವ ಕೆ.ಗೋಪಾಲಯ್ಯ ಅವರ ಪರವಾಗಿ ಪತ್ನಿ ಹೇಮಲತಾ ಗೋಪಾಲಯ್ಯ ಹಾಗೂ ಡಾ.ಮಂಜುನಾಥ್ ಗೌಡ ಅವರು ಮತಯಾಚನೆ ಮಾಡಿದರು.

ಇದೇ ಸಂದರ್ಭದಲ್ಲಿ ಮಾಜಿ ಉಪಮೇಯರ್ ಎಸ್.ಹರೀಶ್, ವೆಂಕಟೇಶ್ ಮೂರ್ತಿ, ವೆಂಕಟೇಶ್, ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.