ನವದೆಹಲಿ: ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿರ್ಬಂಧ ವಿಧಿಸಿ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿರುವ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಹಿಜಾಬ್ ಪ್ರಕರಣ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ಗೆ ವಿದ್ಯಾರ್ಥಿನಿ ಐಶಾತ್ ಶಿಫಾ ಮನವಿ ಮಾಡಿದ್ದರು. ಅರ್ಜಿ ತುರ್ತು ವಿಚಾರಣೆಗೆ ಸಿಜೆಐ ರಮಣ ನಿರಾಕರಿಸಿದ್ದು, ಹಿಜಾಬ್ ಗೂ ಪರೀಕ್ಷೆಗೂ ಯಾವುದೇ ಸಂಬಂಧವಿಲ್ಲ. ವಿಷಯಗಳನ್ನು ಅತಿರಂಜಿತಗೊಳಿಸಬೇಡಿ ಎಂದು ಹೇಳಿದ್ದಾರೆ.
ಅರ್ಜಿದಾರ ವಿದ್ಯಾರ್ಥಿನಿ ಪರ ದೇವದತ್ತ ಕಾಮತ್ ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದರು.