ಮಂಡ್ಯ: ಅಂಬರೀಶ್ ಅವರಿಗೆ ಗೌರವ ಸಿಕ್ಕಿದ್ದು ಒಬ್ಬ ನಾಯಕನಿಂದ ಅಲ್ಲಾ. ರಾಜ್ಯದ ಜನತೆ ಅವರಿಗೆ ಗೌರವ ಸ್ಥಾನಮಾನ ಕೊಟ್ಟಿರೋದು. ನಾನೇ ನಾನೇ ಎಂದು ಕುಮಾರಸ್ವಾಮಿ ಹೇಳುವುದು ಅವರಿಗೆ ಶೋಭೆ ತರಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಹರಿಹಾಯ್ದಿದ್ದಾರೆ.
ಅಂಬರೀಶ್ ಮೃತ ದೇಹ ಮಂಡ್ಯಕ್ಕೆ ತಂದ ವಿಚಾರದ ಬಗ್ಗೆ ಕುಮಾರಸ್ವಾಮಿ ಹೇಳಿಕೆಗೆ ಸುಮಲತಾ ಗರಂ ಆಗಿದ್ದರು.
ನಾನು ಅವರಿಗೆ ಏನು ಅನ್ಯಾಯ ಮಾಡಿದ್ದೀನಿ ಎಂದು ಈ ರೀತಿ ದ್ವೇಷ ಮಾಡುತ್ತಿದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದು, ದ್ವೇಷ ಮಾಡಿದ್ದು ನಾನಾ, ಅವರ ಎಂದು ಜನ ನೋಡಿಕೊಂಡು ಬಂದಿದ್ದಾರೆ. ಒಂದೊಂದು ದಿನ ಒಂದೊಂದು ಹೇಳಿಕೆ ಕೊಡುವ ಮೂಲಕ ದಾರಿ ತಪ್ಪಿಸಲು ಹೊರಟಿದ್ದಾರೆ ಎಂದು ಕಿಡಿಕಾರಿದರು.
ದ್ವೇಷದ ರಾಜಕಾರಣ ಅವರು ಮತ್ತು ಅವರ ಕಡೆಯವರು ಮಾಡಿಕೊಂಡು ಬಂದಿದ್ದಾರೆ. ಅಂಬರೀಶ್ ಹಾಗೂ ಅವರ ಕುಟುಂಬ ಪ್ರೀತಿಯಿಂದನೇ ಎಲ್ಲರನ್ನ ಗೆದ್ದಿರುವುದು. ಹಿಂದಿನ ರೆಕಾರ್ಡ್ ತೆಗೆದು ನೋಡಿಕೊಂಡು ಆಮೇಲೆ ಈ ರೀತಿ ಹೇಳಿಕೆ ನೀಡಲಿ ಎಂದು ಕಿಡಿಕಾರಿದರು.
ಅಂಬರೀಶ್ ಯಿಂದ ಏನು ಪ್ರಯೋಜನವಿಲ್ಲವೆಂದು ಹೆಚ್.ಡಿ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, 2018ರಲ್ಲಿ ಕುಮಾರಸ್ವಾಮಿ ಸಿಎಂ ಆಗೋಕೆ ಕಾರಣ ಯಾರು ಎಂದು ಪ್ರಶ್ನಿಸಿದರು. ಅಪಮಾನ ಆಗಿದ್ದಕ್ಕೆ ಅಂಬರೀಶ್ ಅಭಿಮಾನಿಗಳಿಂದ ತಕ್ಕ ಪಾಠ ಮಾಡಲಾಯಿತು.
ಕಾಂಗ್ರೆಸ್ ಗೆ ಅಂಬರೀಶ್ ಅಭಿಮಾನಿಗಳು ತಕ್ಕ ಪಾಠ ಕಲಿಸಿದ್ದಾರೆ. ಹಾಗಾಗಿಯೇ 2018ರಲ್ಲಿ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆದರು. ಆಗ ಮೊದಲನೇ ದಿನವೇ ನಮ್ಮ ಮನೆಗೆ ಬಂದು ಊಟ ಮಾಡಿಕೊಂಡು ಹೋದರು. ಮಂಡ್ಯಕ್ಕೆ ಈ ನಾಯಕರ ಕೊಡುಗೆ ಏನಿದೆ ಎಂದು ತೋರಿಸಲಿ ಎಂದು ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.