ಮನೆ ರಾಜ್ಯ ನಾಳೆ ಮಂಡ್ಯಕ್ಕೆ ಯೋಗಿ ಆದಿತ್ಯನಾಥ್ ಭೇಟಿ, ರೋಡ್‌ ಶೋ

ನಾಳೆ ಮಂಡ್ಯಕ್ಕೆ ಯೋಗಿ ಆದಿತ್ಯನಾಥ್ ಭೇಟಿ, ರೋಡ್‌ ಶೋ

0


ಮಂಡ್ಯ:ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಏ.26ರಂದು ಮಂಡ್ಯಕ್ಕೆ ಭೇಟಿ ನೀಡಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಪಿ.ಉಮೇಶ್ ತಿಳಿಸಿದರು.

Join Our Whatsapp Group


ಅಂದು ಬೆಳಗ್ಗೆ 11 ಗಂಟೆಗೆ ಆಗಮಿಸುವ ಯೋಗಿ ಆದಿತ್ಯನಾಥ್ ಅವರು ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಿಂದ ನಗರದಲ್ಲಿ ರೋಡ್‌ಶೋ ನಡೆಸಲಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ರಾಜೇಂದ್ರ ಪ್ರಸಾದ್ ರಸ್ತೆ (ಆರ್.ಪಿ. ರಸ್ತೆ), ಅಂಬೇಡ್ಕರ್ ವೃತ್ತ (ಕರ್ನಾಟಕ ಬಾರ್ ಸರ್ಕಲ್), ನೂರಡಿ ರಸ್ತೆ, ಹೊಸಹಳ್ಳಿ ವೃತ್ತ, ವಿಶ್ವೇಶ್ವರಯ್ಯ ರಸ್ತೆ (ವಿ.ವಿ. ರಸ್ತೆ) ಸೇರಿದಂತೆ ವಿವಿಧ ರಸ್ತೆಗಳಲ್ಲಿ ರೋಡ್‌ಶೋ ನಡೆಸಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುವರು.
ವಿ.ವಿ.ರಸ್ತೆ ಮೂಲಕ ಮಹಾವೀರ ವೃತ್ತ, ಮೈಸೂರು-ಬೆಂಗಳೂರು ಹೆದ್ದಾರಿ ಮಾರ್ಗವಾಗಿ ಸಿಲ್ವರ್ ಜ್ಯೂಬಿಲಿ ಪಾರ್ಕಿನವರೆಗೆ ರೋಡ್‌ಶೋ ನಡೆಸುವರು. ಬಳಿಕ ಸಿಲ್ವರ್ ಜ್ಯೂಬಿಲಿ ಪಾರ್ಕಿನಲ್ಲಿ ಕಾರ‌್ಯಕರ್ತರು ಹಾಗೂ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುವರು.
ಏ. 25ರಂದೇ ಬೆಂಗಳೂರಿಗೆ ಆಗಮಿಸುವ ಯೋಗಿ ಆದಿತ್ಯ ನಾಥ್ ಅವರು,ರಾತ್ರಿ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನಕ್ಕೆ ಆಗಮಿಸಿ ವಾಸ್ತವ್ಯ ಹೂಡಲಿದ್ದು, ಏ.26ರಂದು ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಕಾರ್ಯಕಾರಣಿ ಸದಸ್ಯ ಡಾ. ಸಿದ್ದರಾಮಯ್ಯ,ಮಂಡ್ಯ ಕ್ಷೇತ್ರದ ವೀಕ್ಷಕ ಡಾ.ಈ.ಸಿ.ನಿಂಗರಾಜುಗೌಡ ಹಾಜರಿದ್ದರು.