ಮನೆ ರಾಜ್ಯ ಕನಕಪುರ: ಡಿ.ಕೆ.ಶಿವಕುಮಾರ್ ನಾಮಪತ್ರ ಸ್ವೀಕಾರ

ಕನಕಪುರ: ಡಿ.ಕೆ.ಶಿವಕುಮಾರ್ ನಾಮಪತ್ರ ಸ್ವೀಕಾರ

0

ರಾಮನಗರ: ಕನಕಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಲ್ಲಿಸಿದ ನಾಮಪತ್ರವು ಸ್ವೀಕಾರಗೊಂಡಿದೆ‌.

Join Our Whatsapp Group

ಕನಕಪುರ ತಹಶೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ಕ್ಷೇತ್ರದ ಚುನಾವಣಾ ಅಧಿಕಾರಿ ಸಂತೋಷ್ ನೇತೃತ್ವದಲ್ಲಿ ನಾಮಪತ್ರಗಳ ಪರಿಶೀಲನೆ ಕಾರ್ಯವು ನಡೆಯಿತು.

ಡಿಕೆಶಿ ಅವರು ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಆದಾಯ ತೆರಿಗೆ ಸಂಬಂಧ ಕೆಲವು ವ್ಯತ್ಯಾಸಗಳು ಕಂಡುಬಂದಿವೆ ಎಂದು ಬಿಜೆಪಿ ಅಭ್ಯರ್ಥಿ ಪರ ವಕೀಲರು ಆಕ್ಷೇಪಣೆ ಸಲ್ಲಿಸಿದರು.

ಇದಕ್ಕೆ ಡಿಕೆಶಿ ಪರ ವಕೀಲರು ವಿವರಣೆ ನೀಡಿದರು. ನಂತರದಲ್ಲಿ ನಾಮಪತ್ರವನ್ನು ಅಂಗೀಕಾರ ಮಾಡಿರುವುದಾಗಿ ಚುನಾವಣಾ ಅಧಿಕಾರಿ ಘೋಷಿಸಿದರು.